ಲಿಂಗ ತಾರತಮ್ಯ ನಿವಾರಣೆಗೆ ಶ್ರಮಿಸಿ

ಗಂಡು-ಹೆಣ್ಣಿಗೆ ಸಮಾನ ಅವಕಾಶ, ಗೌರವ, ಸ್ಥಾನಮಾನ ದೊರಕಲಿ

Team Udayavani, Dec 14, 2019, 5:31 PM IST

14-December-29

ಹರಿಹರ: ಮಾನವ ಸಮಾಜಕ್ಕೆ ಕಳಂಕವಾಗಿರುವ ಲಿಂಗ ತಾರತಮ್ಯ ನಿವಾರಣೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಇಲ್ಲಿನ ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಬಿ.ಸುಮಲತಾ ಹೇಳಿದರು.

ನಗರದ ಮರಿಯ ನಿವಾಸ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ಮಾನವ ಹಕ್ಕುಗಳ ದಿನಾಚರಣೆ ಹಾಗೂ ಬೇಟಿ ಬಚಾವೋ, ಬೇಟಿ ಪಢಾವೂ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಲಿಂಗ ತಾರತಮ್ಯ ನಿವಾರಣೆಯ ಗುರಿಯೊಂದಿಗೆ ಭಾರತ ಸರಕಾರ 2015ರಲ್ಲಿ ಈ ಮಹತ್ವದ ಯೋಜನೆ ಆರಂಭಿಸಿದೆ ಎಂದರು.

ವಿಶ್ವಸಂಸ್ಥೆ 1948ರಿಂದಲೂ ಮಾನವ ಹಕ್ಕುಗಳ ರಕ್ಷಣೆಗಾಗಿ ಸದಸ್ಯ ರಾಷ್ಟ್ರಗಳಲ್ಲಿ ಜಾಗೃತಿ ಮೂಡಿಸುತ್ತಿದೆ. ಭಾರತದಲ್ಲಿ ಮಾನವ ಹಕ್ಕುಗಳ ರಾಷ್ಟ್ರೀಯ ಆಯೋಗವನ್ನು 1993, ರಾಜ್ಯ ಆಯೋಗವನ್ನು 2005ರಲ್ಲಿ ಆರಂಭಿಸಲಾಗಿದೆ. ಮಾನವ ಹಕ್ಕುಗಳನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ಸೂಕ್ತ ವೇದಿಕೆಗೆ ದೂರು ನೀಡಬೇಕೆಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಆರೋಗ್ಯ ಮಾತೆ ಚರ್ಚ್‌ ಫಾ| ಅಂತೋನಿ ಪೀಟರ್‌ ಮಾತನಾಡಿ, ಹೆಣ್ಣು, ಗಂಡು ಎಂಬ ಭೇದಭಾವ ಸರಿಯಲ್ಲ. ಇಬ್ಬರಿಗೂ ಸಮಾನ ಅವಕಾಶ, ಗೌರವ, ಸ್ಥಾನಮಾನ ನೀಡುವುದು ಎಲ್ಲಾ ಪೋಷಕರ ಕರ್ತವ್ಯವಾಗಿದೆ ಎಂದರು.

ವಕೀಲರ ಸಂಘದ ಅಧ್ಯಕ್ಷ ನಾಗರಾಜು ಹಲವಾಗಲು ಮಾತನಾಡಿ, ಹೆಣ್ಣು ಹುಟ್ಟಿದರೆ ಕೀಳರಿಮೆ ಅನುಭವಿಸುವ ಜನರು ಈಗಲೂ ಇದ್ದಾರೆ. ಹಲವರು ಹೆಣ್ಣೆಂದು ತಿಳಿದರೆ ಗರ್ಭಪಾತದಂತಹ ಹೀನ ಕೃತ್ಯವನ್ನೂ ಮಾಡುತ್ತಾರೆ. ಹೆಣ್ಣಿರಲಿ, ಗಂಡಿರಲಿ ಇಬ್ಬರಿಗೂ ಕಾನೂನಿನಡಿ ಸಮಾನ ಸ್ಥಾನಮಾನವಿದೆ ಎಂದರು.

ಬಿಇಒ ಬಸವರಾಜಪ್ಪ ಯು. ಮಾತನಾಡಿ, ಬೇಟಿ ಬಚಾವೋ, ಬೇಟಿ ಪಢಾವೋ ಅಭಿಯಾನ ಆರಂಭವಾದಂದಿನಿಂದ ಶಿಕ್ಷಣ ಇಲಾಖೆಯಲ್ಲಿ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಸರಕಾರಿ ಶಾಲಾ, ಕಾಲೇಜುಗಳಲ್ಲಿ ಶುಲ್ಕ ರಹಿತ ಶಿಕ್ಷಣ ನೀಡಲಾಗುತ್ತಿದೆ ಎಂದರು.

ಎಪಿಪಿ ಶಂಷೀರ್‌ ಅಲಿಖಾನ್‌, ಸಂಪನ್ಮೂಲ ವ್ಯಕ್ತಿ ಕೊಕ್ಕನೂರು ಸಿಆರ್‌ಪಿ ಬಸವರಾಜಯ್ಯ, ವಕೀಲ ಜಾರ್ಜ್‌ ಮಾತನಾಡಿದರು. ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.