ಸಮಾನತೆಗೆ ಅಂತರ್ಜಾತಿ ವಿವಾಹವೇ ಮದ್ದು

ಚುನಾವಣೆಗೆೆ ಅಂತರ್ಜಾತಿ ವಿವಾಹ ಕಡ್ಡಾಯವಾಗಲಿ •ವೈಚಾರಿಕತೆಯಿಂದಲೇ ಸಮಗ್ರ ಏಳಿಗೆ

Team Udayavani, Aug 19, 2019, 1:31 PM IST

19-Agust-26

ಹರಿಹರ: ನಗರದಲ್ಲಿ ಭಾನುವಾರ ದಸಂಸ (ಪ್ರೊ| ಬಿ.ಕೃಷ್ಣಪ್ಪ ಸ್ಥಾಪಿತ) ಆಯೋಜಿಸಿದ್ದ ದಲಿತ ಸಮಾವೇಶವನ್ನು ಚಿಂತಕ ಪ್ರೊ| ಕೆ.ಎಸ್‌. ಭಗವಾನ್‌ ಉದ್ಘಾಟಿಸಿದರು.

ಹರಿಹರ: ಭಾರತದಲ್ಲಿ ಸಮಾನತೆ ಸಾಧಿಸಲು ಅಂತರ್ಜಾತಿ ವಿವಾಹಗಳೇ ಮದ್ದು. ಸಮಾಜದಲ್ಲಿ ಎಲ್ಲರೂ ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಬೇಕು ಎಂದು ಸಾಹಿತಿ, ವಿಚಾರವಾದಿ ಪ್ರೊ| ಕೆ.ಎಸ್‌. ಭಗವಾನ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದ ಗುರುಭವನದಲ್ಲಿ ದಸಂಸ (ಪ್ರೊ| ಬಿ. ಕೃಷ್ಣಪ್ಪ ಸ್ಥಾಪಿತ) ಭಾನುವಾರ ಆಯೋಜಿಸಿದ್ದ ಹಿಂದುಳಿದ, ಶೋಷಿತರ ಹಕ್ಕುಗಳ ಜಾಗೃತಿಗಾಗಿ ದಲಿತ ಸಮಾವೇಶ, ಡಾ| ಅಂಬೇಡ್ಕರ್‌ರ 128, ಪ್ರೊ| ಬಿ. ಕೃಷ್ಣಪ್ಪರ 81ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆಧುನಿಕ ಯುವಕ-ಯುವತಿಯರು ಜಾತಿಭೇದ ಮರೆತು ತಮಗೆ ಸೂಕ್ತ ಎನ್ನಿಸಿದವರನ್ನು ವಿವಾಹವಾಗುತ್ತಿರುವುದು ಸ್ವಾಗತಾರ್ಹ. ಇಂತಹ ವಿವಾಹಗಳಿಂದ ಸಮಜದ ತಳಮಟ್ಟದಿಂದ ಜಾತೀಯತೆ ಮೂಲೋತ್ಪಾಟನೆಯಾಗುತ್ತದೆ. ಸರ್ಕಾರಗಳು ಅಂತರ್ಜಾತಿ ವಿವಾಹಿತರಿಗೆ ಹೆಚ್ಚಿನ ಪ್ರೋತ್ಸಾಹ, ಸೌಕರ್ಯ ಘೋಷಿಸಬೇಕು ಎಂದರು.

ಅಂತರ್ಜಾತಿ ವಿವಾಹ ಕಡ್ಡಾಯಗೊಳಿಸಬೇಕು: ದೇಶದಲ್ಲಿ ಅಂತರ್ಜಾತಿ ವಿವಾಹವಾದವರು ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಕಾನೂನು ತಂದರೆ ದೇಶದಲ್ಲಿ ಜಾತೀಯತೆ ಅಳಿಸಲು ಸಾಧ್ಯವಿದೆ.

