ಹಣ ಸಂಗ್ರಹಿಸಿ ಸಿಎಂ ಪರಿಹಾರ ನಿಧಿಗೆ ಜಮೆ

•ನೆರೆ ಸಂತ್ರಸ್ತರ ಸಹಾಯಕ್ಕೆ ಮುಂದಾದ ಜನ-ಸಂಘಟನೆಗಳು •ಆಹಾರ ಧಾನ್ಯ-ಮೇವು ರವಾನೆ

Team Udayavani, Aug 14, 2019, 10:35 AM IST

14-AGUST-5

ಹರಿಹರ: ಬಿಜೆಪಿ ಮುಖಂಡರು ಮಂಗಳವಾರ ನೆರೆ ಸಂತ್ರಸ್ತರಿಗೆ ದೇಣಿಗೆ ಹಾಗೂ ಅಗತ್ಯ ಸಾಮಗ್ರಿಗಳನ್ನು ಸಂಗ್ರಹಿಸಿದರು.

ಹರಿಹರ: ನೆರೆ ಸಂತ್ರಸ್ತರಿಗಾಗಿ ಬಿಜೆಪಿ ಪಕ್ಷದ ಎಲ್ಲಾ ಮಂಡಲಗಳ ಮುಖಂಡರು ಹಾಗೂ ಕಾರ್ಯಕರ್ತರು ಪರಿಹಾರ ನಿಧಿ ಸಂಗ್ರಹದಲ್ಲಿ ತೊಡಗಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ಹೇಳಿದರು.

ತಾಲೂಕು ಬಿಜೆಪಿ ಘಟಕ ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನೆರೆ ಸಂತ್ರಸ್ತರಿಗೆ ದೇಣಿಗೆ ಹಾಗೂ ಅಗತ್ಯ ಸಾಮಗ್ರಿಗಳನ್ನು ಸಂಗ್ರಹಿಸುವ ಕಾರ್ಯದ ನೇತೃತ್ವ ವಹಿಸಿ ಮಾತನಾಡಿದ ಅವರು, ಪಕ್ಷದ ವರಿಷ್ಠರ ಆದೇಶದಂತೆ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನೂ ಪ್ರವಾಹ ಸಂತಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದಾನೆ ಎಂದರು.

ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗೃಹ ಮಂತ್ರಿ ಅಮಿತ್‌ ಷಾ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಪ್ರವಾಹ ಪೀಡಿತ ಭಾಗಗಳಲ್ಲಿ ಸಂಚರಿಸಿ, ರಾಜ್ಯಕ್ಕೆ ಹೆಚ್ಚಿನ ನೆರವನ್ನು ಒದಗಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದರು.

ಉತ್ತರ ಕರ್ನಾಟಕ ಹಿಂದೆಂದೂ ಕಾಣದಂತಹ ನೆರೆ ಸಂಕಷ್ಟಕ್ಕೆ ಸಿಲುಕಿದ್ದು, ಪ್ರತಿಯೊಬ್ಬರೂ ತಮ್ಮ ಕೈಲಾದ ನೆರವು ನೀಡುವ ಮೂಲಕ ಸಂತ್ರಸ್ತರ ಸಂಕಷ್ಟಕ್ಕೆ ನೆರವಾಗಬೇಕು, ಮಾನವೀಯತೆ ಮೆರೆಯಬೇಕು ಎಂದು ಜನತೆಯಲ್ಲಿ ಮನವಿ ಮಾಡಿದರು.

ಜಿಲ್ಲೆಯಾದ್ಯಂತ ಸಂಗ್ರಹವಾಗುವ ಹಣವನ್ನು ಒಟ್ಟುಗೂಡಿಸಿ, ಮುಖ್ಯಮಂತ್ರಿ ಪರಿಹಾರ ನಿಧಿಗೆ ಜಮೆ ಮಾಡಲಾಗುವುದು. ತಾಲೂಕಿನಲ್ಲಿ ಪ್ರವಾಹ ಪೀಡಿತರಿಗಾಗಿ ಸಂಗ್ರಹಿಸುವ ಅಗತ್ಯ ವಸ್ತುಗಳನ್ನು ಹೊಸಹಳ್ಳಿ ಯೋಗಿ ವೇಮನ ಮಠಕ್ಕೆ ತಲುಪಿಸಲಾಗುವುದು, ನಂತರ ಮಠದಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ವಾಹನಗಳಲ್ಲಿ ರವಾನಿಸಲಾಗುವುದು ಎಂದರು.

