ವೀರಶೈವ ಜಂಗಮರು ಪರಿಶಿಷ್ಟರಲ್ಲ

ಎಸ್ಸಿ ಪ್ರಮಾಣಪತ್ರ ನೀಡಲು ದಸಂಸ ವಿರೋಧನಿಜವಾದ ಶೋಷಿತರಿಗೆ ಅನ್ಯಾಯ ಆರೋಪ

Team Udayavani, Sep 21, 2019, 12:03 PM IST

21-Sepctember-4

ಹರಿಹರ: ಶುಕ್ರವಾರ ದಸಂಸ (ಪ್ರೊ .ಬಿ.ಕೃಷ್ಣಪ್ಪ ಬಣ) ಕಾರ್ಯಕರ್ತರು ಸುಳ್ಳು ಜಾತಿ ಪತ್ರ ನೀಡುವುದನ್ನು ಖಂಡಿಸಿ ತಹಶೀಲ್ದಾರ್‌ಗೆ ಮನವಿ ನೀಡಿದರು.

ಹರಿಹರ: ವೀರಶೈವ ಲಿಂಗಾಯಿತ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡದಂತೆ ಆಗ್ರಹಿಸಿ ದಸಂಸ (.ಪ್ರೊ ಬಿ.ಕೃಷ್ಣಪ್ಪ ಬಣ) ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಅರೆಬೆತ್ತಲೆ ಅಣಕು ಶವಯಾತ್ರೆ ಮೂಲಕ ಪ್ರತಿಭಟನೆ ನಡೆಸಿದರು.

ಪಕ್ಕೀಸ್ವಾಮಿ ಮಠದಿಂದ ಶಿವಮೊಗ್ಗ ರಸ್ತೆ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ಮುಖ್ಯ ರಸ್ತೆ,
ಗಂ  ವೃತ್ತದ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದ ಪ್ರತಿಭಟನಾಕಾರರು ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ್‌ ರೆಹಾನ್‌ ಪಾಷಾಗೆ ಮನವಿ ನೀಡಿದರು. ನಂತರ ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್‌ ಮಾತನಾಡಿ, ಶೋಷಿತರ ಅಭಿವೃದ್ಧಿಗೆ ಸಂವಿಧಾನ ಎಸ್ಸಿ, ಎಸ್ಟಿಯಡಿ ಮೀಸಲಾತಿ ಕಲ್ಪಿಸಿದ್ದು, ಅಲೆಮಾರಿಗಳಾದ ಬೇಡ ಜಂಗಮ, ಬುಡ್ಗ ಜಂಗಮ ಜಾತಿಗಳನ್ನು ಎಸ್ಸಿ ಎಂದು ಪರಿಗಣಿಸಲಾಗಿದೆ. ಆದರೆ ಮೇಲ್ವರ್ಗದ ಕೆಲವು ಲಿಂಗಾಯಿತ ಜಂಗಮರು ಸಹ ಬೇಡ ಜಂಗಮರೆಂದು ಸುಳ್ಳು ಎಸ್ಸಿ ಪ್ರಮಾಣ ಪತ್ರ ಪಡೆದು ಶೋಷಿತ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅಖೀಲ ಕರ್ನಾಟಕ ಡಾ.ಅಂಬೇಡ್ಕರ್‌ ಬೇಡ ಜಂಗಮ್‌ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆ ಹೆಸರಿನ ಸಂಸ್ಥೆಯೊಂದು ಲಿಂಗಾಯಿತ ಜಂಗಮರಿಗೆ ಬೇಡ ಜಂಗಮ ಎಂಬ ಗುರುತಿನ ಚೀಟಿ ವಿತರಿಸುತ್ತಿದೆ. ಕೆಲ ಅಧಿ ಕಾರಿಗಳು ಸದರಿ ಸಂಸ್ಥೆಯ ಕಾನೂನು ಮಾನ್ಯತೆಯಿಲ್ಲದ ಗುರುತಿನ ಚೀಟಿ ಪರಿಗಣಿಸಿ ಎಸ್ಸಿ ಪ್ರಮಾಣಪತ್ರ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲಿಂಗಾಯಿತ ಉಪಜಾತಿಯಾದ ಜಂಗಮ ಜನಾಂಗಕ್ಕೂ ಮತ್ತು ಬೇಡ ಅಥವಾ ಬುಡ್ಗ ಜಂಗಮ ಜನಾಂಗಕ್ಕೂ ಯಾವುದೇ ಸಂಬಂಧವಿಲ್ಲವೆಂದು ಅಂತ್ರೋಪಾಲಜಿಕಲ್‌ ಸರ್ವೆ ಆಫ್‌ ಇಂಡಿಯಾ ಸ್ಪಷ್ಟಪಡಿಸಿದ್ದರೂ ಈ ಕುರಿತು ಸೂಕ್ತ ಮಾಹಿತಿ ಇಲ್ಲದ್ದರಿಂದ ರಾಜಕೀಯ ಒತ್ತಡ, ಪ್ರಭಾವಗಳಿಗೆ ಮಣಿದು ಅನರ್ಹರಿಗೂ ಅಧಿಕಾರಿಗಳು ಅನುಸೂಚಿತ ಜಾತಿ ಪ್ರಮಾಣಪತ್ರ ನೀಡಲು ಮುಂದಾಗತ್ತಿರುವುದು ಖಂಡನೀಯವಾಗಿದೆ ಎಂದರು.

