ರಾಣಿ ಚೆನ್ನಮ್ಮ ವಿಜಯೋತ್ಸವದ ಭವ್ಯ ಮೆರವಣಿಗೆ


Team Udayavani, Nov 14, 2019, 1:36 PM IST

14-November-16

ಹರಪನಹಳ್ಳಿ: ಬ್ರಿಟಿಷರ ವಿರುದ್ಧ ಪ್ರಥಮವಾಗಿ ಹೋರಾಡಿ ಗೆಲವು ಸಾಧಿಸಿದ್ದ ದಿಟ್ಟ ಮಹಿಳೆ ರಾಣಿ ಚೆನ್ನಮ್ಮ ಅವರನ್ನು ಕೇವಲ ಪಂಚಮಸಾಲಿ ಸಮಾಜಕ್ಕೆ ಸೀಮಿತಗೊಳಿಸದೆ ಜ್ಯಾತ್ಯಾತೀತ ವೀರ ಮಹಿಳೆಯಾಗಿ ರೂಪಿಸುವಲ್ಲಿ ಸಮಾಜದ ಮುಖಂಡರು ಪ್ರಯತ್ನಿಸಬೇಕು ಎಂದು ವೀರಶೈವ ಪಂಚಮಸಾಲಿ ಸಂಘದ ತಾಲೂಕು ಖಜಾಂಚಿ ಶಶಿಧರ್‌ ಪೂಜಾರ್‌ ಸಲಹೆ ನೀಡಿದರು.

ತಾಲೂಕಿನ ಕಂಚಿಕೆರೆ ಗ್ರಾಮದಲ್ಲಿ ಗುರುವಾರ ವೀರಶೈವ ಪಂಚಮಸಾಲಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೇವಲ ಒಂದು ಸಮುದಾಯದವರು ಸೇರಿ ಆಚರಿಸುವ ಜಯಂತಿ, ಉತ್ಸವಗಳಿಂದ ಅವರ ಆದರ್ಶ, ತ್ಯಾಗ ಬಲಿದಾನಗಳು ಪಸರಿಸದು. ಆದ್ದರಿಂದ ಸಮಾಜದ ಇತರರನ್ನು ಮನವೂಲಿಸಿ ಪರಸ್ಪರ ಸಭೆ, ಸಮಾರಂಭದಲ್ಲಿ ಭಾಗಿಯಾಗಿ ಸಂತ, ಇತಿಹಾಸಕಾರರ ಧೈರ್ಯ, ಸ್ವಾಭಿಮಾನದ ಗುಣಗಳನ್ನು ತಿಳಿಸಬೇಕು ಕೆಲಸ ನಡೆಯಬೇಕು ಎಂದರು.

ಇತ್ತೀಚೆಗೆ ಇತಿಹಾಸಕಾರರನ್ನು ಅವರ ಸಾಧನೆಗಳನ್ನು ತಿರುಚುವ ಕೆಲಸ ನಡೆಯುತ್ತಿದೆ. ಆಧುನಿಕತೆಗೆ ಮಾರುಹೋಗಿ ಐತಿಹಾಸಿಕ, ಸಾಂಸ್ಕೃತಿಕವಾಗಿ ವಿಮುಕ್ತಿ ಪಡೆದು ಮೊಬೈಲ್‌ ದಾಸರಾಗುತ್ತಿದ್ದರೆ, ಕುಟುಂಬದ ಹಿರಿಯರು ಜಾಗೃತರಾಗಿ ಹೋರಾಟಗಾರರ ಆದರ್ಶಗಳನ್ನು ಮಕ್ಕಳಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.

ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿ‌ನಿ ಮಾತನಾಡಿ, ಜಯಂತಿ ಆಚರಣೆಗಳನ್ನು ಇಂದಿನ ಪೀಳಿಗೆ ವೈಯಕ್ತಿಕ ಜೀವನ ಹಾಗೂ ಸಾಮಾಜಿಕವಾಗಿ ಅಳವಡಿಸಿಕೊಂಡರೆ ಜಯಂತಿ ಆಚರಣೆಗೆ ಮಹತ್ವ ಸಿಗಲಿದೆ. ನಡೆ, ನುಡಿಯಲ್ಲಿ ಮಹಾತ್ಮರ ಆದರ್ಶ, ತ್ಯಾಗ, ಛಲ ದೇಶದ ಅಭಿವೃದ್ಧಿಗಾಗಿ ಬಳಸಿಕೊಂಡರೆ ಸಾರ್ಥಕತೆ ದೊರೆಯಲಿದೆ ಎಂದರು.

ಸಂಘದ ತಾಲೂಕು ಅಧ್ಯಕ್ಷ ಪಾಟೀಲ್‌ ಬೆಟ್ಟನಗೌಡ ಮಾತನಾಡಿ, ಆಚರಿಸುವ ಕಾರ್ಯಕ್ರಮದ ಉದ್ದೇಶಗಳು ಅರ್ಥಪೂರ್ಣವಾಗಿರಬೇಕು, ಸಾಧನೆಗಳಿಗೆ ಒಳಪಟ್ಟ ಪ್ರತಿಯೊಬ್ಬ ಮಹನೀಯರ ಆದರ್ಶಗಳನ್ನು ಸಮಾಜದ ಉದ್ದಗಲಕ್ಕೂ ಪಸರಿಸಬೇಕು ಎಂದರು. ರಾಣಿ ಚೆನ್ನಮ್ಮ ವಿಜಯೋತ್ಸವದ ಅಂಗವಾಗಿ ವಿವಿಧ ವಾದ್ಯಗೋಷ್ಠಿಗಳು, ಜಾನಪದ ಕಲಾತಂಡಗಳ ಮೂಲಕ ಚನ್ನಮ್ಮ ಅವರ ಭಾವಚಿತ್ರವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಆಚರಿಸಿತು. ಬೈಕ್‌ ರ್ಯಾಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರಭಾ ಅಜ್ಜಣ್ಣ, ಷಣ್ಮುಖಪ್ಪ, ಉಮಾಕಾಂತ್‌, ಎಂ.ಶಿವಾನಂದಪ್ಪ, ಅಂಜಿನಪ್ಪ, ಮಹಿಳ ಘಟಕದ ಅಧ್ಯಕ್ಷೆಶ್ರೀಮತಿ, ಕೆ.ಲಿಂಗರಾಜ, ಕೆಂಚಪ್ಪ, ಶಿವಕುಮಾರ್‌, ಬಿ.ಕೆ.ಕೊಟ್ರೇಶ್‌, ನಾಗರಾಜ್‌, ಶಿವಕುಮಾರ್‌, ಸಿದ್ದಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.