ಜಲ ಮೂಲ ಸಂರಕ್ಷಣೆಗೆ ಕ್ರಮ: ರೂಪಾ


Team Udayavani, Mar 17, 2020, 3:00 AM IST

jalamolla

ಅರಸೀಕೆರೆ: ಜಲಸಾಕ್ಷರತೆ, ಜಲಸಂರಕ್ಷಣೆ ಆಂದೋಲನದ ಮೂಲಕ ಜಲ ಮೂಲಗಳಾದ ಕೆರೆ,ಕಟ್ಟೆಗಳು ಹಾಗೂ ಕಲ್ಯಾಣಿಗಳ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಹಸಿರು ಭೂಮಿ ಪ್ರತಿಷ್ಠಾನ ಕಳೆದ 3 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಸಾಹಿತಿ ರೂಪಾ ಹಾಸನ ತಿಳಿಸಿದರು.

ನಗರದ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ತಾಲೂಕು ಆಡಳಿತ ಹಾಗೂ ಹಸಿರು ಭೂಮಿ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ಗ್ರಾಪಂ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳಿಗೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.

ಕಳೆದ 3 ವರ್ಷಗಳ ಹಿಂದೆ ಪ್ರಾರಂಭಗೊಂಡ ಹಸಿರು ಭೂಮಿ ಪ್ರತಿಷ್ಠಾನ ಜೀವಜಲದ ಸಂರಕ್ಷಣೆಗೆ ಕಂಕಣಬದ್ಧವಾಗಿದ್ದು, ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಜನಸಮುದಾಯವು ಸ್ವಯಂಪ್ರೇರಣೆಯಿಂದ ಕೆರೆಕಟ್ಟೆಗಳು ಮತ್ತು ಕಲ್ಯಾಣಿಗಳ ಪುನಶ್ಚೇತನಗೊಳಿಸಲು ಪ್ರೇರಣೆ ನೀಡುತ್ತಿದೆ ಎಂದರು.

ಕೆರೆ, ಕಟ್ಟೆಗಳ ಪುನಶ್ಚೇತನ: ಅರಸೀಕೆರೆ ತಾಲೂಕಿನ ಬಾಣಾವರ,ಯಾದಾಪುರ, ಚಗಚಗೆರೆ ಸೇರಿದಂತೆ ಜಿಲ್ಲೆಯಲ್ಲಿನ 13 ಕೆರೆಗಳನ್ನು ಹಾಗೂ 45 ಪುರಾತನ ಕಲ್ಯಾಣಿಗಳನ್ನು ಪುನಶ್ಚೇತನಗೊಳಿಸಲಾಗಿದೆ. ಅಲ್ಲದೆ 100ಕ್ಕೂ ಹೆಚ್ಚಿನ ಜಾಗದಲ್ಲಿ 35 ಸಾವಿರಕ್ಕೂ ಹೆಚ್ಚಿನ ಗಿಡಗಳನ್ನು ನೆಡುವ ಮೂಲಕ ಹಸಿರು ಕ್ರಾಂತಿಗೆ ನಾಂದಿ ಹಾಡಿದೆ ಎಂದರು.

ಜಲಾಂದೋಲನ: ಮಾ.22 ರ ವಿಶ್ವಜಲ ದಿನದಿಂದ ಏ.22ರ ವಿಶ್ವ ಭೂ ದಿನದವರೆಗೆ ಜಿಲ್ಲೆಯಲ್ಲಿ ಪಾರಂಪರಿಕ ಜಲಮೂಲಗಳ ಹೂಳೆತ್ತು ಮೂಲಕ ಪುನಶ್ಚೇತನಗೊಳಿಸುವ ಜಲಾಂದೋಲನ ಕಾರ್ಯವನ್ನು ವಿವಿಧ ಸಂಘ ಸಂಸ್ಥೆಗಳು ಮತ್ತು ಮಹಿಳಾ ಸ್ವಹಾಯ ಸಂಘಗಳ ಸಹಕಾರದಲ್ಲಿ ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ನಮ್ಮ ಪ್ರತಿಷ್ಠಾನವು ಕ್ರೀಯಾಯೋಜನೆಯನ್ನು ರೂಪಿಸಿದ್ದು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಹಕಾರ ನೀಡಬೇಕೆಂದು ಕೋರಿದರು.

