ವಿಮಾನ ನಿಲ್ದಾಣದ ಶೇ.40ರಷ್ಟು ಕಾಮಗಾರಿ ಪೂರ್ಣ


Team Udayavani, Jan 27, 2023, 1:22 PM IST

tdy-14

ಹಾಸನ: ಬಹು ನಿರೀಕ್ಷಿತ ಹಾಸನ ವಿಮಾಣ ನಿಲ್ದಾಣ ಕಾಮಗಾರಿ ಚುರುಕಾಗಿ ನಡೆಯುತ್ತಿದ್ದು, ಇದು ವರೆಗೆ ಶೇ. 40 ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಹೇಳಿದರು.

ಸಮಾರಂಭದ ಸಂದೇಶದಲ್ಲಿ ಅಭಿವೃದ್ಧಿ ಪ್ರಸ್ತಾಪ ಮಾಡಿರುವ ಸಚಿವರು, 536 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಪ್ಯಾಕೇಜ್‌-1ರಲ್ಲಿ 99.70 ಕೋಟಿ ರೂ. ವೆಚ್ಚದಲ್ಲಿ ರನ್‌ವೇ, ಏಪ್ರೋನ್‌ ಹಾಗೂ ಪೇರಿ ಮೀ. ರೋಡ್‌, ಏರ್‌ಪೋರ್ಟ್‌ ಸುತ್ತ ಕಾಂಪೌಂಡ್‌ ನಿರ್ಮಾಣದ ಕೆಲಸ ಪ್ರಗತಿಯಲ್ಲಿದೆ. ಪ್ಯಾಕೇಜ್‌ 2ರಲ್ಲಿ 57.44 ಕೋಟಿ ರೂ.ವೆಚ್ಚದಲ್ಲಿ ಟರ್ಮಿನಲ್‌ ಬಿಲ್ಡಿಂಗ್‌, ವಾಚ್‌ಟವರ್‌, ಎಟಿಸಿ ಕಟ್ಟಡ ಇತರೆ ಕಾಮಗಾರಿಗಳ ಕೆಲಸ ಪ್ರಾರಂಭವಾಗಿದೆ ಎಂದರು.

ಟಾಸ್ಕ್ ಫೋರ್ಸ್‌ ರಚನೆ: ಕಾಡಾನೆ ಮತ್ತು ಮಾನವ ಸಂಘರ್ಷವನ್ನು ನಿಯಂತ್ರಿಸಲು ಸಕಲೇಶಪುರವನ್ನು ಕೇಂದ್ರ ಸ್ಥಾನವಾಗಿರಿಸಿಕೊಂಡು ಬೇಲೂರು, ಆಲೂರು ಮತ್ತು ಸಕಲೇಶಪುರ ತಾಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಸರ್ಕಾರವು ಜಿಲ್ಲಾ ಆನೆ ಕಾರ್ಯ ಪಡೆ ರಚಿಸಿದೆ. ವನ್ಯಮೃಗಗಳ ದಾಳಿಯಿಂದ ಪ್ರಾಣ ಹಾನಿ ಸಂಭವಿಸಿದಾಗ ನೀಡುತ್ತಿದ್ದ ಪರಿಹಾರದ ಮೊತ್ತವನ್ನು 7.50 ಲಕ್ಷ ರೂ.ಗಳಿಂದ 15 ಲಕ್ಷ ರೂ. ಗಳಿಗೆ, ಶಾಶ್ವತ ದಿವ್ಯಾಂಗ ಪರಿಹಾರವನ್ನು 5 ಲಕ್ಷ ರೂ.ನಿಂದ 10 ಲಕ್ಷ ರೂ.ಗೆ ಪರಿಹಾರ ಮೊತ್ತ, ಬೆಳೆ ನಷ್ಟವನ್ನು ದ್ವಿಗುಣಗೊಳಿಸಲಾಗಿದೆ ಎಂದರು. 75 ಕೆರೆಗಳ ಅಭಿವೃದ್ಧಿ: ಅಮೃತ್‌ ಸರೋವರ ಯೋಜನೆಯಡಿ 2022-23 ನೇ ಸಾಲಿನಲ್ಲಿ ಜಿಲ್ಲೆ ಯಲ್ಲಿ ಒಟ್ಟು 75 ಕೆರೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, 8 ಕೆರೆ ಕಾಮಗಾ ರಿಗಳು ಪೂರ್ಣ ಗೊಂಡಿದ್ದು, ಉಳಿದ ವುಗಳು ಪ್ರಗತಿ ಯಲ್ಲಿವೆ ಎಂದರು.

