ಸ್ಮಶಾನ ಸ್ವಚ್ಛತೆ: ಪೌರಾಯುಕ್ತ ಕ್ರಮಕ್ಕೆ ಶ್ಲಾಘನೆ


Team Udayavani, May 11, 2019, 10:11 AM IST

h-3

ಅರಸೀಕೆರೆ: ನಗರದ ಹುಳಿಯಾರು ರಸ್ತೆಯ ಸಾರ್ವಜನಿಕ ಹಿಂದೂ ರುದ್ರ ಭೂಮಿಯಲ್ಲಿ ಶವ ಸಂಸ್ಕಾರ ಮಾಡಲು ಇದ್ದ ಸಮಸ್ಯೆಗಳನ್ನು ನಗರಸಭೆ ಪೌರಾಯುಕ್ತ ಚಲಪತಿ ಪರಿಹರಿಸಿದ್ದಾರೆ.

ಸಾರ್ವಜನಿಕರ ಹಿಂದೂ ರುದ್ರ ಭೂಮಿಯ ಉದ್ದಗಲಕ್ಕೂ ಅನೇಕ ವರ್ಷಗಳಿಂದ ಗಿಡಗಂಟಿಗಳು ಬೆಳೆದು ನಿಂತಿದ್ದವು. ಇದರಿಂದಾಗಿ ಶವ ಸಂಸ್ಕಾರ ಮಾಡಲು ಬರುವ ಸಂಬಂಧಿಕರಿಗೆ ತೀವ್ರ ತೊಂದರೆಯಾಗಿತ್ತು. ಅಲ್ಲದೇ, ನೀರು ಹಾಗೂ ವಿದ್ಯುತ್‌ ಸಮಸ್ಯೆಯಿತ್ತು. ಇಂತಹ ಮೂಲಭೂತ ಸೌಲಭ್ಯಗಳನ್ನು ನಗರಸಭೆ ಆಡಳಿತ ಕಲ್ಪಿಸಬೇಕು ಎಂದು ವಿವಿಧ ಜನಪರ ಸಂಘಟನೆಗಳು ಒತ್ತಾಯಿಸಿ ಪ್ರತಿಭಟನೆಗಳನ್ನು ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

ತೆರವು:ಹೀಗಾಗಿ ರುದ್ರಭೂಮಿ ಅಭಿವೃದ್ಧಿ ಹೆಸರಿನಲ್ಲಿ ಕಾಂಕ್ರಿಟ್ ರಸ್ತೆಯನ್ನು ಮಾತ್ರ ನಿರ್ಮಿಸಲಾಗಿತ್ತು. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ನಗರಸಭೆ ಪೌರಾಯುಕ್ತರ ಚಲಪತಿ ಅವರ ಗಮ ನಕ್ಕೆ ತಂದ ಕಾರಣ ಆರೋಗ್ಯ ನಿರೀ ಕ್ಷಕರು ಮತ್ತು ಪೌರ ಕಾರ್ಮಿಕರೊಂದಿಗೆ ಸ್ಮಶಾನದ ಆವರ ಣದಲ್ಲಿದ್ದ ಗಿಡಗಂಟಿ ಹಾಗೂ ತ್ಯಾಜ್ಯ ವಸ್ತು ತೆರವು ಮಾಡಿಸಿದರು.

ನಗರಸಭೆ ಪೌರಾಯುಕ್ತ ಛಲಪತಿ ಮಾತನಾಡಿ, ನಗರದ ಸ್ವಚ್ಛತೆಗೆ ನೀಡುವ ಆದ್ಯತೆಯನ್ನು ಸಾರ್ವಜನಿಕ ರುದ್ರ ಭೂಮಿಗೂ ನೀಡುವುದು ನಗರಸಭೆಯ ಕರ್ತವ್ಯ. ಈ ನಿಟ್ಟಿನಲ್ಲಿ ನಗರಸಭೆ ಈಗಾಗಲೇ ರೂಪುರೇಷೆ ಸಿದ್ಧಪಡಿಸಿದೆ. ಮೊದಲ ಹಂತದಲ್ಲಿ ಸ್ಮಶಾನದ ಸುತ್ತ ಕಾಂಪೌಂಡ್‌ ಮತ್ತು ಕಾಂಕ್ರಿಟ್ ರಸ್ತೆ ನಿರ್ಮಿಸಿಕೊಡ ಲಾಗಿದೆ ಎಂದರು.

