ಬೇಡಿಕೆ ಈಡೇರಿಕೆಗಾಗಿ ಅಂಗನವಾಡಿ ನೌಕರರ ಪ್ರತಿಭಟನೆ

ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸಿ „ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಒತ್ತಾಯ

Team Udayavani, Jul 11, 2019, 3:32 PM IST

11-July-35

ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಂಗನವಾಡಿ ನೌಕರರು ಬುಧವಾರ ಧರಣಿ ನಡೆಸಿ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.

ಹಾಸನ: ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಬೇಕು. ಕಾರ್ಯ ಕರ್ತೆಯರಿಗೆ ಬಾಕಿ ಗೌರವಧನ ಪಾವತಿಸಬೇಕು. ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ನೌಕರರು ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಮಹಾರಾಜ ಉದ್ಯಾನವನದಲ್ಲಿ ಸಮಾ ವೇಶಗೊಂಡ ನೌಕರರು ಆನಂತರ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿಯವರ ಕಚೇರಿ ಆವರಣಕ್ಕೆ ಆಗಮಿಸಿ ಧರಣಿ ನಡೆಸಿ ಜಿಲ್ಲಾಡಳಿತಕ್ಕೆ ಮನವ ಸಲ್ಲಿಸಿದರು.

6 ವರ್ಷದೊಳಗಿನ ಮಕ್ಕಳಲ್ಲಿ ಶೇ. 40 ರಷ್ಟು ದೈಹಿಕ ಬೆಳವಣಿಗೆ, ಶೇ.80ರಷ್ಟು ಮಾನಸಿಕ ಬೆಳವಣಿಗೆ ನಡೆಯುವ ಸಂದರ್ಭದಲ್ಲಿ ಪೂರಕ ಪೌಷ್ಟಿಕ ಆಹಾರ ಮತ್ತು ಪ್ರಾಥಮಿಕ ಆರೋಗ್ಯವನ್ನು ಪೂರೈಸುವ ಸಲುವಾಗಿಯೇ ಐಸಿಡಿಎಸ್‌ ಯೋಜನೆ 1975 ರಲ್ಲಿ ಪ್ರಾರಂಭವಾಯಿತು. ಈ ಯೋಜನೆಯಡಿ 3 ವರ್ಷದೊಳಗಿನ ಮಗು ತಾಯಿಯ ಆರೈಕೆಯಲ್ಲಿರ ಬೇಕಾಗಿರುವುದರಿಂದ ಆ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಕೊಡಲಾಗುತ್ತದೆ ಎಂದರು.

