ಪಕ್ಷದ ಕಾರ್ಯಕರ್ತರ ಹಿತ ಕಾಪಾಡಲು ಕ್ರಮ
Team Udayavani, Jul 1, 2020, 7:36 AM IST
ಚನ್ನರಾಯಪಟ್ಟಣ: ಕಾಂಗ್ರೆಸ್ ಪಕ್ಷದಲ್ಲಿ ವರಿಷ್ಠರು ನೀಡುವ ಚೀಟಿಗೆ ಬೆಲೆ ನೀಡುವ ಕಾಲ ಹೋಗುತ್ತಿದೆ. ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರಗೆ ಬೆಲೆ ದೊರೆ ಯುವ ಕಾಲ ಸನಿಹವಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ತಿಳಿಸಿದರು. ಡಿ.ಕೆ.ಶಿವಕುಮಾರ್ ಪದಗ್ರಹಣದ ಅಂಗವಾಗಿ ಪುರಸಭಾ ಸದಸ್ಯರು ಹಾಗೂ ಪಟ್ಟಣದಲ್ಲಿನ ಕಾಂಗ್ರೆಸ್ ಪಕ್ಷದ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಕ್ಷದಲ್ಲಿ ದುಡಿಯುವ ಕಾರ್ಯಕರ್ತ ಮೂಲೆ ಗುಂಪಾಗುತ್ತಿದ್ದಾನೆ. ಮುಖಂಡರು ಹಿಡಿತ ಸಾಧಿಸುತ್ತಿದ್ದಾರೆಂಬ ಆರೋಪ ನಿವಾರಿಸಲು ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂದಾಗಲಿದ್ದಾರೆ ಎಂದರು. ಮುಖಂಡರು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಇದರಿಂದ ಕೆಳ ಮಟ್ಟದ ಕಾರ್ಯಕರ್ತರಿಗೆ ತೊಂದರೆ ಆಗುತ್ತಿದೆ ಎಂಬ ಕೂಗು ಮೈಸೂರು ಭಾಗದಲ್ಲಿ ಕೇಳಿ ಬರುತ್ತಿದೆ.
ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಎಂದಿಗೂ ಇತರ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಸಿದಟಛಿವಿಲ್ಲ ನಮಗೆ ಕಾರ್ಯಕರ್ತರು ಮುಖ್ಯ ಹೊರತು ಅಧಿಕಾವರಲ್ಲ ಎಂದು ನುಡಿದರು. ಕೋವಿಡ್ 19ದಿಂದ ಡಿಕೆಶಿ ಪದಗ್ರಹಣ ಪ್ರತಿ ಗ್ರಾಮಕ್ಕೆ ತಲುಪುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯನ್ನು ವೀಕ್ಷಕರೊಂದಿಗೆ ಮುಖಂಡರು ಸಂಚಾರ ಮಾಡಿ ಬೂತ್ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸಿ ಕೆಪಿಸಿಸಿ ನೂತನ ಸಾರಥಿಗಳ ಕಾರ್ಯಕ್ರಮ ತಲುಪುವಂತೆ ಮಾಡಲು ಶ್ರಮಿಸುತ್ತಿದ್ದಾರೆ ಎಂದರು.
ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ, ಬ್ಲಾಕ್ ಕಾಂಗ್ರೆಸ್ ಮುಖಂಡ ರಾಮಚಂದ್ರ, ಎಪಿಎಂಸಿ ನಿರ್ದೇಶಕ ಎಂ.ಶಂಕರ್, ಯುವ ಮುಖಂಡರಾದ ಕಾರ್ತೀಕ್, ಕಿರಣ್, ಕಿಶೋರ, ಮೋಹನ್, ವೀಕ್ಷಕರಾದ ಕಮಲಾಕ್ಷಿ, ಕ್ಷೇತ್ರದ ಉಸ್ತುವಾರಿ ಸಂಜಯಗೌಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