3ಲಕ್ಷ ಮತಗಳ ಅಂತರದ ಗೆಲುವು: ಪ್ರಜ್ವಲ್ ವಿಶ್ವಾಸ

ಚುನಾವಣೆಯಲ್ಲಿ ಶೇ.90 ರಷ್ಟು ಕಾಂಗ್ರೆಸ್ಸಿಗರಿಂದ ಸಿಕ್ಕಿದೆ ಬೆಂಬಲ

Team Udayavani, Apr 23, 2019, 2:59 PM IST

hasan 3

ಹಾಸನ: ಚುನಾವಣೆಯಲ್ಲಿ ನಾನು ಗೆಲ್ಲುವ ಖಚಿತ ವಿಶ್ವಾಸವಿದೆ. 2 ರಿಂದ 3 ಲಕ್ಷ ಬಹುಮತಗಳ ಅಂತರದಲ್ಲಿ ಗೆಲುವು ಸಾಧಿಸುವೆ. ಜೆಡಿಎಸ್‌ ಮುಖಂಡರು, ಕಾರ್ಯಕರ್ತರೊಂದಿಗೆ ಶೇ.90 ರಷ್ಟು ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರೂ ನನ್ನ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ನ ಶಾಸಕರು, ಮಾಜಿ ಶಾಸಕರು ನನ್ನ ತಂದೆಯ ಸ್ಥಾನದಲ್ಲಿ ನಿಂತು ನನ್ನ ಪರವಾಗಿ ಚುನಾವಣೆಯಲ್ಲಿ ಪ್ರಚಾರ ಮಾಡಿ, ಮತ ಹಾಕಿಸಿದ್ದಾರೆ. ನನ್ನ ಪರ ಕೆಲಸ ಮಾಡಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವೆ. ವಿಶೇಷವಾಗಿ ಎಲ್ಲಾ ಕಾಂಗ್ರೆಸ್‌ ಮುಖಂಡರ ನಿವಾಸಗಳಿಗೆ ಒಂದೆರೆಡು ದಿನಗಳಲ್ಲಿ ಭೇಟಿ ನೀಡಿ ಧನ್ಯವಾದ ಹೇಳುವೆ ಎಂದು ತಿಳಿಸಿದರು.

ಜಿಲ್ಲಾ ರಾಜಕಾರಣಕ್ಕೆ ಹೊಸ ಮುಖವಾಗಿರುವ ನಾನು ಎಲ್ಲಾ ಗ್ರಾಮಗಳಿಗೂ ಭೇಟಿ ಕೊಡಬೇಕೆಂದು ಜನರು ಬಯಸುತ್ತಾರೆ. ಚುನಾವಣೆಯ ಸಂದರ್ಭದಲ್ಲಿ ಭೇಟಿ ನೀಡಲು ಸಾಧ್ಯವಾಗದಿರುವ ಹಳ್ಳಿಗಳಿಗೆ ಭೇಟಿ ನೀಡುವೆ ಎಂದರು.

ಜಿಲ್ಲೆಯ ಮಗನಾಗಿ ಕೆಲಸ ಮಾಡುವೆ: ನಾನು ಚುನಾವಣೆಯಲ್ಲಿ ಗೆಲ್ಲಲಿ, ಬಿಡಲಿ. ಹಾಸನ ಜಿಲ್ಲೆಯ ಮಗನಾಗಿ ಕೆಲಸ ಮಾಡುವೆ. ಜಿಲ್ಲೆಯಲ್ಲಿ ಎಚ್.ಡಿ.ದೇವೇಗೌಡರು, ಎಚ್.ಡಿ.ರೇವಣ್ಣನವರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದರೂ ಕೆಲವು ಹಳ್ಳಿಗಳಲ್ಲಿ ಕೆಲವು ಸಮಸ್ಯೆಗಳಿವೆ. ಮುಂದಿನ 5 ವರ್ಷದಲ್ಲಿ ಏನೇನು ಮಾಡಬೇಕು ಎಂದು ಕಾರ್ಯಯೋಜನೆ ಸಿದ್ಧಪಡಿಸಿ ಕಾರ್ಯೋನ್ಮುಖ ನಾಗುವೆ ಎಂದ ಅವರು ಚುನಾವಣಾ ಫ‌ಲಿತಾಂಶ ಘೋಷಣೆಯಾದ ನಂತರ ಎಲ್ಲಾ ಸಮುದಾ ಯದವರ ಪ್ರತ್ಯೇಕ ಸಭೆಗಳನ್ನು ನಡೆಸಿ ಅಹವಾಲು ಆಲಿಸುವೆ. ಚುನಾವಣೆಯ ಸಂದರ್ಭದಲ್ಲಿ ನೀಡಿರುವ ಭರವಸೆಗಳನ್ನು ಅನುಷ್ಠಾನಗಳೊಳಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕಿಲ್ಲೂ ಸಭೆ ನಡೆಸಿ ಕುಂದು- ಕೊರತೆಯ ಮಾಹಿತಿ ಪಡೆಯುವೆ ಎಂದು ಪ್ರಜ್ವಲ್ ರೇವಣ್ಣ ಹೇಳಿದರು.

