ಸಮಾಜ ಮುಖ್ಯ ಹೊರತು ವ್ಯಕ್ತಿ-ಪಕ್ಷವಲ್ಲ

ಪೂರ್ವಭಾವಿ ಸಭೆಸಚಿವ ಸ್ಥಾನದ ಒತ್ತಡದ ನಡುವೆಯೂ ಜಾತ್ರಾ ಮಹೋತ್ಸವ ಯಶಸ್ಸಿಗೆ ಶ್ರಮ: ಶ್ರೀರಾಮುಲು

Team Udayavani, Nov 4, 2019, 11:43 AM IST

4-November-4

ಹರಿಹರ: ಶ್ರೀಗಳಿಗಾಲಿ, ನಮಗಾಗಲಿ ಸಮಾಜ ಮುಖ್ಯವೇ ಹೊರತು ರಾಜಕೀಯ ಪಕ್ಷವಲ್ಲ ಎಂದು ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು.

ಫೆ. 8, 9ರಂದು ನಡೆಯುವ 2ನೇ ವಾಲ್ಮೀಕಿ ಜಾತ್ರಾ ಮಹೋತ್ಸವ, ಮಠದ 22ನೇ ವಾರ್ಷಿಕೋತ್ಸವ, ಲಿಂ|
ಪುಣ್ಯಾನಂದಪುರಿ ಶ್ರೀಗಳ 12ನೇ ಪುಣ್ಯಾರಾಧನೆ, ಪ್ರಸನ್ನಾನಂದ ಶ್ರೀಗಳ 12ನೇ ವರ್ಷದ ಪಟ್ಟಾಧಿಕಾರ ಕಾರ್ಯಕ್ರಮದ ನಿಮಿತ್ತ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ಬಾರಿ ಕಾಂಗ್ರೆಸ್‌ ಸರ್ಕಾರ ಇದ್ದುದ್ದರಿಂದ ಆಗಿನ ಸಚಿವರು ಹಾಗೂ ಸಮಾಜದ ಮುಖಂಡರಾದ ಸತೀಶ್‌ ಜಾರಕಿಹೊಳಿ ಉತ್ಸವ ಸಮಿತಿ ಅಧ್ಯಕ್ಷರಾದರು. ಈ ಬಾರಿ ಬಿಜೆಪಿ ಸರ್ಕಾರವಿದ್ದು ನನ್ನನ್ನು ಅಧ್ಯಕ್ಷರಾಗಿ ನೇಮಿಸಲಾಗಿದೆ. ಆಯಾ ಸರಕಾರದಿಂದ ಅಗತ್ಯ ಸಹಕಾರ ಪಡೆಯುವುದು ಇದರ ಉದ್ದೇಶವಾಗಿದೆ.

ಇಲ್ಲಿ ಸಮಾಜ ಮುಖ್ಯವೇ ಹೊರತು ರಾಜಕೀಯ ಪಕ್ಷವಲ್ಲ ಎಂದರು. ಕಳೆದ ವರ್ಷ ನಡೆದ ಪ್ರಥಮ ವರ್ಷದ ಜಾತ್ರಾ ಮಹೋತ್ಸವ ಸಮಾಜ ಸಂಘಟನೆಯಲ್ಲಿ ಸಂಚಲನ ಮೂಡಿಸಿತ್ತು. ಶ್ರೀಗಳು ರಾಜ್ಯಾದ್ಯಂತ ಪಾದರಸದಂತೆ ಸಂಚರಿಸಿದ ಫಲವಾಗಿ ಎಲ್ಲೆಡೆಯಿಂದ ಜನ ಹಾಗೂ ದೇಣಿಗೆ ಮಠಕ್ಕೆ ಹರಿದು ಬಂತು. ನಾನು ದೇಣಿಗೆ ನೀಡಲು ಮುಂದಾದರೂ ಶ್ರೀಗಳು ಈಗ ಬೇಡ, ಬೇಡ ಎಂದರು.

ಇದು ಸಮಾಜದ ಜನರಿಂದ ಹರಿದು ಬಂದ ದೇಣಿಗೆ ಪ್ರಮಾಣವನ್ನು ಸೂಚಿಸುತ್ತದೆ. ಆಗ ಶ್ರೀಗಳ ಜೋಳಿಗೆ ದೇಣಿಗೆಯಿಂದ ತುಂಬಿತ್ತು ಎಂದರು. ಸಚಿವ ಸ್ಥಾನದ ಒತ್ತಡದ ನಡುವೆಯೂ ರಾಜ್ಯಾದ್ಯಂತ ಸಂಚರಿಸಿ ಜಾತ್ರಾ ಮಹೋತ್ಸವದ ಯಶಸ್ಸಿಗೆ ಶ್ರಮಿಸುತ್ತೇನೆ. ಈ ಉತ್ಸವವು ವಾಲ್ಮೀಕಿ ಸಮಾಜದ ಸಂಘಟನೆಯ ದಿಕ್ಸೂಚಿಯಾಗಿ ಬೆಳೆಯಲಿದ್ದು ನಿರಂತರವಾಗಿ ಆಚರಿಸಲಾಗುವುದು.

