ಹಾಸನ : ವಿದ್ಯುತ್ ತಂತಿ ತಗುಲಿ ಮೂವರು ಬೈಕ್ ಸವಾರರ ದಾರುಣ ಸಾವು
Team Udayavani, May 24, 2017, 10:16 AM IST
ಹಾಸನ: ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಗಾಳಿ ,ಗುಡುಗು ಮಿಂಚು ಸಹಿತ ಭರ್ಜರಿ ಮಳೆ ಸುರಿದ್ದಿದ್ದು ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಗಾಳಿ ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮೂವರು ಬೈಕ್ ಸವಾರರು ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಶಂಕರನ ಹಳ್ಳಿ ಎಂಬಲ್ಲಿ ನಡೆದಿದೆ.
ಒಂದೇ ಬೈಕ್ನಲ್ಲಿ ತೆರಳುತ್ತಿದ್ದ ಗೋಪನಹಳ್ಳಿ ಗ್ರಾಮದ ರವಿ(56), ಪ್ರಸಾದ್(23), ಕಿಟ್ಟಿ(59) ಅವರಿಗೆ ರಸ್ತೆಯಲ್ಲಿ ನೇತಾಡುತ್ತಿದ್ದ ಹೈಟೆನÒನ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಶವಗಳನ್ನು ಸ್ಥಳದಲ್ಲೇ ಇಟ್ಟು ಸ್ಥಳೀಯರು ಸೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದು ಅಧಿಕಾರಿಗಳು ಸ್ಥಳಕ್ಕಾಮಿಸುವವರೆಗೆ ಶವಗಳನ್ನು ಸ್ಥಳದಿಂದ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಹಾಸನ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.