ಒಂದೇ ದಿನ 7 ಕೋವಿಡ್‌ 19 ಪ್ರಕರಣ


Team Udayavani, May 16, 2020, 7:11 AM IST

7 prakarana

ಹಾಸನ: ಕೊರೊನಾ ಹರಡದಂತೆ ಕೈಗೊಂಡಿದ್ದ ಮುನ್ನೆಚ್ಚರಿಕೆ ಕ್ರಮಗಳಿಂದ ಹಸಿರು ವಲಯದಲ್ಲಿದ್ದ ಹಾಸನ ಜಿಲ್ಲೆಗೆ ಮಂಬೈನ ನಂಟು ಮಾರಕವಾಗಿ ಪರಿಣಮಿಸಿದೆ. ಶುಕ್ರವಾರ ಒಂದೇ ದಿನ 7 ಪಾಸಿಟಿವ್‌ ಪ್ರಕರಣ ವರದಿಯಾಗಿದ್ದು  ನಾಲ್ಕೇ ದಿನಗಳಲ್ಲಿ ಜಿಲ್ಲೆಯಲ್ಲಿ ಕೊರೊನಾ ಶಂಕಿತರ ಸಂಖ್ಯೆ 16ಕ್ಕೆ ಏರಿದೆ.

ಲಾಕ್‌ಡೌನ್‌ ಸಡಿಲಿಕೆ ಸೇವಾಸಿಂಧು ಆ್ಯಪ್‌ ಮೂಲಕ ಪಾಸ್‌ ಪಡೆದು ಮುಂಬೈನಿಂದ ಬಂದವರಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಕಳೆದ 2 ದಿನದ  ಪಾಸಿಟಿವ್‌ ಪ್ರಕರಣಗಳು ಚನ್ನರಾಯಪಟ್ಟಣ ತಾಲೂಕಿನ ಮೀಲದವರಿಗೆ ಮಾತ್ರ ಸೀಮಿತವಾಗಿದ್ದು, ಶುಕ್ರವಾರ ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕಿನ ಮೂಲದವರಲ್ಲೂ ಕೊರೊನಾ ಪಾಸಿಟಿವ್‌ ಕಂಡು ಬಂದಿದೆ.

ಆತಂಕ ಸೃಷ್ಟಿ:ಮೇ 12 ರಂದು ಚನ್ನರಾಯ ಪಟ್ಟಣದ ಮೂಲದ ಐವರಲ್ಲಿ ಕೊರೊನಾ ಪಾಸಿಟಿವ್‌ ಕಂಡು ಬಂದಿದ್ದರೆ, ಮೇ 13ರ ಬುಧವಾರ ಮತ್ತೆ ನಾಲ್ವರಲ್ಲಿ ಕೊರೊನಾ ಪಾಸಿಟಿವ್‌ ಕಂಡು ಬಂದಿದ್ದು ಈ ಮೂಲಕ ಕೊರೊನಾ  ಶಂಕಿತರ ಸಂಖ್ಯೆ 9ಕ್ಕೆ ಏರಿತ್ತು. ಆದರೆ ಮೇ14ರಂದು ಪಾಸಿಟಿವ್‌ ಪ್ರಕರಣಗಳು ವರದಿಯಾಗದೆ ತುಸು ಸಮಾಧಾನ ತಂದಿತ್ತು. ಆದರೆ, ಶುಕ್ರವಾರ 7 ಪಾಸಿಟಿವ್‌ ಪ್ರಕರಣ ವರದಿ ಆಗುವುದರೊಂದಿಗೆ ಆತಂಕ ಹೆಚ್ಚಿಸಿದೆ.

ಪಾಸಿಟಿವ್‌:ಶುಕ್ರವಾರ ಕಂಡು ಬಂದಿ ರುವ ಪ್ರಕರಣಗಳಲ್ಲಿ ಅರಕಲ ಗೂಡು ತಾಲೂಕಿನ ಮೂಲದ ಇಬ್ಬರು, ಹೊಳೆನರಸೀಪುರ ಮೂಲದ ಇಬ್ಬರು,ಚನ್ನರಾಯಪಟ್ಟಣ ಮೂಲದ ಮೂವರು ಸೇರಿದ್ದಾರೆ. ಮೇ 12ರ ರಾತ್ರಿ 26 ಜನರು  ಮುಂಬೈನ ದಾದರ್‌ನಿಂದ ಖಾಸಗಿ ಬಸ್‌ ಮಾಡಿಕೊಂಡು ಬಂದಿದ್ದು, ಅವರಲ್ಲಿ ಹೊಳೆನರಸೀಪುರ ತಾಲೂಕಿನ ಮೂಲದ ಇಬ್ಬರಿಗೆ ಪಾಸಿಟಿವ್‌ ಕಂಡು ಬಂದಿದೆ.

