ಸಂತ್ರಸ್ತರ ಕಷ್ಟಕ್ಕೆ ಅಧಿಕಾರಿಗಳು ಸ್ಪಂದಿಸಲಿ
ಪರಿಹಾರ ನೀಡುವಲ್ಲಿ ವಿಳಂಬವಾದರೆ ತಮ್ಮ ಗಮನಕ್ಕೆ ತರಲು ಜನತೆಗೆ ಜಿಲ್ಲಾಧಿಕಾರಿ ಸೂಚನೆ
Team Udayavani, Oct 31, 2019, 11:39 AM IST
ಹರಿಹರ: ಅತಿವೃಷ್ಟಿ ಸಂತ್ರಸ್ತರ ಸಂಕಷ್ಟಗಳಿಗೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.
ರಾಜ್ಯ ಸಹಕಾರಿ ಪತ್ತಿನ ಸಹಕಾರಿ ಸಂಘದ ಜಿಲ್ಲಾ ಘಟಕದಿಂದ ನಗರದ ಗುರುಭವನದಲ್ಲಿ ಬುಧವಾರ ಅತಿವೃಷ್ಟಿ ಸಂತ್ರಸ್ತರ ನೆರವಿಗೆ ಚಾಪೆ, ಬಟ್ಟೆ, ಸೀರೆ, ಪಂಜೆಯನ್ನೊಳಗೊಂಡ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ಈಗಾಗಲೆ ಸೂಚಿಸಿರುವಂತೆ ಅಧಿಕಾರಿಗಳು ಅತಿವೃಷ್ಟಿ ಪ್ರದೇಶಗಳಲ್ಲಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬವಿಲ್ಲದೆ ಕೈಗೊಳ್ಳಬೇಕು. ಸಹಜ ಜನಜೀವನಕ್ಕೆ ಯಾವುದೇ ತೊಂದರೆಯಾಗಬಾರದು ಎಂದರು.
ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ಸಕಾಲಕ್ಕೆ ಮಳೆಯಾಗದಿದ್ದರೂ ಒಟ್ಟು ಮಳೆ ವಾಡಿಕೆಗಿಂತ ಹೆಚ್ಚಾಗಿದೆ. ಇತ್ತೀಚಿಗೆ ಸುರಿದ ಮಳೆಯ ರಭಸಕ್ಕೆ ಜಿಲ್ಲೆಯ ವಿವಿಧೆಡೆ 1108 ಮನೆಗಳು ಜಖಂಗೊಂಡಿವೆ. 4000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಭತ್ತ, ಮೆಕ್ಕೆ ಜೋಳ, ವಿಳ್ಯದೆಲೆ, ಹತ್ತಿ ಮುಂತಾದ ಬೆಳೆಗಳು ಹಾನಿಗೀಡಾಗಿದ್ದು, ಹಂತಹಂತವಾಗಿ ಪರಿಹಾರ ಕಾರ್ಯ ಕೈಗೊಳ್ಳಲಾಗಿದೆ ಎಂದರು.
ಎನ್ಡಿಆರ್ಎಫ್ ನಿಯಮದ ಅನ್ವಯ ಹಾನಿಗೀಡಾದ ಮನೆಗಳನ್ನು ಮೂರು ವಿಭಾಗ ಮಾಡಲಾಗಿದ್ದು, ಸಂಪೂರ್ಣ ಹಾನಿಯಾದ ಎ ವಿಭಾಗದ 5 ಮನೆಗಳಿಗೆ ತಲಾ 5 ಲಕ್ಷ ರೂ., ಭಾಗಶಃ ಹಾನಿಗೀಡಾಗಿ ವಾಸ ಯೋಗ್ಯವಾಗಿಲ್ಲದ ಬಿ ವಿಭಾಗದ 7 ಮನೆಗಳಿಗೆ ತಲಾ 1 ಲಕ್ಷ ರೂ., ಭಾಗಶಃ ಹಾನಿಗೀಡಾಗಿ ವಾಸಯೋಗ್ಯವಾಗಿಲ್ಲದ ಸಿ ವಿಭಾಗದ 1096 ಮನೆಗಳಿಗೆ ತಲಾ 50 ಸಾವಿರ ರೂ ಪರಿಹಾರ ನಿಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯ ವಿವಿಧ ತಾಲೂಕುಗಳ ಹಾನಿಗೊಳಗಾದ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದೇನೆ. ತಾಲೂಕಿನ ಅಧಿಕಾರಿಗಳಿಗೆ ತಕ್ಷಣ ಪರಿಹಾರ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಪರಿಹಾರ ನೀಡುವಲ್ಲಿ ಅಧಿಕಾರಿಗಳು ವಿಳಂಬ ಮಾಡಿದರೆ ಸಂತ್ರಸ್ತರು ತಕ್ಷಣ ತಮ್ಮ ಗಮನಕ್ಕೆ ತರಬೇಕೆಂದು ಕೋರಿದರು. ತಹಶೀಲ್ದಾರ್ ಕೆ.ಬಿ ರಾಮಚಂದ್ರಪ್ಪ, ಪೌರಾಯುಕ್ತೆ ಲಕ್ಷ್ಮೀ, ಪಾಲಾಕ್ಷಪ್ಪ, ನಗರಸಭಾ ಸದಸ್ಯ ಆಟೋ ಹನುಮಂತಪ್ಪ, ಭರಮಪ್ಪ, ರೇವಣಸಿದ್ದಪ್ಪ, ಚಂದ್ರಪ್ಪ, ಎಂ.ಉಮ್ಮಣ್ಣ, ಬೊಮೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