51 ಪಶು ಆಸ್ಪತ್ರೆಗೆ 13 ಮಂದಿ ವೈದ್ಯರು..!


Team Udayavani, Mar 2, 2020, 3:00 AM IST

51pashu

ಚನ್ನರಾಯಪಟ್ಟಣ: ಪಶುಗಳಿಗೆ ಚಿಕಿತ್ಸೆ ನೀಡಬೇಕಾದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗೆ ವೈದ್ಯರ ಹಾಗೂ ಸಿಬ್ಬಂದಿ ಕೊರತೆ ಕಾಡುತ್ತಿದ್ದು, ತಾಲೂಕಿನ ಜಾನುವಾರುಗಳಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ. ತಾಲೂಕಿನಲ್ಲಿ 51 ಪಶು ಆಸ್ಪತ್ರೆಗಳಿದ್ದು, ಕೇವಲ 13 ಮಂದಿ ವೈದ್ಯರು ಮಾತ್ರ ಇದ್ದಾರೆ.

ಇದಲ್ಲದೇ ಪಶು ಪರಿವೀಕ್ಷಕರು, ಜಾನುವಾರು ಅಭಿವೃದ್ಧಿ ಅಧಿಕಾರಿ, ಆಸ್ಪತ್ರೆ ಮೇಲ್ವಿಚಾರಕರು ಸೇರಿದಂತೆ ವಿವಿಧ ಹುದ್ದೆಗಳು ದಶಕಗಳಿಂದ ಖಾಲಿ ಇದ್ದರೂ ನೇಮಕಾತಿ ಮಾಡಲು ಸರ್ಕಾರಗಳು ಮುಂದಾಗುತ್ತಿಲ್ಲ. ಇದರಿಂದಾಗಿ ಹೈನುಗಾರಿಕೆ ಮಾಡುವ ರೈತರಿಗೆ ಹಾಗೂ ರಾಸುಗಳನ್ನು ಹೊಂದಿರುವವರಿಗೆ ಸಮರ್ಪಕ ಸೇವೆ ದೊರೆಯದೇ ಬಹಳ ತೊಂದರೆ ಯಾಗುತ್ತಿದೆ.

ಕಾಯಿಲೆ ನಿಯಂತ್ರಣ ಕಷ್ಟ: ಬೇಸಿಗೆ ಸಮೀಪಿಸಿದೆ ಈ ವೇಳೆಯಲ್ಲಿ ರಾಸುಗಳಿಗೆ ರೈತರು ಒಣ ಮೇವು ಹಾಕುತ್ತಾರೆ. ಇನ್ನು ಬಿಸಿಲ ತಾಪಕ್ಕೆ ಚಪ್ಪೆರೋಗ, ಕುಂದುರೋಗ, ಗಂಟಲುಬೇನೆ, ಕಾಲುಬೇನೆ, ಕರಳುಬೇನೆ, ಕೆಚ್ಚಲು ಬಾವು, ಕಾಲು ಬಾಯಿರೋಗ ಬರುವುದಲ್ಲದೇ ಹಲವು ರಾಸುಗಳು ಸೇವನೆ ಮಾಡುವ ಆಹಾರ ವಿಷವಾಗುತ್ತದೆ. ಇಂತಹ ವೇಳೆಯಲ್ಲಿ ಚಿಕಿತ್ಸೆ ಕೊಡಿಸಲು ರೈತರು ಹರ ಸಾಹಸ ಪಡುವಂತಾಗಿದೆ. ಇದಲ್ಲದೇ ಕುರಿ, ಮೇಕೆ, ಕೋಳಿ, ನಾಯಿಗಳಿಗೆ ರೋಗ ಬಂದರೂ ವೈದ್ಯರನ್ನು ಸಂಪರ್ಕಿಸುವುದು ಕಷ್ಟವಾಗುತ್ತಿದೆ.