ಶವ ಸಂಸ್ಕಾರ ಮಾಡಲು ಬರುವ ಮೃತರ ಸಂಬಂಧಿಕರಿಗೆ ಸ್ಮಶಾನದ ಆವರಣದಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಿ ಕೊಡುವ ಜೊತೆಗೆ ಸ್ಮಶಾನದಲ್ಲಿ ಬೆಳೆದು ನಿಂತಿದ್ದ ಗಿಡ ಬಳ್ಳಿಗಳನ್ನು ತೆರವುಗೊಳಿಸಿ ಮತ್ತೆ ಈ ರೀತಿ ಬೆಳೆಯದಂತೆ ನೋಡಿ ಕೊಳ್ಳುವ ಜವಾಬ್ದಾರಿಯನ್ನು ನಗರ ಸಭೆಯ ಸಂಬಂಧಪಟ್ಟ ಸಿಬ್ಬಂದಿಗೆ ಸೂಚನೆ ನೀಡುವುದಾಗಿ ಹೇಳಿದರು.

ಮನವಿ: ಸ್ಮಶಾನದ ಆವರಣದಲ್ಲಿ ವಾಚ್ಮೆನ್‌ ಶೆಡ್‌ ನಿರ್ಮಿಸಿ ನಮ್ಮ ಪೌರಕಾರ್ಮಿಕರೊಬ್ಬರನ್ನು ನಿಯೋಜಿ ಸುವ ಮೂಲಕ ಶವ ಸಂಸ್ಕಾರ ಮಾಡಲು ಬರುವವರಿಗೆ ಸಹಕಾರ ನೀಡುವ ನಿಟ್ಟಿನಲ್ಲೂ ಕ್ರಮ ಕೈಗೊಳ್ಳುವುದು , ಸ್ಮಶಾನದ ಮುಖ್ಯ ದ್ವಾರದಲ್ಲಿ ನಾಮ ಫಲಕ, ವಿದ್ಯುತ್‌ ದೀಪ ಅಳವಡಿಕೆಗೆ ಅನುದಾನದ ಅವಶ್ಯಕತೆ ಇದ್ದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸ್ಮಶಾನದ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ ಮಾಡಲಾಗುವುದು ಎಂದರು.

ಸಾಮಾಜಿಕ ಕಾರ್ಯಕರ್ತ ರಾಘ ವೇಂದ್ರ, ಸಾರ್ವಜನಿಕ ಹಿಂದೂ ರುದ್ರ ಭೂಮಿಯಲ್ಲಿನ ಸಮಸ್ಯೆ ಬಗ್ಗೆ ನಗರಸಭೆ ಮುಂದೆ ಪ್ರತಿಭಟನೆ ನಡೆಸಿ ನಗರ ಸಭೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನ ಸೆಳೆಯ ಲಾಗಿತ್ತು. ಈ ನಿಟ್ಟಿನಲ್ಲಿ ನಗರಸಭೆಗೆ ನೂತನ ಪೌರಾಯುಕ್ತರಾಗಿ ಆಗಮಿಸಿರುವ ಚಲಪತಿ ಅವರು ಸ್ಮಶಾನದ ಅಭಿವೃದ್ಧಿಗೆ ಕ್ರಮಕೈಗೊಂಡಿರು ವುದಕ್ಕೆ ನಗರದ ಜನತೆ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆಂದರು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.