ಚುನಾವಣೆ ಮುಗಿದ್ರೂ ಅಭ್ಯರ್ಥಿಗಳಿಗಿಲ್ಲ ವಿಶ್ರಾಂತಿ

ಉಳಿದ ಲೋಕಸಭಾ ಕ್ಷೇತ್ರದ ಪ್ರಚಾರಕ್ಕೆ ಮುಂದಾದ ನಾಯಕರು

Team Udayavani, Apr 20, 2019, 4:05 PM IST

Udayavani Kannada Newspaper

ಹಾಸನ: ಜಿಲ್ಲೆಯ ರಾಜಕಾರಣಿಗಳಿಗೆ ಚುನಾವಣೆಗಳೆಂದರೆ ಹಬ್ಬ. ಹಾಗಾಗಿ ಚುನಾವಣೆಗಳಲ್ಲಿ ದಣಿವರಿಯದೆ ಕಳೆದ ಒಂದು
ತಿಂಗಳಿನಿಂದ ಅಬ್ಬರದ ಪ್ರಚಾರ ನಡೆಸಿದ್ದರು. ಚುನಾವಣೆ ಮುಗಿದ ಮರುದಿನವೂ ವಿಶ್ರಾಂತಿ ಬಯಸದೇ, ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಮುಖಂಡರು, ಕಾರ್ಯಕರ್ತರನ್ನು
ಮಾತನಾಡಿಸುತ್ತಾ ಕಾಲ ಕಳೆದರು. ಇನ್ನು ವಿವಿಧ
ಪಕ್ಷಗಳ ಮುಖಂಡರು ತಮ್ಮ ಅಭ್ಯರ್ಥಿಯ ಗೆಲುವಿನ ಲೆಕ್ಕಾಚಾರದಲ್ಲಿದ್ದರು.

ಬಿಜೆಪಿ ಅಭ್ಯರ್ಥಿ ಎ.ಮಂಜು ಅವರು ಮತದಾನದ ಮರುದಿನವಾದ ಶುಕ್ರವಾರ ಮಾಧ್ಯಮ ಗೋಷ್ಠಿ ನಡೆಸಿ ಮತದಾರರು, ತಮ್ಮ ಪರ ಪ್ರಚಾರ ನಡೆಸಿದವರಿಗೆ ಧನ್ಯವಾದ ಹೇಳಿ ಶಿವಮೊಗ್ಗಕ್ಕೆ ಬಿಜೆಪಿ ಅಭ್ಯರ್ಥಿಪರ ಪ್ರಚಾರಕ್ಕೆ ತೆರಳುವ ಉತ್ಸಾಹದಲ್ಲಿದ್ದರು.

ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ಹೊಳೆನರಸೀಪುರದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಭೇಟಿಯಾಗಿ ಚುನಾವಣೆಯ ಬೂತ್‌ವಾರು ಮತದಾನದ ವಿವರ ಪಡೆದು ತಮಗೆ ಬರಬದುದಾದ ಮತಗಳ ಲೆಕ್ಕಾಚಾರದಲ್ಲಿ ಮುಳುಗಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಅವರು ಮುಂಜಾನೆಯಿಂದಲೇ ತಮ್ಮ ನಿವಾಸಕ್ಕೆ ಬಂದ ಮುಖಂಡರು, ಕಾರ್ಯಕರ್ತರನ್ನು ಮಾತನಾಡಿಸಿ ಮತದಾನದ ವಿವರ ಪಡೆದರು. ನಂತರ ಹೊಳೆನರಸೀಪುರ, ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೇವರ ಉತ್ಸವ ಜಾತ್ರೆಗಳಲ್ಲಿ ಪಾಲ್ಗೊಂಡರು. ಅದರ ನಡುವೆಯೇ ಸುದ್ದಿಗೋಷ್ಠಿ ನಡೆಸಿ ಮತದಾರರು, ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಧನ್ಯವಾದ ಹೇಳಿದರು.ಮಧ್ಯಾಹ್ನ ಶಿವಮೊಗ್ಗಕ್ಕೆ ಜೆಡಿಎಸ್‌ ಅಭ್ಯರ್ಥಿ ಪರ ಪ್ರಚಾರ ನಡೆಸಲು ಹೊರಟರು.

ನಿದ್ದೆ ಮಾಡದ ರೇವಣ್ಣ
ಚುನಾವಣಾ ಪ್ರಚಾರದಲ್ಲಿ ಕಳೆದ ಒಂದು ತಿಂಗಳಿನಿಂದ ತೊಡಗಿಕೊಂಡಿದ್ದ ರೇವಣ್ಣ ಅವರು ಕಣ್ತುಂಬ ನಿದ್ದೆ ಮಾಡಿದ್ದೇ ಇಲ್ಲ. ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗಲೂ ಅವರ ಕಣ್ಣುಗಳು ನಿದ್ದೆಯ ಮಂಪರಿನಲ್ಲಿದ್ದವು. ವಿಶ್ರಾಂತಿಗೆ ಹೋಗಿವಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ವಿಶ್ರಾಂತಿಗೆಂದು ಎಲ್ಲೂ ಹೋಗಲ್ಲ. ಜಿಲ್ಲೆಯ ಜನರ ಋಣ ತೀರಿಸುವುದೊಂದೇ ನಮ್ಮ ಪ್ರಮುಖ ಗುರಿ ಎಂದು ಹೇಳಿದರು. ಏ.21ರ ವರೆಗೂ ಶಿವಮೊಗ್ಗ, ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್‌ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕೆ ತೆರಳುವೆ. ಅಲ್ಲಿಂದ ಬಂದ ಮೇಲೆ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸುವೆ ಎಂದರು.

7 ಕೆ.ಜಿ. ಇಳಿದ ಎ.ಮಂಜು
ಬಿಜೆಪಿ ಅಭ್ಯರ್ಥಿ ಎ.ಮಂಜು ಅವರು ಮತದಾನದ ಮರುದಿನ ಹಾಸನಕ್ಕೆ ಬಂದು ವಾಪಸ್‌ ತಮ್ಮ ಹುಟ್ಟೂರು ಹನ್ಯಾಳಿಗೆ ತೆರಳಿದರು. ನಾನು ವಿಶ್ರಾಂತಿಗೆ ಬೇರೆ ಸ್ಥಳಗಳಿಗೆ ಹೋಗುವುದಿಲ್ಲ.
ಇಂದು ನನ್ನ ಮನೆಯಲ್ಲಿ ಪತ್ನಿ ಮತ್ತು ಮೊಮ್ಮಕ್ಕಳೊಂದಿಗೆ ಕಳೆಯುವೆ. ಶನಿವಾರ ಶಿವಮೊಗ್ಗಕ್ಕೆ ತೆರಳಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವೆ ಎಂದು ಹೇಳಿದರು. ಚುನಾವಣಾ ಪ್ರಚಾರ ಆರಂಭಿಸಿದ ನಂತರ 7 ಕೆ.ಜಿ. ತೂಕ ಇಳಿದಿದೆ. 97
ಕೆ.ಜಿಯಿಂದ 90 ಕ್ಕೆ ಇಳಿದಿರುವೆ ಎಂದೂ 60ರ ಹರೆಯದ ಎ.ಮಂಜು ಅವರು ಹೇಳಿದರು.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.