ಹೆಚ್ಚು ಒತ್ತಡ: ತಾಲೂಕಿನಲ್ಲಿರುವ ಬೆರಳೆಣಿಕೆಯಷ್ಟು ವೈದ್ಯರು ಜಾನುವಾರುಗಳ ತಪಾಸಣೆಯನ್ನು ಮಾತ್ರ ಮಾಡುತ್ತಿಲ್ಲ ಚಿರತೆ ದಾಳಿಗೆ ತುತ್ತಾದ ರಾಸುಗಳ ತಪಾಸಣೆ ಮಾಡುವುದು, ಒಂದು ವೇಳೆ ರೋಗಕ್ಕೆ ತತ್ತಾಗಿ ಮೃತಪಟ್ಟರೆ ಮಹಜರ್‌ ಮಾಡಿ ವರದಿ ನೀಡುವುದು. ವಿಮೆ ದೃಢೀಕರಣ ಕೆಲಸವನ್ನೂ ವೈದ್ಯರೇ ಮಾಡಬೇಕಾಗಿದೆ. ಲಸಿಕಾ ಅಭಿಯಾನದಲ್ಲಿ ಪಾಲ್ಗೊಳಬೇಕು, ರೈತರಿಗೆ ಶಿಬಿರ ಏರ್ಪಡಿಸಿ ರಾಸುಗಳನ್ನು ಯಾವ ರೀತಿಯಲ್ಲಿ ಜೋಪಾನವಾಗಿ ನೋಡಿಕೊಳ್ಳಬೇಕು ಎನ್ನುವ ಮಾಹಿತಿಯನ್ನು ಇವರೇ ನೀಡಬೇಕಾಗಿದ್ದು ಒತ್ತಡದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

12 ಆಸ್ಪತ್ರೆಗೆ ಪ್ರಭಾರಿ ವೈದ್ಯರು: ತಾಲೂಕಿನ ಬಾಗೂರು ಆಸ್ಪತ್ರೆ ವೈದ್ಯ ಹೆಚ್ಚುವರಿಯಾಗಿ ನುಗ್ಗೇಹಳ್ಳಿ ಆಸ್ಪತ್ರೆಯನ್ನು ನೋಡಿಕೊಳ್ಳಬೇಕಾಗಿದೆ. ಹತ್ತಿಹಳ್ಳಿ ಆಸ್ಪತ್ರೆ ಪಶುವೈದ್ಯ ಜಿನ್ನೇನಹಳ್ಳಿಯಲ್ಲಿಯೂ ಕರ್ತವ್ಯ ಮಾಡಬೇಕಾಗಿದೆ. ಇದೇ ರೀತಿ ಹಿರೀಸಾವೆ ವೈದ್ಯ ನಾಲ್ಕು ಆಸ್ಪತ್ರೆಯಲ್ಲಿ ಅಂದರೆ ದಿಡಗ, ಕಬ್ಬಳಿ, ಮಟ್ಟನವಿಲೆ, ಅಯ್ಯರಹಳ್ಳಿ ಆಸ್ಪತ್ರೆಗೆ ಆಗಮಿಸಿವು ರೋಗಗ್ರಸ್ಥ ರಾಸುಗಳ ತಪಾಸಣೆ ಮಾಡಬೇಕಾಗಿದೆ.

ಕಲ್ಕೆರೆ ವೈದ್ಯ ರಾಯಸಮುದ್ರ ಕಾವಲಿನಲ್ಲಿರುವ ಅಮೃತ್‌ಮಹಲ್‌ ತಳಿ ಸಂವರ್ಧನ ಉಪಕೇಂದ್ರದಲ್ಲಿನ ನೂರಾರು ರಾಸುಗಳ ತಪಾಸಣೆ ಮಾಡಬೇಕಿದೆ. ಅಣತಿ ವೈದ್ಯ ಕೆಂಬಾಳು, ಬೋಳಘಟ್ಟ, ರಾಮ್‌ಪುರ ನೋಡಿಕೊಂಡರೆ ಉದಯಪುರದವರು ದಂಡಿಗನಹಳ್ಳಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ನೀಡಬೇಕಾಗಿದೆ.

ಅಧಿಕಾರಿಯೂ ಆಸ್ಪತ್ರೆಗೆ ತೆರಳುತ್ತಿದ್ದಾರೆ: ತಾಲೂಕು ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ವಿ.ಕೃಷ್ಣಮೂರ್ತಿ ತಾಲೂಕಿನ ಎಲ್ಲಾ ಪಶು ಆಸ್ಪತ್ರೆಗಳನ್ನು ನೋಡಿಕೊಳ್ಳುವುದಲ್ಲದೇ ಎಲ್ಲಿ ವೈದ್ಯರು ಸರಿಯಾಗಿ ಸೇವೆ ಮಾಡುತ್ತಿದ್ದಾರೆ ಎನ್ನುವುದನ್ನು ಗಮನ ಹರಿಸಬೇಕು. ಇದರೊಂದಿಗೆ ಸರ್ಕಾರದ ಯೋಜನೆಯನ್ನು ಜನತೆಗೆ ತಲುಪಿಸುವ ಕೆಲಸ, ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ, ಕೆಡಿಪಿ ಸಭೆ, ಶಾಸಕರ ಸಭೆ ಸೇರಿದಂತೆ ವಿವಿಧ ಸಭೆಗೆ ಹಾಜರಾಗಬೇಕಿದ್ದರೂ ಪಟ್ಟಣದ ಪಶು ಆಸ್ಪತ್ರೆಗೆ ಆಗಮಿಸುವ ರಾಸುಗಳ ಚಿಕಿತ್ಸೆ ನೀಡುವುದಲ್ಲದೆ ಹೆಚ್ಚುವರಿಯಾಗಿ ಆನೇಕರೆ ಗ್ರಾಮದ ಆಸ್ಪತ್ರೆಗೂ ತೆರಳಬೇಕಾಗಿದೆ.