ಪ್ರತಿ ಕುಟುಂಬಕ್ಕೆ ಶುದ್ಧ ಕುಡಿಯುವ ನೀರು ಪೂರೈಸಲು ನಳ ಸಂಪರ್ಕ ಕಲ್ಪಿಸಲಾ ಗುತ್ತಿದ್ದು ಒಟ್ಟು 838 ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಡಿಸೆಂಬರ್‌ ಅಂತ್ಯಕ್ಕೆ 480 ಕಾಮ ಗಾರಿಗಳನ್ನು ಪೂರ್ಣಗೊಳಿಸಿ, 177 ಕೋಟಿ ರೂ. ವೆಚ್ಚ ಮಾಡಲಾಗಿದೆ. ಬ್ಯಾಚ್‌ 3 ಮತ್ತು 4 ರ ಕಾಮಗಾರಿಗಳೂ ಪ್ರಗತಿಯಲ್ಲಿವೆ ಎಂದು ಹೇಳಿದರು.

10,254 ಮನೆಗಳು ಮಂಜೂರು: ಜಿಲ್ಲೆಗೆ ಬಸವ ವಸತಿ ಯೋಜನೆ, ಅಂಬೇಡ್ಕರ್‌ ವಸತಿ ಹಾಗೂ ಪ್ರಧಾನಮಂತ್ರಿ ಆವಾಸ್‌ ಯೋಜನೆಗಳಲ್ಲಿ ಒಟ್ಟು 10,254 ಮನೆಗಳು ಮಂಜೂರಾಗಿದ್ದು, ಇದುವರೆಗೆ 4,983 ಮನೆಗಳು ಪೂರ್ಣಗೊಂಡಿವೆ. ಉಳಿದ 4.099 ಮನೆಗಳು ಮೇಲ್ಛಾವಣಿ, ಗೋಡೆ ತಳಪಾಯ ಹಾಗೂ ವಿವಿಧ ಹಂತದಲ್ಲಿವೆ ಎಂದರು.

5 ನಮ್ಮ ಕ್ಲಿನಿಕ್‌ ಆರಂಭ: ಜಿಲ್ಲೆಯಲ್ಲಿ ಒಟ್ಟು 5 ನಮ್ಮ ಕ್ಲಿನಿಕ್‌ ಪ್ರಾರಂಭಿಸಲಾ ಗಿ ದೆ. 15 ಸಮುದಾಯ ಆರೋ ಗ್ಯ ಕೇಂದ್ರಗಳು, 7 ತಾಲೂಕು ಆಸ್ಪತ್ರೆಗಳು ಮತ್ತು ಒಂದು ಜಿಲ್ಲಾ ಆಸ್ಪತ್ರೆಯಲ್ಲಿ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯನ್ನು ಪರಿಣಾ ಮಕಾರಿಯಾಗಿ ಅನುಷ್ಠಾನಗೊಳಿಸ ಲಾಗಿದ್ದು, 2022 ನೇ ಸಾಲಿನಲ್ಲಿ 1.20 ಲಕ್ಷ ಫ‌ಲಾನುಭಗಳಿಗೆ 51.88 ಕೋಟಿ ರೂ ಮೊತ್ತದ ಉಚಿತ ಚಿಕಿತ್ಸೆಯನ್ನು ನೀಡಲಾಗಿದೆ.

ಪ್ಯಾರಾಗ್ಲೈಡಿಂಗ್‌ಗೆ ಚಾಲನೆ: ಸಕಲೇಶಪುರ ತಾಲೂಕಿನ ಹೊಸಹಳ್ಳಿ ಬೆಟ್ಟದಲ್ಲಿ ಪ್ಯಾರಾ ಗ್ಲೈಡ್‌ಗೆ ಈಗಾಗಲೇ ಅನುಮತಿ ನೀಡಿದೆ. ಜಿಲ್ಲೆಯ ಲ್ಲಿ 23.61 ಕೋಟಿ ರೂ.ಗಳ ಅನುದಾನದಲ್ಲಿ 26 ಪ್ರವಾಸೋದ್ಯಮ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಬಹುತೇಕ ಕಾಮಗಾರಿಗಳು ಪೂರ್ಣಗೊಳ್ಳುವ ಹಂತದಲ್ಲಿವೆ ಎಂದು ತಿಳಿಸಿದರು.

