ಓದು ಯಾವುದೇ ವರ್ಗಕ್ಕೆ ಸೀಮಿತವಲ್ಲ: ಬೆಳಗಲ್‌


Team Udayavani, Nov 22, 2019, 2:30 PM IST

21-November-33

ಹರಿಹರ: ಓದುವ ಸಂಸ್ಕೃತಿ ಕೇವಲ ಯಾವುದೋ ಒಂದು ವರ್ಗಕ್ಕೆ ಸೀಮಿತವಾಗಬಾರದು ಎಂದು ದಾವಣಗೆರೆ ನಗರ ಕೇಂದ್ರ ಗ್ರಂಥಾಲಯ ಸಹಾಯಕ ಸಂಗಣ್ಣ ಬೆಳಗಲ್‌ ಹೇಳಿದರು.

ಇಲ್ಲಿನ ಸಾರ್ವಜನಿಕ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪದಲ್ಲಿ ಮಾತನಾಡಿದ ಅವರು, ಓದು, ಅಧ್ಯಯನ ಎಂಬುದು ತಮಗೆ ಸಂಬಂಧಿಸಿದ್ದಲ್ಲ
ಎಂಬ ಧೋರಣೆ ಕೆಲವರ್ಗದ ಜನರಲ್ಲಿದೆ. ಇದು ಬದಲಾಗಬೇಕು ಎಂದರು.

ಓದು ವ್ಯಕ್ತಿಯ ಆಲೋಚನಾ ಶಕ್ತಿ, ವಿಚಾರ ಲಹರಿ ವೃದ್ಧಿಸುವುದಲ್ಲದೆ ತಾಳ್ಮೆಯನ್ನೂ ಹೆಚ್ಚಿಸುತ್ತದೆ. ದೇಶ ಸುತ್ತಲು ಆರ್ಥಿಕವಾಗಿ ಸಮರ್ಥರಲ್ಲದವರು ಪುಸ್ತಕಗಳನ್ನು ಓದಿ ತಮ್ಮ ಅರಿವು ಹೆಚ್ಚಿಸಿಕೊಳ್ಳಬೇಕು. ಪ್ರತಿಯೊಬ್ಬ ವ್ಯಕ್ತಿಯೂ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದರು.

ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಧಿಕಾರಿ ಸುಮಾ ಕೋಡಿಹಳ್ಳಿ ಮಾತನಾಡಿ, ಗ್ರಂಥಗಳು ಅಮೂಲ್ಯ ಆಸ್ತಿ. ಗ್ರಂಥಗಳಿಂದ ಪಡೆದ ಜ್ಞಾನ ಯಾರೂ ಕದಿಯಲಾಗದು. ಮಹಿಳೆಯರು ಟಿವಿ ಮುಂದೆ ಕುಳಿತು ಧಾರಾವಾಹಿ ನೋಡುವುದನ್ನು ಬಿಟ್ಟು ಪತ್ರಿಕೆ, ಪುಸ್ತಕ ಓದಬೇಕು. ಬಿಡುವಿನ ಸಮಯದಲ್ಲಿ ಸಮೀಪದ ಗ್ರಂಥಾಲಯಕ್ಕೆ ಬಂದು ಸದಪಯೋಗಪಡಿಸಿಕೊಳ್ಳಬೇಕು ಎಂದರು.

ಓದುಗಾರರಾದ ಹನುಮಂತಪ್ಪ ಮಾತನಾಡಿ, ಗ್ರಂಥಾಲಯವೇ ದೇವಾಲಯ. ಇಲ್ಲಿನ ಪುಸ್ತಕಗಳೇ ದೇವರು. ಶ್ರದ್ಧಾ-ಭಕ್ತಿಯಿಂದ ಓದಿದರೆ ಎಲ್ಲರೂ ಜ್ಞಾನಿಗಳಾಗಲು ಸಾಧ್ಯ. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಗಳ ಹುಳುಗಳಾಗದೆ ಪತ್ರಿಕೆ, ಸಾಹಿತ್ಯಾಧ್ಯಯನಕ್ಕೆ ಸಮಯ ಮೀಸಲಿರಿಸಬೇಕು. ವಿದ್ಯಾರ್ಥಿಗಳು, ಶಿಕ್ಷಕರು ಮಾತ್ರವಲ್ಲದೆ ಎಲ್ಲಾ ನಾಗರಿಕರೂ ಗ್ರಂಥಾಲಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಗ್ರಂಥಾಲಯದ ಶಾಖಾಧಿ ಕಾರಿ ರವಿಕುಮಾರ ಮಾತನಾಡಿ, ಸಾರ್ವಜನಿಕ ಗ್ರಂಥಾಲಯಗಳು ಸಾಂಸ್ಕೃತಿಕವಾಗಿ ಉನ್ನತ ಬದುಕನ್ನು ರೂಪಿಸುವಲ್ಲಿ ಸಹಾಯಕವಾಗಿವೆ. ಜ್ಞಾನಾರ್ಜನೆಗೆ ಗ್ರಂಥಾಲಯ ಅತ್ಯವಶ್ಯ. ಇಲ್ಲಿ ಜಾತಿ-ಮತ, ಅಂತಸ್ತು-ಲಿಂಗಭೇದಕ್ಕೆ ಅವಕಾಶವಿಲ್ಲ. ಯಾರೇ ಆಗಲಿ ಮುಕ್ತವಾಗಿ ಗ್ರಂಥಾಲಯ ಸೌಲಭ್ಯ ಪಡೆಯಬಹುದು ಎಂದರು. ಹಾಜರಿದ್ದ ಓದುಗರಾದ ಸುರೇಶ, ರಮೇಶ, ಆರುಂಧತಿ ತಮ್ಮ ಅನಿಸಿಕೆ ವ್ಯಕ್ತಪಡಿಸಿ, ಶಾಖಾ ಗ್ರಂಥಾಲಯದ ನಿರ್ವಹಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ವೈವಿಧ್ಯಮಯ ಪುಸ್ತಕಗಳು ಹಾಗೂ ಇನ್ನು ಹೆಚ್ಚಿನ ಸೌಕರ್ಯಗಳನ್ನು ಒದಗಿಸಬೇಕೆಂದು ಕೋರಿದರು.

ಸಪ್ತಾಹದ ನಿಮಿತ್ತ ಏರ್ಪಡಿಸಿದ್ದ ರಂಗೋಲಿ, ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ವಿಜೇತರಾದ ನಗರದ ವಿವಿಧ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ, ಪ್ರಮಾಣ ಪತ್ರ ವಿತರಿಸಲಾಯಿತು. ಗ್ರಂಥಾಲಯ ಪಿತಾಮಹ ಡಾ| ಎಸ್‌.ಆರ್‌. ರಂಗನಾಥನ್‌ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು. ಕೆ.ಎಂ.ವಿಶ್ವನಾಥ, ಸಿಬ್ಬಂದಿಗಳಾದ ಮಂಜುನಾಥ, ರಾಘವೇಂದ್ರ, ಹರೀಶ, ಮೀನಾಕ್ಷಿ ಮತ್ತಿತರರಿದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.