ಮಾಜಿ ಶಾಸಕ ಬಿ.ಪಿ. ಹರೀಶ್‌ ಮಾತನಾಡಿ, ನೆರೆ ಸಂತ್ರಸ್ತರಿಗೆ ಆಹಾರಕ್ಕಿಂತ ಮುಖ್ಯವಾಗಿ ಬಟ್ಟೆ, ಹೊದಿಕೆ ಮತ್ತಿತರೆ ಅಗತ್ಯ ವಸ್ತುಗಳು ಬೇಕಾಗಿವೆ. ಆಹಾರ ಪದಾರ್ಥಗಳು ಅಗತ್ಯಕ್ಕಿಂತ ಹೆಚ್ಚು ಸಂಗ್ರಹವಾಗುತ್ತಿದ್ದು, ಕೆಟ್ಟು ಹೋಗುವ ಸಂಭವವಿರುವುದರಿಂದ ಸಾರ್ವಜನಿಕರು ಆಹಾರಕ್ಕಿಂತ ಬಟ್ಟೆ-ಹೊದಿಕೆಗಳನ್ನು ಹೆಚ್ಚಿನ ರೀತಿಯಲ್ಲಿ ಕೊಡಬೇಕು ಎಂದರು.

ನೆರೆ ಪೀಡತ ಪ್ರದೇಶಗಳ ಜನರಿಗೇನೋ ರಾಜ್ಯದ ಮೂಲೆ ಮೂಲೆಗಳಿಂದ ಆಹಾರ ವಸ್ತುಗಳು ಪೂರೈಕೆಯಾಗುತ್ತಿವೆ. ಆದರೆ ಅಲ್ಲಿನ ಜಾನುವಾರುಗಳು ಮೇವಿಲ್ಲದೆ ಸಾಯುವ ಸ್ಥಿತಿಯಲ್ಲಿವೆ. ಸರ್ಕಾರ ಮೇವು ಪೂರೈಸಲು ಕ್ರಮ ಕೈಗೊಂಡಿದೆಯಾದರೂ ಸಾರ್ವಜನಿಕರು ಸಹ ಅಲ್ಲಿಗೆ ಮೇವು ಸರಬರಾಜು ಮಾಡಲು ಮುಂದಾಗಬೇಕೆಂದು ಮನವಿ ಮಾಡಿಕೊಂಡರು.

ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಅಂಗಡಿ ಮುಂಗಟ್ಟುಗಳು, ಕಚೇರಿಗಳು, ಮನೆಗಳಿಂದ ದೇಣಿಗೆ ಹಾಗೂ ಬಟ್ಟೆ, ದವಸ ಧಾನ್ಯ ಸಂಗ್ರಹಿಸಲಾಯಿತು.

ನಗರ ಘಟಕ ಅಧ್ಯಕ್ಷ ರಾಜು ರೋಖಡೆ, ನಗರಸಭಾ ಸದಸ್ಯೆ ನೀತಾ ಮೇಹರ್ವಾಡೆ, ರಜನಿಕಾಂತ್‌, ಆಟೋ ಹನುಮಂತಪ್ಪ, ಜಿ.ಪಂ. ಮಾಜಿ ಅಧ್ಯಕ್ಷ ಎಸ್‌.ಎಂ. ವೀರೇಶ್‌ ಹನಗವಾಡಿ, ಜಿ.ಪಂ ಸದಸ್ಯ ಬಿ.ಎಂ. ವಾಗೀಶ್‌ ಸ್ವಾಮಿ, ಮುಖಂಡರಾದ ಬೆಳ್ಳೂಡಿ ರಾಮಚಂದ್ರಪ್ಪ, ಪಾಪಣ್ಣ, ಮಾರುತಿ ಶೆಟ್ಟಿ, ಪ್ರವೀಣ್‌ ಪಿ.ಪವಾರ್‌, ಹೆಚ್.ಎಸ್‌.ರಾಘವೇಂದ್ರ, ಐರಣಿ ನಾಗರಾಜ್‌, ಎಚ್.ಸಿ.ಕೀರ್ತಿಕುಮಾರ್‌, ಮಂಜನಾಯ್ಕ.ಎಚ್, ಅಜೀತ್‌ ಸಾವಂತ್‌, ವಾಸು ಚಂದಪೂರು, ಬಿ.ಮೋತ್ಯನಾಯ್ಕ, ಬಾತಿ ಚಂದ್ರಶೇಖರ್‌, ರಾಚಪ್ಪ, ರೂಪಾ ಕಾಟ್ವೆ, ಐರಣಿ ಅಣ್ಣಪ್ಪ, ರವಿ ರಾಯ್ಕರ್‌, ಅಂಬೂಜಾ ರಾಜೋಳಿ, ಸುರೇಶ್‌ ತೆರದಹಳ್ಳಿ, ದೇವೇಂದ್ರಪ್ಪ ಮತ್ತಿತರರಿದ್ದರು.

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.