ರಸ್ತೆಗೆ ಬಾಗಿದ ಮರದ ಕೊಂಬೆಗಳು


Team Udayavani, Mar 5, 2023, 4:06 PM IST

tdy-15

ಆಲೂರು: ತಾಲೂಕಿನ ಬೈರಾಪುರ ಗ್ರಾಮದಿಂದ ಮಗ್ಗೆ ಗ್ರಾಮ ಹಾಗೂ ಆಲೂರಿನಿಂದ ಕಾಮತಿ ಕೂಡಿಗೆ ಹೋಗುವ ರಸ್ತೆ ಇಕ್ಕೆಲಗಳಲ್ಲಿರುವ ಅಕೆಶ್ಯಾ ಮರಗಳ ಕೊಂಬೆಗಳು ರಸ್ತೆಗೆ ಬಾಗಿಕೊಂಡಿದ್ದು, ವಾಹನ ಹಾಗೂ ಪಾದಚಾರಿ ಸಂಚಾರಕ್ಕೆ ತೊಂದರೆ ಆಗುತ್ತಿದೆ.

ರಸ್ತೆಯಲ್ಲಿ ಓಡಾಡುವ ಸಾರ್ವಜನಿಕ ಪಾದಚಾರಿಗಳು ಮತ್ತು ವಾಹನ ಸವಾರರಿಗೆ ನೆರಳಿನ ಆಸರೆಯಾಗಲಿ ಎನ್ನುವ ಉದ್ದೇಶದಿಂದ 30 ವರ್ಷದ ಹಿಂದೆ ಅರಣ್ಯ ಇಲಾಖೆ ರಸ್ತೆಯ ಎರಡು ಬದಿಗಳಲ್ಲಿ ಹಾಕಿದ್ದ ಅಕೆಶ್ಯಾ ಮರಗಳು ದೊಡ್ಡದಾಗಿ ಹೆಮ್ಮರವಾಗಿ ಬೆಳೆದಿವೆ. ರಸ್ತೆಯ ತಿರುವುಗಳಲ್ಲಿ ಎದುರಿನಿಂದ ಬರುವ ವಾಹನಗಳು ಕಾಣಿಸದಿರುವುದರಿಂದ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಇದರ ಜೊತೆಗೆ ಮಳೆ-ಗಾಳಿಗೆ  ಮರಗಳು ವಾಹನ ಹಾಗೂ ವಾಹನ ಸವಾರರ ಮೇಲೆ ಬೀಳುವುದರಿಂದ ಅಪಾರ ನಷ್ಟ ಅನುಭವಿಸುತ್ತಿದ್ದಾರೆ.

ಜನಸಾಮಾನ್ಯರಿಗೆ ಕಿರಿಕಿರಿ: ಇದರಿಂದ ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಹಾಗೂ ಜನಸಾಮಾನ್ಯರು ಕಿರಿಕಿರಿ ಅನಿಭವಿಸುವಂತಾಗಿದೆ. ಅಕೆಶ್ಯಾ ಮರದ ಬೇರುಗಳು ಆಳವಾಗಿರದೇ ಮೇಲ್ಪದರದಲ್ಲಿ ಅಗಲವಾಗಿ ಬೆಳೆದಿರುವುದರಿಂದ ಸ್ವಲ್ಪ ಗಾಳಿ-ಮಳೆಯಾದರೂ ಮರಗಳು ನೆಲಕ್ಕೆ ಉರುಳುತ್ತವೆ. ಈ ರಸ್ತೆಯಲ್ಲಿ ಓಡಾಡುವ ಜನರು ಹಾಗೂ ವಾಹನಗಳು ಭಯದಿಂದ ಓಡಾಡದಂತಹ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ.