ಬಾಕಿ ಗೌರವಧನ ವಿತರಿಸಿ: ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 3-4 ತಿಂಗಳ ಗೌರವಧನ ಬಂದಿಲ್ಲ. ಕೋಳಿ ಮೊಟ್ಟೆ, ತರಕಾರಿ ಹಣ 3-4 ತಿಂಗಳಿಂದ ಬಿಡುಗಡೆಯಾಗಿಲ್ಲ. ಗ್ಯಾಸ್‌ ವಿತರಣೆ ಸಮರ್ಪಕವಾಗಿ ನಡೆಯುತ್ತಿಲ್ಲ. ಅಂಗನವಾಡಿ ನೌಕರರು ಕಾಯಿಲೆ ಬಿದ್ದಾಗ ಮತ್ತು ಮರಣ ಹೊಂದಿದಾಗ ನೆರವು ಸಿಗುತ್ತಿಲ್ಲ. ನಿವೃತ್ತಿ ಯಾದ ನೌಕರರಿಗೆ ಯಾವುದೇ ಸೌಲಭ್ಯಗಳಿಲ್ಲ. ಇಂತಹ ಕೊರತೆಗಳ ನಡುವೆಯೂ ಅಂಗನವಾಡಿ ನೌಕರರು ದುಡಿಯುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಎಲ್ಐಸಿ ಆಧಾರಿತ ಪಿಂಚಿಣಿ ನೀಡಿ: ಅಂಗನ ವಾಡಿ ನೌಕರರಿಗೆ ಈಗಿರುವ ನಿವೃತ್ತಿ ಸೌಲಭ್ಯವನ್ನು ಬದಲಾಯಿಸಿ ಎಲ್ಐಸಿ ಆಧಾರಿತ ಪಿಂಚಿಣಿ ನೀಡ ಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರಿಗೆ ಕೊಡುವ ಎನ್‌ಪಿಎಸ್‌ ಮಾನದಂಡಗಳನ್ನು ಅನುಸರಿ ಸಬೇಕು. ನಿವೃತ್ತಿ ಆದ ಕಾರ್ಯಕರ್ತೆಯವರು, ಸಹಾ ಯಕಿಗೆ ಇಡುಗಂಟು ತಕ್ಷಣ ಬಿಡುಗಡೆ ಆಗಬೇಕು. ಇಲಾಖೆಯ ಲೋಪದೋಷಗಳಿಂದ ಪಾನ್‌ ಕಾರ್ಡು ನೀಡದವರಿಗೆ – ಹಣ ಕಡಿತ ಆಗದವರಿಗೂ ನಿವೃತ್ತಿ ಸೌಲಭ್ಯ ಬಿಡುಗಡೆ ಮಾಡಬೇಕು. ಕಾರ್ಯಕರ್ತೆ- ಸಹಾಯಕಿಯರಿಗೆ ಪಾನ್‌ ಕಾರ್ಡು ನೀಡದವರಿಗೆ ತಕ್ಷಣ ನೀಡಬೇಕು. 2016ರ ಏಪ್ರಿಲ್ ನಿಂದ ಆಯ್ಕೆ ಆದ ಕಾರ್ಯಕರ್ತೆ ಸಹಾಯಕಿಯರಿಗೆ ಕಾಯಂ ನಿವೃತ್ತಿ ಸೌಲಭ್ಯದಡಿ ತರಬೇಕು. ಈಗಾಗಲೇ ನಿವೃತ್ತಿ ಆದವರಿಗೆ ಕನಿಷ್ಠ 3ಸಾವಿರ ರೂ. ಪಿಂಚಣಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.

18 ಸಾವಿರ ರೂ. ವೇತನ ನೀಡಿ: ಅಂಗನವಾಡಿ ಕಾರ್ಯಕರ್ತೆರಿಗೆ 18ಸಾವಿರ ರೂ. ಕನಿಷ್ಠ ವೇತನ ಜಾರಿ ಮಾಡಬೇಕು. ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಗೋವಾ, ಪಾಂಡಿಚೇರಿ, ಕೇರಳ ಮುಂತಾದ ರಾಜ್ಯಗಳಲ್ಲಿ 11 ರಿಂದ 12 ಸಾವಿರ ವೇತನ ಹೆಚ್ಚಳವಾಗಿದೆ. ಆದ್ದರಿಂದ ರಾಜ್ಯದಲ್ಲಿಯೂ ಕೂಡಾ ಗೌರವಧನ ಹೆಚ್ಚಳವಾಗ ಬೇಕು. ಖಾಲಿಯಿರುವ ಸಹಾಯಕಿ ಮತ್ತು ಕಾರ್ಯ ಕರ್ತೆಯರ ಹುದ್ದೆಗಳನ್ನು ತುಂಬಬೇಕು. ಹಲವು ಯೋಜನೆಗಳಿಗೆ ಡಿಡಿ, ಡಿಒ, ಸಿಡಿಪಿಒ, ಮೇಲ್ವಿಚಾರಕಿ ಯರನ್ನು ಕಾಯಂ ಆಗಿ ನೇಮಕ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾ ನಿಯಮ ರಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಇಂದ್ರಮ್ಮ, ಖಜಾಂಚಿ ಜೆ.ಪಿ. ಶೈಲಜಾ, ಪ್ರಧಾನ ಕಾರ್ಯ ದರ್ಶಿ ಎಂ.ಬಿ. ಪುಷ್ಪ್ಪಾ, ಉಪಾಧ್ಯಕ್ಷರಾದ ಲತಾ, ಶಾರದಾ, ಕೆ.ಪಿ. ವೀಣಾ, ಕಾಮಾಕ್ಷಿ ಜಯಂತಿ, ಮೀನಾಕ್ಷಿ, ಸಾವಿತ್ರಿ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಧರ್ಮೇಶ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.