ಎಚ್‌ಡಿಸಿಸಿ ಉಪಾಧ್ಯಕ್ಷ ಎಚ್.ವಿ.ಗೀರೀಶ್‌, ನಿರ್ದೇಶಕ ಬಿದರಿಕೆರೆ ಜಯರಾಂ, ನಗರಸಭೆ ಮಾಜಿ ಸದಸ್ಯ ಎಂ.ಕೆ.ಕಮಲ್ಕುಮಾರ್‌, ಹಾಸನ ನಗರಸಭೆ ಮಾಜಿ ಉಪಾಧ್ಯಕ್ಷ ಇರ್ಷಾದ್‌ ಅವರೂ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಅವಿವೇಕಿಯ ಆರೋಪ: ಮಂಜುಗೆ ಟಾಂಗ್‌

ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆಂದು ಬಿಜೆಪಿ ಅಭ್ಯರ್ಥಿ ದೂರಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರಜ್ವಲ್ ರೇವಣ್ಣ ಅವರು, ಪ್ರಮಾಣ ಪತ್ರದಲ್ಲಿ ಸಮರ್ಪಕ ಮಾಹಿತಿ ನೀಡಿದ್ದೇನೆ. ಯಾವುದೋ ಒಂದು ಕಂಪನಿಯಲ್ಲಿ ಹೊಂದಿ ರುವ ಷೇರುಗಳ ಬಗ್ಗೆ ಪ್ರಮಾಣ ಪತ್ರದಲ್ಲಿ ಮಾಹಿತಿ ನೀಡಿಲ್ಲ ಎಂಬುದರಲ್ಲಿ ಹುರುಳಿಲ್ಲ. ನಾನು ಆ ಕಂಪನಿಯ ಪಾಲುದಾರಿಕೆಯಿಂದ ಹೊರ ಬಂದಿರುವ ಬಗ್ಗೆ ನಾಮಪತ್ರ ಸಲ್ಲಿಕೆಗೆ ಕೆಲ ದಿನಗಳ ಹಿಂದೆಯೇ ಎನ್‌ಒಸಿ ಪಡೆದಿದ್ದೇನೆ. ಆದಾಯ ತೆರಿಗೆ ಇಲಾಖೆಗೂ ಮಾಹಿತಿ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು. ನನ್ನ ವಿರುದ್ಧ ಯಾವುದೇ ಕಪ್ಪು ಚುಕ್ಕೆ ಹುಡುಕಲಾಗದೆ ಈಗ ಪ್ರಮಾಣ ಪತ್ರದಲ್ಲಿ ದೋಷವಿದೆ ಎಂದು ನನ್ನ ಎದುರಾಳಿಗಳು ಆರೋಪಿಸುತ್ತಿದ್ದಾರೆ. ಅವರು ನ್ಯಾಯಾಲಯಕ್ಕೆ ಹೋಗಿ ಪ್ರಶ್ನಿಸಲಿ. ನಾನು ನ್ಯಾಯಾಲಯದಲ್ಲಿ ದಾಖಲೆ ಸಹಿತ ಹೋರಾಟ ಮಾಡುವೆ. ನ್ಯಾಯಾಲಯದ ತೀರ್ಪಿಗೆ ತಲೆ ಬಾಗುವೆ ಎಂದ ಅವರು, ಅವಿವೇಕಿಗಳ ಆರೋಪಗಳಿಗೆಲ್ಲಾ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.