ಜೀವ ಕೈಯಲ್ಲಿಡಿದು ಓಡಾಡುವಂತಹ ಸ್ಥಿತಿ: ರಸ್ತೆಯಲ್ಲಿ ಓಡಾಡುವ ಸಾವಿರಾರು ವಾಹನ ಹಾಗೂ ವಾಹನ ಸವಾರರು ಜೀವ ಕೈಯಲ್ಲಿಡಿದು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಗಾರು ಮಳೆ ಪ್ರಾರಂಭವಾಗುವ ಮೊದಲು ಸಂಚಾರಕ್ಕೆ ಅಡ್ಡಿಯಾಗುವ ಮರಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿ ಕೊಡಿ : ರಸ್ತೆಯಲ್ಲಿ ಸ್ವಲ್ಪ ಮಳೆ-ಗಾಳಿಯಾದರೂ ಮರಗಳು ನೆಲಕ್ಕೆ ಉರುಳುತ್ತವೆ. ಇದರಿಂದ ಸಾರ್ವಜನಿಕರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಅರಣ್ಯ ಇಲಾಖೆಯವರು ರಸ್ತೆಗೆ ಬಾಗಿರುವ ಹಾಗೂ ಶಿಥಿಲವಾದ ಮರಗಳನ್ನು ತೆರವುಗೊಳಿಸಿ ವಾಹನ ಸುಗಮ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ಓಡಾಡಲು ಅನುವು ಮಾಡಿಕೊಡಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್‌ ಒತ್ತಾಯಿಸಿದರು.

ಶಿಥಿಲಗೊಂಡ ಹಳೆ ಮರ ತೆರವುಗೊಳಿಸಿ : ರಸ್ತೆಯ ಇಕ್ಕೆಲಗಳಲ್ಲಿರುವ ಕೆಲವು ಮರಗಳು ಶಿಥಿಲಗೊಂಡು ಒಣಗಿ ರಸ್ತೆಯಲ್ಲಿ ಓಡಾಡುವ ಪಾದಚಾರಿಗಳು ಹಾಗೂ ವಾಹನಗಳ ಮೇಲೆ ಬೀಳುವ ಸ್ಥಿತಿಯಲ್ಲಿವೆ. ಕೆಲವು ಮರಗಳು ರಸ್ತೆಗೆ ವಾಲಿಕೊಂಡಿದ್ದರೂ, ಸಂಬಂಧಪಟ್ಟವರು ಅವುಗಳನ್ನು ತೆಗೆಯಲು ಮುಂದಾಗುವುದಿಲ್ಲ. ಅನಾಹುತ ಆಗುವುದಕ್ಕಿಂತ ಮುಂಚೆ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಸೇವಕ ಎಂ.ಬಾಲಕೃಷ್ಣ ಆಗ್ರಹಿಸಿದರು.

ಬೈರಾಪುರ ಮಗ್ಗೆ ರಸ್ತೆಯಲ್ಲಿರುವ ಕೆಲವು ಅಕೆಶ್ಯಾ ಮರಗಳು ಅಪಾಯದಲ್ಲಿದ್ದು, ಬಾಗಿರುವ ಹಾಗೂ ಶಿಥಿಲವಾದ ಮರಗಳನ್ನು ತೆರವುಗೊಳಿಸಲು 200 ಮರ ಗುರುತಿಸಿ ನಂಬರ್‌ ಮಾಡಿ ಅನುಮೋದನೆಗಾಗಿ ಎಸಿಎಫ್ ಹಾಗೂ ಡಿಎಫ್ಒ ಕಚೇರಿಗೆ ಕಳುಹಿಸಲಾಗಿದೆ. ಅನುಮೋದನೆ ಸಿಕ್ಕ ನಂತರ ಅದಷ್ಟು ಬೇಗ ಮರಗಳನ್ನು ತೆರವುಗೊಳಿಸಲಾಗುವುದು. – ಎಚ್‌.ಕೆ. ಮರಿಸ್ವಾಮಿ, ಆರ್‌ಎಫ್ಒ, ಆಲೂರು ತಾಲೂಕು

-ಟಿ.ಕೆ.ಕುಮಾರಸ್ವಾಮಿ ಟಿ.ತಿಮ್ಮನಹಳ್ಳಿ,

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.