ಹಸಿರು ಭೂಮಿ ಪ್ರತಿಷ್ಠಾನದ ಉಪಾಧ್ಯಕ್ಷೆ ಸೌಭಾಗ್ಯಮ್ಮ ಅವರು ಕಳೆದ 3 ವರ್ಷಗಳಿಂದ ಪ್ರತಿಷ್ಠಾನದ ಮೂಲಕ ಪುನಶ್ಚೇತನಗೊಂಡ ಕೆರೆಗಳು ಕಲ್ಯಾಣಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಹಸಿರು ಭೂಮಿ ಪ್ರತಿಷ್ಠಾನದ ಅಧ್ಯಕ್ಷರಾದ ಅಪ್ಪಾಜಿ ಗೌಡ ತಾಲೂಕು ಪಂಚಾಯಿತಿ ಅಧ್ಯಕ್ಷೆ ರೂಪಾ, ತಾಪಂ ಇಒ ಎಸ್‌.ಪಿ.ನಟರಾಜು ಮಾತನಾಡಿದರು. ಕಾರ್ಯಾಗಾರದಲ್ಲಿ ತಾಲೂಕಿನ ಎಲ್ಲಾ ಗ್ರಾಪಂ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇನ್ನಿತರರು ಭಾಗವಹಿಸಿದ್ದರು.

ನೈಸರ್ಗಿಕ ಸಂಪತ್ತು ರಕ್ಷಿಸಿ: ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಸ್‌.ಚಂದ್ರಶೇಖರ್‌ ಮಾತನಾಡಿ, ನೈಸರ್ಗಿಕ ಸಂಪತ್ತು ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ಹಣಗಳಿಕೆಗಾಗಿ ಪರಿಸರ ನಾಶ ಮಾಡಿದರೆ ಮುಂದಿನ ದಿನಗಳಲ್ಲಿ ದುಷ್ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.

ತಾಲೂಕಿನ ಕೆರೆಗಳು, ಕಲ್ಯಾಣಿಗಳನ್ನು ಸ್ಥಳೀಯ ಸಂಘ ಸಂಸ್ಥೆಗಳು ಮಹಿಳಾ ಸ್ವಹಾಯ ಸಂಘಗಳ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಪುನಶ್ಚೇತನಗೊಳಿಸಲು ಗ್ರಾಪಂ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳು ಮುಂದಾಗುವ ನಿಟ್ಟಿನಲ್ಲಿ ಭವಿಷ್ಯದಲ್ಲಿ ನಮ್ಮ ಮುಂದಿನ ಪೀಳಿಗೆಗೆ ಜೀವಜಲವನ್ನು ಸಂರಕ್ಷಣೆ ಮಾಡಲು ಸಂಕಲ್ಪ ಮಾಡಬೇಕೆಂದರು.