ಮನುಷ್ಯನನ್ನು ಮನುಷ್ಯನ ರೀತಿ ಕಾಣದಿರುವ ಸಾಮಾಜಿಕ ಅಸಮಾನತೆ ಬಗ್ಗೆ ಅಂಬೇಡ್ಕರ್‌ ತೀವ್ರ ನೊಂದಿದ್ದರು. ಅಂತರ್ಜಾತಿ ವಿವಾಹವಾದವರಿಗೆ ಮಾತ್ರ ಚುನಾವಣೆಗೆ ನಿಲ್ಲುವ ಕಾನೂನು ರಚಿಸಬೇಕು. ಆ ಮೂಲಕ ಜಾತೀಯತೆ ತಾನಾಗಿ ನಾಶವಾಗುತ್ತದೆ ಎಂಬ ಇಂಗಿತ ಅವರದ್ದಾಗಿತ್ತು ಎಂದರು.

ಸ್ವಾತಂತ್ರ್ಯ ಲಭಿಸಿ 72 ವರ್ಷಗಳಾದರೂ ದೇಶದಲ್ಲಿ ಸಾಮರಸ್ಯತೆ, ಸಮಾನತೆ ಮೈಗೂಡಿಲ್ಲ. ಶಿಕ್ಷಣ, ಸಂಘಟನೆ, ಹೋರಾಟದಿಂದ ಮಾತ್ರ ಈ ಆದರ್ಶ ಕಾಣಲು ಸಾಧ್ಯ. ವಿದ್ಯಾವಂತ ಯುವಕರು ತಾವು ಜಾಗೃತಿ ಹೊಂದಿ ಸುಮ್ಮನಾಗದೆ, ಇತರೆ ಯುವಕ, ಯುವತಿಯರಲ್ಲೂ ಜಾಗೃತಿ ಮೂಡಿಸಬೇಕು ಎಂದರು.

ವೈಚಾರಿಕತೆಯಿಂದ ಮಾತ್ರ ಪ್ರಗತಿ: ಕುವೆಂಪು ಸೇರಿದಂತೆ ಹಲವರು ತಮ್ಮ ಸಾಹಿತ್ಯದಲ್ಲಿ ಜಾತೀಯತೆ, ಮೌಡ್ಯ ವಿರೋಧಿಸಿ ವೈಚಾರಿಕತೆ ಪ್ರತಿಪಾದಿಸಿದ್ದಾರೆ. ಆದರೂ ಜನರಲ್ಲಿ ಜಾತಿ-ಧರ್ಮಗಳ ಮೂಲಭೂತವಾದಿತನ ದೂರವಾಗಿಲ್ಲ. ಜನರಲ್ಲಿ ಮೌಡ್ಯತೆ ಬೆಳೆಸುವಲ್ಲಿ ಕೆಲ ಮಾಧ್ಯಮಗಳ ಪಾತ್ರವೂ ದೊಡ್ಡದಿದೆ ಎಂದರು.

ಆಧುನಿಕ ಕಾಲಘಟ್ಟದಲ್ಲೂ ಸಮಾಜದಲ್ಲಿ ಮೂಢನಂಬಿಕೆಗಳು ಮೆರೆಯುತ್ತಿರುವುದು ದುರದೃಷ್ಟಕರ. ಪ್ರತಿಯೊಬ್ಬರೂ ವೈಚಾರಿಕ ಪ್ರಜ್ಞೆ ಬೆಳೆಸಿಕೊಂಡರೆ ಮಾತ್ರ ಸಾಮಾಜಿಕ, ಆರ್ಥಿಕ ಪ್ರಗತಿ ಸಾಧ್ಯ. ಇದು ಸಂವಿಧಾನಬದ್ಧ ಕರ್ತವ್ಯವೂ ಸಹ ಆಗಿದೆ ಎಂದರು.

