ಮೇರಿ ಮಾತೆ ಮಹೋತ್ಸವ

•ಮೆರವಣಿಗೆಯಲ್ಲಿ ಸಹಸ್ರಾರು ಜನ ಭಾಗಿ •ಕೇಶ ಮುಂಡನೆಗೆ ಸಾಲುಗಟ್ಟಿ ನಿಂತಿದ್ದ ಭಕ್ತರು

Team Udayavani, Sep 9, 2019, 11:50 AM IST

9-Sepctember-4

ಹರಿಹರ: ಪುಷ್ಪಾಲಂಕೃತ ತೇರಿನೊಳಗೆ ಮೇರಿ ಮಾತೆ ಮೂರ್ತಿಯನ್ನಿಟ್ಟು ಮೆರವಣಿಗೆ ನಡೆಸಲಾಯಿತು.

ಹರಿಹರ: ಇಲ್ಲಿನ ಆರೋಗ್ಯಮಾತೆ ಚರ್ಚ್‌ನಲ್ಲಿ ಭಾನುವಾರ ವಿಜೃಂಭಣೆಯಿಂದ ನಡೆದ ಮೇರಿ ಮಾತೆ ಮಹೋತ್ಸವದಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಜನರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು.

ಮಹಾದಿನವಾದ ಭಾನುವಾರ ನಸುಕಿನಿಂದಲೇ ಆರಂಭವಾದ ಪೂಜಾ ವಿಧಿಗಳಲ್ಲಿ ಬೆಳ್ತಂಗಡಿಯ ಭದ್ರಾವತಿಯ ಧರ್ಮಾಧ್ಯಕ್ಷ ಡಾ| ಜೋಸೆಫ್‌ ಅರುಮಚಾಡತ್‌ ನೇತೃತ್ವದಲ್ಲಿ ಕನ್ನಡ, ತೆಲುಗು, ಮಲಯಾಳಂ, ಬೆಂಗಳೂರು ಸಂತಪೇತ್ರರ ಗುರು ವಿದ್ಯಾಮಂದಿರದ ಡಾ| ರಾಯಪ್ಪನ್‌ ಇಂಗ್ಲಿಷ್‌ ಭಾಷೆಯಲ್ಲಿ, ಬೆಳಗಾವಿ ಧರ್ಮಾಧ್ಯಕ್ಷ ಫಾ. ಡಾ|ಡೆರಿಕ್‌ ಫೆರ್ನಾಂಡಿಸ್‌ ಕೊಂಕಣಿಯಲ್ಲಿ ಬಲಿ ಪೂಜೆ ನಡೆಸಿದರು.

ಮಧ್ಯಾಹ್ನ 11ಕ್ಕೆ ಪುರಪ್ರವೇಶ ಮಾಡಿದ ಶಿವಮೊಗ್ಗ ಧರ್ಮಾಧ್ಯಕ್ಷ ಡಾ| ಪ್ರಾನ್ಸಿಸ್‌ ಸೆರಾವೋ ಅವರನ್ನು ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆಯಲ್ಲಿ ದೇವಾಲಯಕ್ಕೆ ಕರೆತರಲಾಯಿತು. ಮಧ್ಯಾಹ್ನ 11-30ಕ್ಕೆ ಕನ್ನಡದಲ್ಲಿ ಹಬ್ಬದ ಸಹಬಲಿಪೂಜೆ, 2 ಘಂಟೆಗೆ ಪರಮ ಪ್ರಸಾದದ ವಿಶೇಷ ಆರಾಧನೆ ನೆರವೇರಿತು. ಚರ್ಚ್‌ನ ಫಾ. ಡಾ| ಅಂತೋನಿ ಪೀಟರ್‌ ಮತ್ತಿತರೆ ಗಣ್ಯರು ಪಾಲ್ಗೊಂಡಿದ್ದರು.

ಭಕ್ತಿ, ಸಡಗರದ ರಥೋತ್ಸವ: ಸಂಜೆ 5-30ಕ್ಕೆ ಪುಷ್ಪಾಲಾಂಕೃತ ತೇರಿನಲ್ಲಿ ಆರೋಗ್ಯ ಮಾತೆಯ ಮೂರ್ತಿಯನ್ನಿಟ್ಟು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆ ಮತ್ತೆ ಆರೋಗ್ಯ ಮಾತೆ ದೇವಾಲಯಕ್ಕೆ ಮರಳಿತು. ಮೆರವಣಿಗೆಯಲ್ಲಿ ಸಹಸ್ರಾರು ಜನರು ಭಕ್ತಿ, ಸಡಗರದಿಂದ ಪಾಲ್ಗೊಂಡಿದ್ದರು. ಮೆರವಣಿಗೆಯುದ್ದಕ್ಕೂ ಜಪಸರ, ನವೇನ ಪ್ರಾರ್ಥನೆ, ಪುಷ್ಪಾರ್ಚನೆ, ಪ್ರಬೋಧನೆ ಮಾಡುತ್ತಾ ಜನರು ಭಾವಪರವಶರಾಗಿ ಸಾಗುತ್ತಿದ್ದ ದೃಶ್ಯ ಕಂಡುಬಂತು.

ಬೆಳಿಗ್ಗೆಯಿಂದಲೆ ಚರ್ಚ್‌ನ ಸಮೀಪ ಜನರು ತಮ್ಮ ಹರಕೆಯಂತೆ ಕೇಶ ಮುಂಡನೆಗಾಗಿ ಜನ ಸಾಲುಗಟ್ಟಿ ನಿಂತಿದ್ದರು. ಪಾಪ ನಿವೇದನೆಗೆಂದು ಹಲವರು ಹಿರಿಯ ಗುರುಗಳಿಗೆ ಭಕ್ತರು ಮುಗಿಬೀಳುತ್ತಿದ್ದರು. ರೋಗಿಗಳಿಗೋಸ್ಕರ ಪತ್ಯೇಕ ಪ್ರಾರ್ಥನೆ ನಡೆಯಿತು. ದೂರದ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಿ ಅಲ್ಲಿಂದಲೇ ಉದ್ದನೆಯ (ದೀಡ್‌) ನಮಸ್ಕಾರ ಹಾಕುತ್ತಾ ಚರ್ಚ್‌ಗೆ ಸಾಗುತ್ತಿದ್ದ ದೃಶ್ಯ ವಿಶೇಷವಾಗಿತ್ತು.

ಹರಿಹರ ಮಾತೆ ಸಮಾಧಾನದ ರಾಣಿ, ಸಂಧಾನದ ಮುಕುಟಮಣಿ ಎಂಬ ಧ್ಯೇಯ ವಾಕ್ಯದಡಿ ಅ.30 ರಿಂದ ಹಮ್ಮಿಕೊಂಡಿದ್ದ ಪ್ರಸಕ್ತ ಮಹೋತ್ಸವದಲ್ಲಿ ಮೈಸೂರು ಧರ್ಮಕ್ಷೇತ್ರದ ಫಾ.ಡಾ| ಆರೋಗ್ಯ ಸ್ವಾಮಿ, ಬೆಂಗಳೂರಿನ ಧರ್ಮಾಧ್ಯಕ್ಷ ಫಾ.ಡಾ| ಪೀಟರ್‌ ಪೌಲ್ ಸಲ್ಡಾನ್‌ ಹಾಗೂ ಇತರೆ ಧರ್ಮಗುರುಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.