15 ಸಾವಿರ ಸಸಿ ನೆಡುವ ಗುರಿ
ನ್ಯಾಯಾಧೀಶರಿಂದ ಕಕ್ಷಿದಾರರಿಗೆ ಸಸಿ ವಿತರಣೆ•ಧರ್ಮಸ್ಥಳ ಸಂಸ್ಥೆಯಿಂದ ಬೀಜದುಂಡೆ ನಾಟಿ
Team Udayavani, Jun 7, 2019, 1:21 PM IST
ಹರಿಹರ: ವಿಶ್ವ ಪರಿಸರ ದಿನಾಚರಣೆ ನಿಮಿತ್ತ ನಗರದ ನ್ಯಾಯಾಂಗ ಸಂಕೀರ್ಣದ ಆವರಣದಲ್ಲಿ ಗುರುವಾರ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೈ.ಕೆ.ಬೇನಾಳ್ ಕಕ್ಷಿದಾರರಿಗೆ ಸಸಿ ವಿತರಿಸಿದರು.
ಹರಿಹರ: ವಿಶ್ವ ಪರಿಸರ ದಿನಾಚರಣೆ ನಿಮಿತ್ತ ನಗರದ ನ್ಯಾಯಾಂಗ ಸಂಕೀರ್ಣದ ಆವರಣದಲ್ಲಿ ಗುರುವಾರ ನ್ಯಾಯಾಧೀಶರು ಕಕ್ಷಿದಾರರಿಗೆ ಸಸಿ ವಿತರಿಸಿದರು.
ನಂತರ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೈ.ಕೆ.ಬೇನಾಳ್, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆಗಳ ಸಹಯೋಗದಲ್ಲಿ ತಾಲೂಕಿನಾದ್ಯಂತ ಈಗಾಗಲೆ ಸಾವಿರಾರು ಸಸಿ ನೆಡಲಾಗಿದೆ. ತಾಲೂಕಿನ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜು, ಹಾಸ್ಟೇಲ್ ಆವರಣದಲ್ಲಿ 10ರಿಂದ 15 ಸಾವಿರ ಸಸಿ ನೆಡುವ ಗುರಿ ಹೊಂದಲಾಗಿದೆ ಎಂದರು.
ನಮ್ಮ ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಸೇರಿದಂತೆ ಉತ್ತಮ ಪರಿಸರ ಕೊಡುವುದು ನಮ್ಮ ಕರ್ತವ್ಯ. ಕಕ್ಷಿದಾರರು ತಾವು ಪಡೆದಿರುವ ಸಸಿಗಳನ್ನು ತಮ್ಮ ಮನೆ, ಕಣಗಳ ಆವರಣ ಅಥವಾ ಜಮೀನುಗಳಲ್ಲಿ ನೆಟ್ಟು, ಪೋಷಣೆ ಮಾಡಬೇಕು ಎಂದರು.
2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಅವಿನಾಶ್ ಚಿಂದು, 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸಿದ್ದರಾಜು, ವಕೀಲರ ಸಂಘದ ಅಧ್ಯಕ್ಷ ನಾಗರಾಜು ಹಲವಾಗಲು, ಎಪಿಪಿ ಷಂಶೀರ್ ಅಲಿಖಾನ್, ಹಿರಿಯ ವಕೀಲರಾದ ಶ್ರೀನಿವಾಸ ಕಲಾಲ್, ಎಸ್.ಪ್ರಸನ್ನಕುಮಾರ್, ರಾಜಶೇಖರ್, ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ
Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!