ಲಿಂಗಾಯಿತ ಜಂಗಮರ ಶಾಲಾ ದಾಖಲೆಯಲ್ಲಿ ಬೇಡ ಜಂಗಮ ಎಂಬ ಜಾತಿ ನಮೂದನೆ ಆಧರಿಸಿ ಪರಿಶಿಷ್ಟ ಜಾತಿ ಪತ್ರ ನೀಡುತ್ತಿರುವುದು ಕಾನೂನು ಬಾಹಿರ. ಹರಿಹರ ತಹಶೀಲ್ದಾರರು ಲಿಂಗಾಯಿತ ಜಂಗಮರೊಬ್ಬರಿಗೆ ಇದೆ ರೀತಿ ಎಸ್ಸಿ ಪ್ರಮಾಣಪತ್ರ ನೀಡಿದ್ದು, ಇದರ ವಿರುದ್ಧ ದಸಂಸ ಈಗಾಗಲೆ ದಾವಣಗೆರೆ ಎಸಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದರು.

ಆದ್ದರಿಂದ ಜಿಲ್ಲಾಧಿಕಾರಿಗಳು ಕೂಡಲೆ ಈ ಕುರಿತು ಎಲ್ಲಾ ತಹಶೀಲ್ದಾರರಿಗೂ ಸೂಕ್ತ ನಿರ್ದೇಶನ ನೀಡಿ ಇದನ್ನು ತಡೆಯಬೇಕು, ತಪ್ಪಿದಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ನೀಡುವ ಅಧಿಕಾರಿಗಳ ವಿರುದ್ಧ ಡಿಎಸ್‌ ಎಸ್‌ನಿಂದ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವುದು ಸೇರಿದಂತೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ವಾಗೀಶ್‌ ಬನ್ನಿಕೋಡು, ಅಂಜನಪ್ಪ ನಿಟ್ಟೂರು, ಅಣ್ಣಪ್ಪ ಕುಣೆಬೆಳೆಕೆರೆ,
ಹರಳಯ್ಯ, ಭರತ್‌ ಎಸ್‌.ಪಿ., ಕಿರಣ್‌ ಬಿ., ರವಿ ಬಿ., ನವೀನ್‌ ಎನ್‌.ಟಿ., ಶಿವರಾಜ್‌, ಪರಶುರಾಮ್‌, ಮಧು ಎನ್‌.ಪಿ., ಹರೀಶ್‌ ಬಿ.ಎಚ್‌., ಹಾಲೇಶ್‌, ರಾಜಪ್ಪ ಇತರರಿದ್ದರು.

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.