ಇಲಾಖೆಗಳ ಸಹಯೋಗದಲ್ಲಿ ಹುಣಸಿನಕೆರೆ ಅಭಿವೃದ್ಧಿ ಮಾಡಿ

ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಅಕ್ರಂಪಾಷಾ ಸೂಚನೆ

Team Udayavani, Jun 13, 2019, 4:30 PM IST

13-June-34

ಹಾಸನದ ಹುಣಸಿನಕೆರೆ

ಹಾಸನ: ನಗರದ ಹುಣಸಿನಕೆರೆ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಿ ವಿವಿಧ ಇಲಾಖೆ ಗಳ ಸಹಯೋಗದೊಂದಿಗೆ ಅನುಷ್ಠಾನಗೊಳಿಸಿ ಎಂದು ಡೀಸಿ ಅಕ್ರಂಪಾಷಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹುಣಸಿನಕೆರೆ ಅಭಿವೃದ್ಧಿ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖಾ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಿದ ಅವರು ಐತಿಹಾಸಿಕ, ನೈಸರ್ಗಿಕ ಹಾಗೂ ಪ್ರವಾಸೋದ್ಯಮ ಮಹತ್ವ ಹೊಂದಿ ರುವ ಹುಣಸಿನ ಅಭಿವೃದ್ಧಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಇಲಾಖೆಗಳ ಸಹಕಾರ ಅಗತ್ಯ: ಕೆರೆಯ ಸಮಗ್ರ ಅಭಿವೃದ್ಧಿಗೆ ಬಹುಮುಖ ಯೋಜನೆ ತಯಾರಾಗಬೇಕು. ಹಸಿರು ಭೂಮಿ ಪ್ರತಿಷ್ಠಾನ ಈಗಾಗಲೇ ಸಿದ್ಧಪಡಿಸಿ ಸಲ್ಲಿಸಿರುವ ಯೋಜನೆಯನ್ನು ಮತ್ತಷ್ಟು ಪರಿಷ್ಕರಿಸಿ ಉತ್ತಮ ಪಡಿಸಿ ಹಂತ ಹಂತವಾಗಿ ವಿವಿಧ ಇಲಾಖೆಗಳ ಕೆಲಸಗಳನ್ನು ಹಂಚಿಕೊಂಡು ಅಭಿವೃದ್ಧಿ ಪಡಿಸಬೇಕು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರ, ನಗರಸಭೆ, ಪ್ರವಾಸೋದ್ಯಮ ಇಲಾಖೆ, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಈ ಕೆರೆ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು. ಹಸಿರು ಭೂಮಿ ಪ್ರತಿಷ್ಠಾನದ ಹಿರಿಯ ನಾಗರಿಕ ವೇದಿಕೆಗಳು ಹಾಗೂ ಇತರ ಸಂಘ ಸಂಸ್ಥೆಗಳು ಇದರ ಪ್ರಗತಿಯಲ್ಲಿ ನೆರವಾಗ ಬೇಕು. ಹಾಸನ ನಗರಾಭಿವೃದ್ಧಿ ಪ್ರಾಧಿಕಾರ ದಿಂದ ತಕ್ಷಣವೇ ಕೆರೆ ಆವರಣದಲ್ಲಿರುವ ಕಸ, ಗಿಡಗಂಟಿಗಳನ್ನು ತೆಗೆದು ಸ್ವಚ್ಛಗೊಳಿಸುವ ಕೆಲಸ ಆಗಬೇಕಿದೆ ಎಂದು ಅಕ್ರಂ ಪಾಷಾ ಅವರು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ನೆರವು: ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ‌ ಕೆ.ಎಂ.ರಾಜೇಗೌಡ ಮತ್ತು ಪ್ರಾಧಿಕಾರದ ಆಯುಕ್ತ‌ ಮಾಯಣ್ಣ ಅವರು ಪ್ರಾಧಿಕಾರದ ವತಿಯಿಂದ ಈ ಕಾರ್ಯವನ್ನು ಕೈಗೊಳ್ಳಲಾಗು ವುದು ಎಂದು ಸ್ಪಷ್ಟಪಡಿಸಿದರು.

ಇದೇ ರೀತಿ ಸಣ್ಣ ನೀರಾವರಿ ಇಲಾಖೆ ಯವರು ಹೂಳೆತ್ತುವ ಕಾರ್ಯ ನಡೆಸಬೇಕು. ಜಲಾಮೃತ ಯೋಜನೆಯನ್ನು ಹುಣಸಿನಕೆರೆ ಅಭಿವೃದ್ಧಿಗೆ ಸದ್ಬಳಕ್ಕೆ ಮಾಡಿಕೊಳ್ಳಬೇಕು ನಗರಸಭೆ ವತಿುಂದ ಇಂಟರ್‌ಲಾಕ್‌ ಟೈಲ್ಸ್, ಚೈನ್‌ ಲಿಂಕ್‌ ಫೆನ್ಸ್‌, ವಾಯು ವಿಹಾರ ದಾರಿ ಅಭಿವೃದ್ಧಿ ಮಾಡಬೇಕು ಎಂದರು.

ಹಸಿರು ಭೂಮಿ ಪ್ರತಿಷ್ಠಾನದ ಪರವಾಗಿ ಆರ್‌.ಪಿ. ವೆಂಕಟೇಶ್‌ ಮೂರ್ತಿ ಹುಣಸಿನಕೆರೆ ಮಹತ್ವ, ಅಂತರ್ಜಲ ವೃದ್ಧಿಗೆ ಅದರ ಕೊಡುಗೆ ಕೈಗಳ್ಳಬಹುದಾದ ಅಭಿವೃದ್ಧಿ ಯೋಜನೆಗಳ ಕುರಿತು ಸಭೆಯಲ್ಲಿ ವಿವರಿಸಿದರು.

ಉಪವಿಭಾಗಾಧಿಕಾರಿ ಎಚ್.ಎಲ್. ನಾಗರಾಜ್‌ ಮಾತನಾಡಿ, ಸರ್ಕಾರ ಹಾಗೂ ಸಮುದಾಯದ ಸಹಭಾಗಿತ್ವದೊಂದಿಗೆ ಹುಣಸಿನಕೆರೆ ಅಭಿವೃದ್ಧಿ ಪಡಿಸಲು ಉತ್ತಮ ಆವಕಾಶವಿದೆ ಎಂದು ತಿಳಿಸಿದರು.

ವಿವಿಧ ಇಲಾಖಾ ಅಧಿಕಾರಿಗಳು, ಹಸಿರು ಭೂಮಿ ಪ್ರತಿಷ್ಠಾನದ ಸುಬ್ಬಸ್ವಾಮಿ ಸಮಾಜ ಸೇವಕ ಮಂಜುನಾಥ್‌ ಹಾಗೂ ಸಂಘ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.