ಹಾಸನದಲ್ಲಿ ಜೆಡಿಎಸ್‌, ಬಿಜೆಪಿ ಗೆಲುವಿನ ಲೆಕ್ಕಾಚಾರ

2 ರಿಂದ 3 ಲಕ್ಷ ಅಂತರದ ಗೆಲುವು: ರೇವಣ್ಣ ವಿಶ್ವಾಸ 7 ಲಕ್ಷ ಮತಗಳ ಗಳಿಕೆ ಎ.ಮಂಜು ನಂಬಿಕೆ

Team Udayavani, Apr 20, 2019, 4:09 PM IST

Udayavani Kannada Newspaper

ಹಾಸನ: ಮತದಾನ ಮುಗಿದ ಮರುದಿನ ಹಾಸನ ಲೊಕಸಭಾ ಕ್ಷೇತ್ರದ ಅಭ್ಯರ್ಥಿಗಳು ತಮ್ಮದೇ ಗೆಲುವಿನ ಲೆಕ್ಕಾಚಾರ ಹಾಕಿಕೊಂಡು ವಿಜಯದ
ಉತ್ಸಾಹ ತೋರಿದರು.

ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ತಂದೆ, ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಅವರು, ಪ್ರಜ್ವಲ್‌ ರೇವಣ್ಣ ಅವರಿಗೆ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳಲ್ಲೂ ಬಹುಮತ ಬರಲಿದೆ. ವಿಶೇಷವಾಗಿ
ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಅತಿಹೆಚ್ಚು ಬಹುಮತ ಪ್ರಜ್ವಲ್‌ಗೆ ಬರಲಿದ್ದು, ದುದ್ದ ಮತ್ತು ಶಾಂತಿಗ್ರಾಮ ಹೋಬಳಿಯಲ್ಲೇ ತಲಾ 15 ರಿಂದ 20 ಸಾವಿರ ಬಹುಮತ ಬರಲಿದೆ. ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ನಂತರ
ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಬಹುಮತ ಬರಲಿದ್ದು, ಆನಂತರದ ಹೆಚ್ಚು ಬಹುಮತ ಅರಸೀಕೆರೆ ಮತ್ತು ಹಾಸನ ವಿಧಾನಸಭಾ
ಕ್ಷೇತ್ರದಲ್ಲಿ ಬರಲಿದೆ ಎಂದು ಲೆಕ್ಕಾಚಾರ ಮಂಡಿಸಿದರು.

ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಕಲೇಶಪುರ ತಾಲೂಕಿನಲ್ಲಿ ಜೆಡಿಎಸ್‌ಗೆ ಹಿನ್ನಡೆಯಾದರೂ ಆಲೂರು ತಾಲೂಕಿನಲ್ಲಿ ಸ್ಪಲ್ಪ
ಬಹುಮತ ಬರಬಹುದು. ಕಟ್ಟಾಯ ಹೋಬಳಿಯಲ್ಲೇ 15 ಸಾವಿರಕ್ಕೂ ಹೆಚ್ಚು ಬಹುಮತ ಜೆಡಿಸ್‌ಗೆ ಬರುವುದು ಖಚಿತ ಎಂದು ಹೇಳಿದ ರೇವಣ್ಣ
ಅವರು, ಕಳೆದ ಚುನಾವಣೆಯಲ್ಲಿ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ಗೆ 17 ಸಾವಿರ ಮತಗಳ ಹಿನ್ನಡೆಯಾಗಿತ್ತು. ಆದರೆ ಈ ಬಾರಿ ಆ ಕ್ಷೇತ್ರದಲ್ಲಿಯೂ ಜೆಡಿಎಸ್‌ಗೆ ಬಹುಮತ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಅರಕಲಗೂಡು ಕ್ಷೇತ್ರದಲ್ಲಿಯೂ ಬಹುಮತ ಜೆಡಿಎಸ್‌ಗೆ ಬರಲಿದೆ. ವಿಶೇಷವಾಗಿ ಅಲ್ಪ ಸಂಖ್ಯಾತ
ಸಮುದಾಯದವರು, ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳ ಮತಗಳು ಈ ಬಾರಿ ಜೆಡಿಎಸ್‌ಗೆ ಹೆಚ್ಚು ಬಂದಿವೆ. ಹಾಗಾಗಿ ಪ್ರಜ್ವಲ್‌ ರೇವಣ್ಣ 2 ರಿಂದ 3 ಲಕ್ಷ ಮತಗಳ ಅಂತರದಿಂದ
ಗೆಲ್ಲಲಿದ್ದಾರೆ ಎಂದು ಲೆಕ್ಕಾಚಾರ ಮಂಡಿಸಿದರು.

ಎ.ಮಂಜು ಲೆಕ್ಕಾಚಾರ: ಎ.ಮಂಜು ಅವರೂ ತಮ್ಮ ಗೆಲುವಿನ ಲೆಕ್ಕಾಚಾರ ಮಂಡಿಸಿ ತಮಗೆ ಸುಮಾರು 7 ಲಕ್ಷ ಮತಗಳು ಬರಲಿವೆ ಎಂದು ಹೇಳಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ
ಜಿಲ್ಲೆಯ 7 ಕ್ಷೇತ್ರಗಳಳಲ್ಲಿ ಬಿಜೆಪಿ 3 ಲಕ್ಷ ಮತಗಳನ್ನು ಪಡೆದಿತ್ತು. ಈ ಬಾರಿ ಹೊಸ ಮತದಾರರು 82 ಸಾವಿರ
ಇದ್ದು, ಅವರಲ್ಲಿ ಬಹುಪಾಲು ಪ್ರಧಾನಿ ನರೇಂದ್ರಮೋದಿ ಅವರು ಪ್ರಧಾನಿ
ಆಗಬೇಕೆಂಬ ಬಯಕೆ ವ್ಯಕ್ತಪಡಿಸಿ ನನಗೆ ಮತ ನೀಡಿದ್ದಾರೆ. ಹಾಗಾಗಿಯೇ ಕಳೆದ ಬಾರಿಯ ಲೋಕಸಭಾ ಚುನಾವಣೆಗಿಂತ ಈ ಬಾರಿ ಮತದಾನದಲ್ಲಿ ಶೇ.4 ರಷ್ಟು ಹೆಚ್ಚು ಮತದಾನವಾಗಿದೆ ಎಂದರು.

ಇನ್ನು ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ನನಗೆ 4.9 ಲಕ್ಷ ಮತಗಳು ಬಂದಿದ್ದವು. ಅವುಗಳಲ್ಲಿ ಈ ಬಾರಿ ಶೇ. 65 ರಿಂದ 70 ರಷ್ಟು ಮತಗಳು ಬರಲಿವೆ. ವಿಶೇಷವಾಗಿ
ಪರಿಶಿಷ್ಟ ಜಾತಿಯ ಮತದಾರರು ನನಗೆ ಹೆಚ್ಚು ಮತ ನೀಡಿದ್ದಾರೆ. ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಹುಮತ ಕೊಡಿಸುವುದಾಗಿ ಶಾಸಕ ಬೆಳ್ಳಿಪ್ರಕಾಶ್‌ ಹೇಳಿದ್ದು, ಅ ನಿಟ್ಟಿನಲ್ಲಿ ಅವರು ಪ್ರಯತ್ನವನ್ನೂ ನಡೆಸಿದ್ದಾರೆ. ಹಾಗಾಗಿ ನನ್ನ ಗೆಲುವು ಖಚಿತ ಎಂದೂ
ಎ.ಮಂಜು ಅವರು ಲೆಕ್ಕಾಚಾರ ಮಾಡಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.