ಈ ಮಠ ಹಾಗೂ ಸಮಾಜ ಅಭಿವೃದ್ಧಿಯ ಹಾದಿಯಲ್ಲಿದ್ದು ಎಲ್ಲರ ಸಹಕಾರ ಬೇಕು. ಕುಟಂಬ ಸಮೇತ ಈ ಮಠದ ದರ್ಶನಕ್ಕೆ ಬಂದು ಇದನ್ನು ತೀರ್ಥ ಕ್ಷೇತ್ರವಾಗಿ ರೂಪಿಸುವ ಜವಾಬ್ದಾರಿ ಸಮಾಜ ಬಾಂಧವರ ಮೇಲಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಪ್ರಸನ್ನಾನಂದ ಶ್ರೀಗಳು ಮಾತನಾಡಿ, ಈಗಾಗಲೇ ಅನೇಕ ಸಮಾಜದವರು ಅವರವರ ಸಾಂಸ್ಕೃತಿಕ ನಾಯಕರ ಹೆಸರಲ್ಲಿ ಸಂಘಟಿತರಾಗುತ್ತಿದ್ದಾರೆ. ದೇಶದಲ್ಲಿ ವಾಲ್ಮೀಕಿ ಸಮಾಜವು ವಿವಿಧ ಹೆಸರುಗಳಲ್ಲಿ ಕರೆಯಲ್ಪಡುತ್ತಿದೆ. ಇವನ್ನೆಲ್ಲಾ ಸಮೀಕರಿಸಿ ಒಂದು ವೇದಿಕೆಗೆ ತರುವ ಸವಾಲು ನಮ್ಮ ಮುಂದಿದೆ. ಆ ದಿಸೆಯಲ್ಲಿ ಜಾತ್ರಾ ಮಹೋತ್ಸವ ಆಯೋಜಿಸಲಾಗಿದೆ ಎಂದರು.

1998ರ ಫೆ.8ರಂದು ಈ ಮಠ ಸ್ಥಾಪನೆಯಾಯಿತು. ಪ್ರಥಮ ಪೀಠಾಧಿ ಪತಿ ಪುಣ್ಯಾನಂದಪುರಿ ಶ್ರೀಗಳಿಗೆ ರಾಜ್ಯಾದ್ಯಂತ 8 ವರ್ಷಗಳ ಕಾಲ ನಿರಂತರವಾಗಿ ಸಂಚರಿಸಿ ಸಮಾಜ ಸಂಘಟನೆ ಮಾಡಿದ ಕೀರ್ತಿ ಸಲ್ಲುತ್ತದೆ ಎಂದು ಸ್ಮರಿಸಿದರು.

ತಾವು ಪೀಠಾ ಧಿಪತಿಯಾದ ನಂತರ ಸಮಾಜಕ್ಕೆ ಸಾಮಾಜಿಕ, ರಾಜಕೀಯ ಶಕ್ತಿ ತುಂಬುವ, ಮೀಸಲಾತಿ ಹೋರಾಟ, ಮಠದ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇವೆ. ಹಿಂದುಳಿದ ವಾಲ್ಮೀಕಿ ಸಮಾಜವನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಆಶಯವಾಗಿದೆ ಎಂದರು.

ಸಮಾಜದ ಮುಖಂಡ ಟಿ.ಈಶ್ವರ್‌ ಮಾತನಾಡಿ, ಜಾತ್ರಾ ಮಹೋತ್ಸವಕ್ಕಾಗಿ ಒಂದೂವರೆ ಕೋಟಿ ರೂ. ಗಳ ತೇರನ್ನು ಯಲ್ಲಾಪುರದಲ್ಲಿ ಸಿದ್ಧಗೊಳಿಸಲಾಗುತ್ತಿದೆ. ಇದು ದೇಶದಲ್ಲೇ ವಿಶಿಷ್ಠ ಎನಿಸಲಿದ್ದು ಇದರಲ್ಲಿ ಶ್ರೀ ವಾಲ್ಮೀಕಿ ಹಾಗೂ ಶ್ರೀರಾಮನ ಚಿತ್ರಗಳಿವೆ. ಕಳೆದ ವರ್ಷದ ಉತ್ಸವದ ಆಯವ್ಯಯವನ್ನು ಶ್ರೀಗಳು ಜಿಲ್ಲಾವಾರು ಸಂಚರಿಸಿ ಸಮಾಜದವರ ಗಮನಕ್ಕೆ ತಂದಿದ್ದಾರೆ ಎಂದರು.

ಸಭೆಯಲ್ಲಿ ವೀರೇಂದ್ರಸಿಂಹ, ವಾಲ್ಮೀಕಿ ನೌಕರರ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಡಾ| ಬಿ.ರಂಗಯ್ಯ, ಡಾ| ಪಾಟೀಲ್‌, ಪ್ರೊ| ಪೊನ್ನದ್‌, ಶಾಂತಲಾ ರಾಜಣ್ಣ, ಮಠದ ಆಡಳಿತಾ ಧಿಕಾರಿ ಟಿ.ಓಬಳಪ್ಪ, ಕೆ.ಬಿ. ಮಂಜಣ್ಣ, ಮಹಾಲಕ್ಷ್ಮೀ, ವಿಜಯಶ್ರೀ, ಆನಂದಪ್ಪ, ರಂಗಪ್ಪ ಕೆ., ಕೊಕ್ಕನೂರು ಸೋಮಣ್ಣ ಇತರರಿದ್ದರು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.