ಹೋಬಳಿವಾರು ರಾಸುಗಳ ವಿವರ: ಬಾಗೂರು ಹೋಬಳಿಯಲ್ಲಿ 71 ಗ್ರಾಮಗಳಿದ್ದು ಎಮ್ಮೆ 7,984, ಕುರಿ 6,658, ಮೇಕೆ 5,424, ಹಂದಿ 38, ನಾಯಿ 576, ಕೋಳಿ 23,128 ಇವೆ, ದಂಡಿಗನಹಳ್ಳಿ ಹೋಬಳಿಯಲ್ಲಿ 74 ಗ್ರಾಮವಿದ್ದು, ಎಮ್ಮೆ 7,473, ಕುರಿ 4,852, ಮೇಕೆ 4,556, ಹಂದಿ 18, ನಾಯಿ 180, ಕೋಳಿ 14,086 ಇವೆ. ನುಗ್ಗೇಹಳ್ಳಿ ಹೋಬಳಿಯಲ್ಲಿ 51 ಗ್ರಾಮವಿದ್ದು, ಎಮ್ಮೆ 5,612, ಕುರಿ 4,119, ಮೇಕೆ 3,032,

ಹಂದಿ 123, ನಾಯಿ 426, ಕೋಳಿ 15,305 ಇವೆ. ಹಿರೀಸಾವೆ 67 ಗ್ರಾಮವಿದ್ದು, ಎಮ್ಮೆ 9,448, ಕುರಿ 7,999, ಮೇಕೆ 10,338, ಹಂದಿ 220, ನಾಯಿ 1,292, ಕೋಳಿ 44,517 ಇವೆ. ಶ್ರವಣಬೆಳಗೊಳ 65 ಗ್ರಾಮವಿದ್ದು ಎಮ್ಮೆ 9,530, ಕುರಿ 6,392, ಮೇಕೆ 6,735, ಹಂದಿ 73, ನಾಯಿ 490, ಕೋಳಿ 66,292 ಇವೆ. ಕಸಬಾ 79 ಗ್ರಾಮವಿದ್ದು ಎಮ್ಮೆ 6,420, ಕುರಿ 2,671, ಮೇಕೆ 3,751, ಹಂದಿ 106, ನಾಯಿ 253, ಕೋಳಿ 23509 ಇವೆ.

ವೈದ್ಯರು ಕೊರತೆ ಇರುವ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದಿರುವುದಲ್ಲದೇ ಶಾಸಕರು, ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ. ಇವರು ವೈದ್ಯರಲ್ಲಿಯೇ ಎಲ್ಲಾ ಆಸ್ಪತ್ರೆಗಳಲ್ಲಿ ಕೆಲಸ ಮಾಡಿಸಲಾಗುತ್ತಿದೆ.
-ವಿ.ಕೃಷ್ಣಮೂರ್ತಿ, ಸಹಾಯಕ ನಿರ್ದೇಶಕರು, ಪಶುಪಾಲನಾ ಇಲಾಖೆ.

ಪಶುಪಾಲನಾ ಮಂತ್ರಿ ಪ್ರಭು ಚೌಹಾಣ್‌ ಅವರೊಂದಿಗೆ ಮಾತನಾಡಿದ್ದು, ತಾಲೂಕಿನಲ್ಲಿ ಪಶು ವೈದ್ಯರ ಸಮಸ್ಯೆ ಬಗೆ ಹರಿಸುವಂತೆ ಮನವಿ ಮಾಡಲಾಗಿದೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
-ಸಿ.ಎನ್‌.ಬಾಲಕೃಷ್ಣ, ಶಾಸಕ

* ಶಾಮಸುಂದರ್‌ ಕೆ.ಅಣ್ಣೇನಹಳ್ಳಿ

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.