19ನೇ ಶತಮಾನದಲ್ಲಿ ಮಹಾತ್ಮ ಜ್ಯೋತಿಬಾ ಫುಲೆ ಹಾಗೂ ಸಾವಿತ್ರಿಬಾಯಿ ಫುಲೆ ಬಡ ದಲಿತರ ಶಿಕ್ಷಣಕ್ಕೆ ತಮ್ಮ ಸಂಪತ್ತನ್ನು ಧಾರೆ ಎರೆದರು. ಡಾ.ಅಂಬೇಡ್ಕರ್‌ ಸಹ ಫುಲೆಯವರ ಧನ ಸಹಾಯದಿಂದಲೆ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಸಾಧ್ಯವಾಯಿತು. ಫುಲೆಯವರ ಮನೋಭಾವ ಇಂದಿನ ಬಲಿತ ದಲಿತರು ಮೈಗೂಡಿಸಿಕೊಳ್ಳಬೇಕೆಂದು ಪ್ರೊ| ಕೆ.ಎಸ್‌.ಭಗವಾನ್‌ ಹೇಳಿದರು.

ತಮ್ಮ ಒಡನಾಡಿ, ದಸಂಸ ಸ್ಥಾಪಕ ಪ್ರೊ| ಬಿ. ಕೃಷ್ಣಪ್ಪರನ್ನು ಸ್ಮರಿಸಿದ ಅವರು, ನಗರದ ಹೊರವಲಯದ ಬೈಪಾಸ್‌ ಬಳಿಯ ಕೃಷ್ಣಪ್ಪರ ಸ್ಮಾರಕವನ್ನು ವೀಕ್ಷಿಸಿದೆ. ಸುಂದರವಾದ ಸ್ಮಾರಕ ನೋಡಿ ಸಂತಸವಾಯಿತು. ಅವರ ಹೆಸರು ಸದಾ ಉಳಿಯುವಂತಹ ಕೆಲಸ ಆಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ದಸಂಸ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಮಾತನಾಡಿ, ದಲಿತ ಸಂಘಟನೆಗಳು ವಿಘಟನೆಯಾಗಿವೆ ಎಂಬ ಆತಂಕವನ್ನು ಹಲವರು ವ್ಯಕ್ತಪಡಿಸುತ್ತಾರೆ. ಆದರೆ ಯಾವುದೇ ಸಂಘಟನೆ ಸ್ಥಾಪಿಸಿದರೂ ಅದು ದಲಿತ ಎಂಬ ಪದವನ್ನು ಹೊಂದಿರುತ್ತದೆ. ದಲಿತ ಪದದ ಶಕ್ತಿಯನ್ನು ಅದು ಬಿಂಬಿಸುತ್ತದೆ ಎಂದರು.

ದಸಂಸ ತಾಲೂಕು ಸಂಚಾಲಕ ಪಿ.ಜೆ. ಮಹಾಂತೇಶ್‌ ಅಧ್ಯಕ್ಷತೆ ವಹಿಸಿದ್ದರು. ಬುಳಸಾಗರ ಸಿದ್ಧರಾಮಣ್ಣ, ಮೈಸೂರಿನ ಚಿಂತಕರಾದ ಟಿ.ಸತೀಶ್‌ ಜವರೇಗೌಡ, ಎಂ.ಬಿ.ನಾಗಣ್ಣ ಗೌಡರು, ಚೆನ್ನಗಿರಿಯ ಚಿತ್ರಲಿಂಗಪ್ಪ, ಚೌಡಪ್ಪ ಸಿ., ಮಾರುತಿ ಪಿ., ಮಂಜುನಾಥ ಡಿ.ಎಂ., ಸಿರಿಗೆರೆ ರಮೇಶ್‌, ಹಳದಪ್ಪ ವಿ.ಬಿ., ಅಂಜಿನಪ್ಪ, ಕೊಕ್ಕನೂರು ಮಂಜುನಾಥ, ಬನ್ನಿಕೋಡು ಯೋಗೀಶ್‌, ಉಪನ್ಯಾಸಕಿ ನಳಿನಿ ಇತರರಿದ್ದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.