ಮಳೆ-ಗಾಳಿ: 37 ಮನೆಗಳಿಗೆ ಹಾನಿ

ನಾಲ್ಕು ಎಕರೆ ಸಪೋಟ ತೋಟಕ್ಕೆ ಹಾನಿ•ಧರೆಗುರಳಿದ 100 ವಿದ್ಯುತ್‌ ಕಂಬಗಳು

Team Udayavani, May 23, 2019, 11:22 AM IST

23-May-8

ಹರಪನಹಳ್ಳಿ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಗಾಳಿಗೆ ಹಾರಿ ಹೋಗಿರುವ ಮನೆಗಳ ಮೇಲ್ಛಾವಣೆಗಳು

ಹರಪನಹಳ್ಳಿ: ತಾಲೂಕಿನ ಹಲವೆಡೆ ಮಂಗಳವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಒಟ್ಟು 37 ಮನೆಗಳು ಭಾಗಶಃ ಹಾನಿಗೊಳಗಾಗಿದ್ದು, 4 ಎಕರೆ ಸಪೋಟ ತೋಟ ಹಾನಿಯಾಗಿದೆ. ಕೆಲವೆಡೆ ಮರಗಳು ಧರೆಗುರಿಳಿದ ವಿದ್ಯುತ್‌ ಸಂಪರ್ಕ ಕಡಿತಗೊಂಡು ಜನ ಜೀವನ ಅಸ್ತವ್ಯಸ್ತವಾಗಿದೆ.

ತೋಗರಿಕಟ್ಟೆ ಗ್ರಾಮದಲ್ಲಿ 7 ಮನೆ, ಕೆಂಗನಹೊಸೂರು-1, ನಂದಿಬೇವೂರು-1, ನಂದಿಬೇವೂರು ತಾಂಡದಲ್ಲಿ ಭಾಗಶಃ ಹಾನಿ-22, ತೀವ್ರ ಹಾನಿ-5 ಸೇರಿ 27, ಸಾಸ್ವಿಹಳ್ಳಿ-1 ಸೇರಿದಂತೆ ಒಟ್ಟು 37 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಇದರಲ್ಲಿ 5 ಮನೆಗಳು ತೀವ್ರ ಹಾನಿಯಾಗಿವೆ. 1.85 ಲಕ್ಷರೂ ಅಂದಾಜು ನಷ್ಟವಾಗಿದೆ. ತೊಗರಿಕಟ್ಟೆ ಗ್ರಾಮದಲ್ಲಿ 4 ಎಕರೆ ಸಪೋಟ ತೋಟ ಹಾಳಾಗಿದೆ. ಇ-ಬೇವಿನಹಳ್ಳಿ ಗ್ರಾಮದ ಯಡಿಹಳ್ಳಿ ಬಸವರಾಜ್‌ ಎಂಬುವವರ ರೇಷ್ಮೆ ಬೆಳೆ ಬೆಳೆಯುವ ಮನೆ ಮೇಲ್ಛಾವಣೆ ಹಾರಿ ಹೋಗಿ ಸಂಪೂರ್ಣ ಹಾಳಾಗಿದೆ. ಸ್ಥಳಕ್ಕೆ ರೇಷ್ಮೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಸುಮಾರು 4 ಲಕ್ಷ ರೂ. ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಪಟ್ಟಣದ ಆಚಾರ್ಯ ಬಡಾವಣೆಯಲ್ಲಿ ವಿದ್ಯುತ್‌ ತಂತಿಯ ಮೇಲೆ ಬೃಹತ್‌ ಮರವೊಂದು ಬಿದ್ದ ಪರಿಣಾಮ ವಿದ್ಯುತ್‌ ಸಂಪರ್ಕ ಕಡಿತಗೊಂಡಿತ್ತು. ಪಟ್ಟಣದ ಪ್ರತಿಷ್ಠಿತ ಬಡಾವಣೆ ಎಂದು ಕರೆಸಿಕೊಳ್ಳುವ ಆಚಾರ ಬಡಾವಣೆಯಲ್ಲಿ ಮುಜರಾಯಿ ಸಚಿವ ಪಿ.ಟಿ. ಪರಮೇಶ್ವರನಾಯ್ಕ, ಶಾಸಕ ಜಿ.ಕರುಣಾಕರರೆಡ್ಡಿ ವಾಸವಿದ್ದು, ಮಂಗಳವಾರ ಸಂಜೆ 4 ಗಂಟೆಯಿಂದ ಬುಧವಾರ ಬೆಳಿಗ್ಗೆ 11ರ ವರೆಗೆ ಇಲ್ಲಿ ನಿವಾಸಿಗಳು ವಿದ್ಯುತ್‌ ಇಲ್ಲದೇ ಪರದಾಟ ನಡೆಸುವಂತಾಗಿತ್ತು. ರಾತ್ರಿವಿಡೀ ಸೆಖೆಯಿಂದ ನಿದ್ದೆ ಇಲ್ಲದೇ ಕೆಲವರು ಜಾಗರಣೆ ಮಾಡಿದ್ದಾರೆ.

ಬೆಸ್ಕಾಂ ಇಲಾಖೆಯ ಹರಪನಹಳ್ಳಿ ಉಪ ವಿಭಾಗದ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಬೀಸಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ವಿವಿಧ ಹಳ್ಳಿಗಳಲ್ಲಿ 100 ವಿದ್ಯುತ್‌ ಕಂಬಗಳು ಮುರಿದಿದ್ದು, 85ಕ್ಕೂ ಅಧಿಕ ಕಂಬಗಳು ಬಾಗಿರುತ್ತವೆ. 6 ವಿದ್ಯುತ್‌ ಪರಿವರ್ತಕಗಳು ವಿಫಲವಾಗಿವೆ. ಇದರಿಂದ ವಿದ್ಯುತ್‌ ಸರ‌ಬರಾಜಿನಲ್ಲಿ ವ್ಯತ್ಯಯವಾಗಿದೆ. ತಾಲೂಕಿನ ನಾಗರಕೊಂಡ, ಮತ್ತಿಹಳ್ಳಿ ಗ್ರಾಮಗಳ ಸುತ್ತಮುತ್ತ 5-6 ಹಳ್ಳಿಗಳು ಹಾಗೂ ನಂದಿಬೇವೂರು ತಾಂಡ, ಕೂಲಹಳ್ಳಿ, ಬಾಗಳಿ ಗ್ರಾಮಗಳ ಸುತ್ತಮುತ್ತ 8ರಿಂದ 10 ಹಳ್ಳಿಗಳಿಗೆ ರಾತ್ರಿ ವೇಳೆ ವಿದ್ಯುತ್‌ ಸರ‌ಬರಾಜಿನಲ್ಲಿ ವ್ಯತ್ಯಯವಾಗಿದೆ. ಬುಧವಾರ ಎಲ್ಲ ಗ್ರಾಮಗಳಿಗೂ ವಿದ್ಯುತ್‌ ಸರಬರಾಜು ನೀಡಲಾಗಿದೆ. ಮಳೆಯಿಂದ 15 ಲಕ್ಷ ರೂ. ಹಾನಿಯಾಗಿರುತ್ತದೆ ಎಂದು ಬೆಸ್ಕಾಂ ಇಲಾಖೆ ಎಇಇ ಜಯ್ಯಪ್ಪ ತಿಳಿಸಿದ್ದಾರೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.