ಶ್ರವಣಬೆಳಗೊಳದ ದಿಗಂಬರ ಜೈನಮಠ: ಆಗಮಕೀರ್ತಿ ಭಟ್ಟಾರಕ ಶ್ರೀ ಪಟ್ಟಾಭಿಷೇಕ
Team Udayavani, Mar 28, 2023, 5:54 AM IST
ಚನ್ನರಾಯಟಪ್ಟಣ: ಜೈನಕಾಶಿ ಶ್ರವಣಬೆಳಗೊಳದ ದಿಗಂಬರ ಜೈನಮಠದ ನೂತನ ಪೀಠಾಧಿಪತಿಯಾಗಿ ಆಗಮಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಪಟ್ಟಾಭಿಷೇಕ ಮಹೋತ್ಸವ ಸೋಮವಾರ ವಿಜೃಂಭಣೆಯಿಂದ ಜರಗಿತು.
4 ದಿನಗಳ ಹಿಂದೆ ಜಿನೈಕ್ಯರಾ ಗಿರುವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಉತ್ತರಾಧಿಕಾರಿ ಯಾಗಿ ಶಿವಮೊಗ್ಗ ಜಿಲ್ಲೆಯ ಸಾಗರದ ಆಗಮನಕೀರ್ತಿ ಸ್ವಾಮೀಜಿ ಅವರು ಸಕಲ ಜೈನ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೀಠ ಅಲಂಕರಿಸಿದರು.
ಹೊಂಬುಜ ಮಠದ ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ, ಅರಹಂತಗಿರಿ ಧಲವಕೀರ್ತಿ ಸ್ವಾಮೀಜಿ, ಅರತಿಪುರ ಸಿದ್ಧಾಂತರ ಕೀರ್ತಿ ಸ್ವಾಮೀಜಿ, ಸೋಂದಾ ಮಠದ ಭಟ್ಟಾಕಲಂಕ ಸ್ವಾಮೀಜಿ, ಕನಕಗಿರಿ ಭುವನಕೀರ್ತಿ ಸ್ವಾಮೀಜಿ, ಕಂಬದಹಳ್ಳಿ ಭಾನುಕೀರ್ತಿ ಸ್ವಾಮೀಜಿ, ಕಾರ್ಕಳದ ಲಲಿತಕೀರ್ತಿ ಸ್ವಾಮೀಜಿ, ಎನ್ಆರ್ ಪುರ ಲಕ್ಷ್ಮೀಸೇನಾ ಭಟ್ಟಾರಕ ಸ್ವಾಮೀಜಿ, ಮೂಡುಬಿದಿರೆಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೊದಲಾದವರು ಪಟ್ಟಾಭಿಷೇಕವನ್ನು ನೆರವೇರಿಸಿದರು.