ಟಾಪ್ ನ್ಯೂಸ್

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ

ಬೃಹತ್‌ ಅನ್ಯ ಗ್ರಹ ಪತ್ತೆ: ಭಾರತದ ವಿಜ್ಞಾನಿಗಳಿಂದ ಈ ಸಾಧನೆ

ಬೃಹತ್‌ ಅನ್ಯ ಗ್ರಹ ಪತ್ತೆ: ಭಾರತದ ವಿಜ್ಞಾನಿಗಳಿಂದ ಈ ಸಾಧನೆ

manish sisodia

ಸಿಸೋಡಿಯಾಗಿಲ್ಲ ಜಾಮೀನು

ರಕ್ಷಣ ಸರಕು ರಫ್ತಿನಲ್ಲಿ ಭಾರತ ಸಾರ್ವಕಾಲಿಕ ದಾಖಲೆ: 10 ವರ್ಷಗಳಲ್ಲಿ 23 ಪಟ್ಟು ಹೆಚ್ಚಳ

ರಕ್ಷಣ ಸರಕು ರಫ್ತಿನಲ್ಲಿ ಭಾರತ ಸಾರ್ವಕಾಲಿಕ ದಾಖಲೆ: 10 ವರ್ಷಗಳಲ್ಲಿ 23 ಪಟ್ಟು ಹೆಚ್ಚಳ

ನಾಳೆಯೇ ಗ್ಯಾರಂಟಿ? ಜಾರಿಗಾಗಿ ಸಂಪುಟ ಸಹೋದ್ಯೋಗಿಗಳ ಜತೆ ಇಂದು ಸಿಎಂ ನಿರ್ಣಾಯಕ ಸಭೆ

ನಾಳೆಯೇ ಗ್ಯಾರಂಟಿ? ಜಾರಿಗಾಗಿ ಸಂಪುಟ ಸಹೋದ್ಯೋಗಿಗಳ ಜತೆ ಇಂದು ಸಿಎಂ ನಿರ್ಣಾಯಕ ಸಭೆ

ಸರಕಾರಿ ನೌಕರರ ತುಟ್ಟಿಭತ್ತೆ ಶೇ. 4 ಹೆಚ್ಚಳ

ಸರಕಾರಿ ನೌಕರರ ತುಟ್ಟಿಭತ್ತೆ ಶೇ. 4 ಹೆಚ್ಚಳ

ABDUL SAEED

26/11 ಉಗ್ರರ ತರಬೇತುದಾರನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕರ ಎದುರಿಗಿದೆ ಸಮಸ್ಯೆಗಳ ಸರಮಾಲೆ!

ಶಾಸಕರ ಎದುರಿಗಿದೆ ಸಮಸ್ಯೆಗಳ ಸರಮಾಲೆ!

ಅರಸೀಕೆರೆ: ದಶಕ ಕಳೆದರೂ ಯಾತ್ರಿ ನಿವಾಸಕ್ಕಿಲ್ಲಉದ್ಘಾಟನೆ ಭಾಗ್ಯ!

ಅರಸೀಕೆರೆ: ದಶಕ ಕಳೆದರೂ ಯಾತ್ರಿ ನಿವಾಸಕ್ಕಿಲ್ಲಉದ್ಘಾಟನೆ ಭಾಗ್ಯ!

ಶಾಸಕ ಸ್ವರೂಪ್‌ ಎದುರು ಸಾಲು-ಸಾಲು ಸವಾಲು

ಶಾಸಕ ಸ್ವರೂಪ್‌ ಎದುರು ಸಾಲು-ಸಾಲು ಸವಾಲು

ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಪುಸ್ತಕಗಳೇ ಪ್ರೇರಣೆ

ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಪುಸ್ತಕಗಳೇ ಪ್ರೇರಣೆ

ಚನ್ನರಾಯಪಟ್ಟಣಕ್ಕೆ ಮತ್ತೂಮ್ಮೆ ಬರದ ಭೀತಿ!

ಚನ್ನರಾಯಪಟ್ಟಣಕ್ಕೆ ಮತ್ತೂಮ್ಮೆ ಬರದ ಭೀತಿ!

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ

ಬೃಹತ್‌ ಅನ್ಯ ಗ್ರಹ ಪತ್ತೆ: ಭಾರತದ ವಿಜ್ಞಾನಿಗಳಿಂದ ಈ ಸಾಧನೆ

ಬೃಹತ್‌ ಅನ್ಯ ಗ್ರಹ ಪತ್ತೆ: ಭಾರತದ ವಿಜ್ಞಾನಿಗಳಿಂದ ಈ ಸಾಧನೆ

manish sisodia

ಸಿಸೋಡಿಯಾಗಿಲ್ಲ ಜಾಮೀನು

ರಕ್ಷಣ ಸರಕು ರಫ್ತಿನಲ್ಲಿ ಭಾರತ ಸಾರ್ವಕಾಲಿಕ ದಾಖಲೆ: 10 ವರ್ಷಗಳಲ್ಲಿ 23 ಪಟ್ಟು ಹೆಚ್ಚಳ

ರಕ್ಷಣ ಸರಕು ರಫ್ತಿನಲ್ಲಿ ಭಾರತ ಸಾರ್ವಕಾಲಿಕ ದಾಖಲೆ: 10 ವರ್ಷಗಳಲ್ಲಿ 23 ಪಟ್ಟು ಹೆಚ್ಚಳ

ನಾಳೆಯೇ ಗ್ಯಾರಂಟಿ? ಜಾರಿಗಾಗಿ ಸಂಪುಟ ಸಹೋದ್ಯೋಗಿಗಳ ಜತೆ ಇಂದು ಸಿಎಂ ನಿರ್ಣಾಯಕ ಸಭೆ

ನಾಳೆಯೇ ಗ್ಯಾರಂಟಿ? ಜಾರಿಗಾಗಿ ಸಂಪುಟ ಸಹೋದ್ಯೋಗಿಗಳ ಜತೆ ಇಂದು ಸಿಎಂ ನಿರ್ಣಾಯಕ ಸಭೆ