ಗೋಶಾಲೆಗಳ ಪ್ರಾರಂಭ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಅರಸೀಕೆರೆ ತಾಲೂಕಿನ ಹಬ್ಬನಘಟ್ಟ ಅಮೃತ್‌ ಮಹಲ್‌ ಕಾವಲಿನಲ್ಲಿ ಒಂದು ಕೋಟಿ ರೂ.ವೆಚ್ಚದಲ್ಲಿ ಸರ್ಕಾರಿ ಗೋಶಾಲೆ ನಿರ್ಮಾಣ ಮಾಡಿ ಮೂಲಭೂತ ಸೌಕರ್ಯ ಕಲ್ಪಿಸಿದ್ದು, ಪ್ರಸ್ತುತ 102 ಕ್ಕೂ ಹೆಚ್ಚು ಜಾನುವಾರು ಮತ್ತು 29 ಗಂಡುಕರುಗಳನ್ನು ಸಂರಕ್ಷಿಸಿ ನಿರ್ವಹಣೆ ಮಾಡಲಾಗುತ್ತಿದೆ. ಜಿಲ್ಲೆಗೆ ಮೂರು ಗೋಶಾಲೆ ತೆರೆಯಲು ಅನುಮೋದನೆ ನೀಡಿದ್ದು, ಚನ್ನರಾಯಪಟ್ಟಣದ ಅಮೃತ್‌ ಮಹಲ್‌ ತಳಿ ಸಂವರ್ಧನ ಉಪಕೇಂದ್ರ, ರಾಯಸಮುದ್ರ ಕಾವಲಿನ 25 ಎಕರೆಯಲ್ಲಿ 50 ಲಕ್ಷ ರೂ.ಅನುದಾನದಲ್ಲಿ ಗೋಶಾಲೆ ನಿರ್ವಹಿಸಲು ಶಂಕುಸ್ಥಾಪನೆ ನೆರವೇರಿಸಲಾಗಿದೆ. ಹಳೇಬಿಡು ಹೋಬಳಿ ಸಿದ್ಧಾಪುರ ಗ್ರಾಮದ 9.38 ಎಕರೆ ಜುàನಿನಲ್ಲಿ ಗೋಶಾಲೆ ತೆರೆಯಲು 50 ಲಕ್ಷ ರೂ.ಅನುದಾನ ಬಿಡುಗಡೆ ಮಾಡ ಲಾಗಿದೆ. ಅರಕಲಗೂಡು ತಾಲೂಕಿನಲ್ಲಿ ಗೋಶಾಲೆ ನಿರ್ಮಿಸಲು ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

Vachanananda Swamiji spoke about getting reservation to Panchmasali community

ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

1-manipal-station

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ

tdy-2

ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cc

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ

tdy-15

ಪ್ರತಿ ಮನೆಗೆ ಪ್ರಧಾನಿ ಮೋದಿ ಅಭಿವೃದ್ದಿ ಕಾರ್ಯ ತಿಳಿಸುತ್ತೇವೆ  

ಸಂಭಾಷಣೆ ಯಾವುದೇ ರೀತಿಯಲ್ಲಿ ಎಡಿಟ್‌ ಮಾಡಿಲ್ಲ: ರೇವಣ್ಣ

ಸಂಭಾಷಣೆ ಯಾವುದೇ ರೀತಿಯಲ್ಲಿ ಎಡಿಟ್‌ ಮಾಡಿಲ್ಲ: ರೇವಣ್ಣ

ಎಲ್ಲರಿಂದಲೂ ಸಮ್ಮತಿ ಸಿಕ್ಕಿದರೆ ಮಾತ್ರ ಸ್ಪರ್ಧೆ: ರಾಜೇಗೌಡ

ಎಲ್ಲರಿಂದಲೂ ಸಮ್ಮತಿ ಸಿಕ್ಕಿದರೆ ಮಾತ್ರ ಹಾಸನ ಕ್ಷೇತ್ರದಲ್ಲಿ ಸ್ಪರ್ಧೆ: ರಾಜೇಗೌಡ

ದೇವೇಗೌಡರು ನನ್ನ ರಾಜಕೀಯ ಗುರು: ಎ.ಮಂಜು

ದೇವೇಗೌಡರು ನನ್ನ ರಾಜಕೀಯ ಗುರು: ಎ.ಮಂಜು

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

Vachanananda Swamiji spoke about getting reservation to Panchmasali community

ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

1-manipal-station

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.