ಅರಕಲಗೂಡು ತಾಲೂಕಿನ ಮೂಲದ ಮೂವರು ಒಂದು ಕಾರಿನಲ್ಲಿ  ನೇರವಾಗಿ ಬಂದಿದ್ದರು. ಅವರಲ್ಲಿ ಒಬ್ಬ ಯುವಕನಿಗೆ ಪಾಸಿಟಿವ್‌ ಕಂಡು ಬಂದಿದೆ. ಅದೇ ತಾಲೂಕಿನ ಒಬ್ಬ ಮಹಿಳೆಗೂ ಪಾಸಿಟಿವ್‌ ಬಂದಿದೆ. ಚನ್ನರಾಯಪಟ್ಟಣ ತಾಲೂಕಿನ 8 ಮಂದಿ ಒಂದು ಕ್ವಾಲಿಸ್‌ ವ್ಯಾನ್‌ನಲ್ಲಿ ಮುಂಬೈನಿಂದ ಬಂದಿದ್ದು ಅವರಲ್ಲಿ ಮೂವರಿಗೆ ಪಾಸಿಟಿವ್‌ ಕಂಡು ಬಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಕ್ವಾರಂಟೈನ್‌ನಲ್ಲಿ ಸಾಮೂಹಿಕ ಟಿಕ್‌ಟಾಕ್:‌ ಆಕ್ರೋಶ
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಜನರ ನಿದ್ದೆಗೆಡಿಸಿರುವ ಗೂರಮಾರನಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ತೆರೆದಿರುವ ಸಮುದಾಯ ಕ್ವಾರಂಟೈನ್‌ ಕೇಂದ್ರ ಮತ್ತೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹೊರ ರಾಜ್ಯ ಹಾಗೂ ಜಿಲ್ಲೆಯಿಂದ ಆಗಮಿಸಿದವರನ್ನು ವಸತಿ ಶಾಲೆಯಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಈಗಾಗಲೇ 11 ಮಂದಿಗೆ ಕೊರೊನಾ ತಗುಲಿದೆ.

ಆದರೆ ಇದೇ ಸ್ಥಳದಲ್ಲಿ ಬೇರೆ ಕಟ್ಟಡದಲ್ಲಿ ಕ್ವಾರಂಟೈನ್‌ನಲ್ಲಿ ಇರುವವರು ಸಾಮಾಜಿಕ ಅಂತರ  ಕಾಯ್ದುಕೊಳ್ಳದೆ “ಜೇನಿನ ಗೂಡು ನಾವೆಲ್ಲಾ, ಬೇರೆಯಾದರೆ ಜೇನಿಲ್ಲ’ ಎಂಬ ಹಾಡಿಗೆ ಟಿಕ್‌ಟಾಕ್‌ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹರಿ ಬಿಟ್ಟಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಕ್ವಾರಂಟೈನ್‌ನಲ್ಲಿರುವ ಹಲವರು ಸಾಮಾಜಿಕ  ತರ ಮರೆತು ಬೇಜವಾಬ್ದಾರಿತನದಿಂದ ಒಟ್ಟಿಗೆ ಸೇರಿ ಹಾಡಿ ಕುಣಿದು ಸ್ವತಃ ಅವರೇ ಸಾಮಾಜಿಕ ಜಾಲತಾಣಕ್ಕೆ ವಿಡಿಯೋ ತುಣುಕು ಹರಿಬಿಟ್ಟಿದ್ದಾರೆ. ತಾಲೂಕು ಆಡಳಿತ ಹಾಗೂ ತಾಲೂಕು ಆರೋಗ್ಯ ಇಲಾಖೆ ಇತ್ತ ಗಮನಹರಿಸಿ  ಕ್ವಾರಂಟೈನ್‌ನಲ್ಲಿರುವವರು ಸಾಮಾಜಿಕ ಅಂತರ ಮರೆತು ಟಿಕ್‌ಟಾಕ್‌ ಮಾಡುತ್ತಿರುವ ಕಾರ್ಯಕ್ಕೆ ಕಡಿವಾಣ ಹಾಕಬೇಕೆಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.