ಅಕ್ರಮವಾಗಿ ಸಂಗ್ರಹಿಸಿದ್ದ 485 ಕೆಜಿ ಅಕ್ಕಿ ವಶ
Team Udayavani, May 1, 2020, 2:23 PM IST
ಸಾಂದರ್ಭಿಕ ಚಿತ್ರ
ಸಕಲೇಶಪುರ: ನ್ಯಾಯಬೆಲೆ ಅಂಗಡಿ ಮಾಲೀಕರು ಅಕ್ರಮವಾಗಿ ಸಂಗ್ರಹಿಸಿದ್ದ 485 ಕೇಜಿ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ನ್ಯಾಯಬೆಲೆ ಅಂಗಡಿ ಮಾಲೀಕ ತಾಲೂಕಿನ ಕುಂಬರ್ಡಿ ಗ್ರಾಮದ ಸದಾಶಿವ ಅವರು ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಸರ್ಕಾರ ನಿಗದಿಪಡಿಸಿದಷ್ಟು ಅಕ್ಕಿ ನೀಡದೇ ವಂಚಿಸಿದ್ದಾರೆಂದು ಗ್ರಾಪಂ ಸದಸ್ಯ ರಘುನಂದನ್
ಉಪ ವಿಭಾಗಾಧಿಕಾರಿ ಗಿರೀಶ್ ನಂದನ್ ಹಾಗೂ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕಿ ಸವಿತಾ ಅವರಿಗೆ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಈ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಹಾಗೂ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕಿ ಸವಿತಾ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಅಂತ್ಯೋದಯ ಹಾಗೂ ಬಿಪಿಎಲ್ ಫಲಾನುಭವಿಗಳಿಗೆ ನಿಗದಿಗೊಳಿಸಿರುವುದಕ್ಕಿಂತ ಕಡಿಮೆ ಅಕ್ಕಿ ನೀಡಿರುವ ಬಗ್ಗೆ ಮಾಹಿತಿ ನೀಡಿದರು. ಅಧಿಕಾರಿಗಳು ನ್ಯಾಯಬೆಲೆ ಅಂಗಡಿ ಮಾಲೀಕ ಸದಾಶಿವ ಮನೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಅಕ್ರಮವಾಗಿ ಸಂಗ್ರಹಿಸಿದ್ದ 485 ಕೆಜಿ ಅಕ್ಕಿ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಪಂ ಇಒಜಿ.ಆರ್.ಹರೀಶ್, ಹೆಬ್ಬಸಾಲೆ ಪಿಡಿಒ ವತ್ಸಲಾ ಕುಮಾರಿ, ಗ್ರಾಮಾಂತರ ಪಿಎಸ್ಐ ಚಂದ್ರಶೇಖರ್ ಇದ್ದರು.