ವಿಮಾನ ನಿಲ್ದಾಣ: ಸಮಸ್ಯೆಗಳ ಶೀಘ್ರ ನಿವಾರಣೆ
Team Udayavani, Dec 9, 2020, 5:45 PM IST
ಹಾಸನ: ನಗರದ ಹೊರವಲಯದ ಬೂವನಹಳ್ಳಿ ಬಳಿ ನಿರ್ಮಿಸಲು ಉದ್ದೇಶಿಸಿರುವ ವಿಮಾನ ನಿಲ್ದಾಣದ ಕಾಮಗಾರಿಗೆ ಇರುವ ತೊಡಕುಗಳನ್ನು ತ್ವರಿತವಾಗಿ ಪರಿಹರಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಮಾನ ನಿಲ್ದಾಣದ ನಿರ್ಮಾಣದ ಪೂರ್ವ ಸಿದ್ಧತೆ ಸಂಬಂಧ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಮಾಹಿತಿ ನೀಡಿದ ಕರ್ನಾಟಕ ರಾಜ್ಯ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ(ಕೆಎಸ್ಐಐಡಿಸಿ.) ಪ್ರತಿನಿಧಿ ಕ್ಯಾ.ಶಮಂತ್ ಅವರುವಿಮಾನ ನಿಲ್ದಾಣನಿರ್ಮಾಣದ ಮೊದಲಹಂತ ಮತ್ತು ಎರಡನೇ ಹಂತದ ಯೋಜನೆ ಬಗ್ಗೆ ವಿವರಿಸಿದರು.
ಹಂತವಾಗಿ ಅಭಿವೃದ್ಧಿ ಕಾರ್ಯ: ವಿಮಾನ ಹಾರಾಟಕ್ಕೆ ಹಾಗೂ ವಿಮಾನ ಇಳಿಯಲು ಯಾವುದೇ ತೊಂದರೆ ಆಗದಂತೆ ಉದ್ದೇಶಿತ ನಿಲ್ದಾಣದ 3 ಕಿ.ಮೀ. ದೂರದಲ್ಲಿರುವ ಹೈಟೆನ್ಷನ್ ವಿದ್ಯುತ್ ಲೈನ್ಗಳನ್ನು ಸ್ಥಳಾಂತರಿಸುವ ಅಗತ್ಯವಿದೆ. 2033ರ ದೂರದೃಷ್ಟಿಯನ್ನು ಇಟ್ಟು ಕೊಂಡು ಈಗಲೇ ಯೋಜನೆ ರೂಪಿಸಿದ್ದು, ಹಂತವಾಗಿ ಅಭಿವೃದ್ಧಿ ಕಾರ್ಯ ಮಾಡಬೇಕಾಗಿದೆ. ಮೊದಲಹಂತದಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿವಿಮಾನ ಹಾರಾಟಕ್ಕೆ ಬೇಕಿರುವ ರನ್ವೇ ನಿರ್ಮಾಣ ಹಾಗೂ ಲೈನ್ ಕ್ಲಿಯರಿಂಗ್ ಚಟುವಟಿಕೆಗಳನ್ನುಪೂರ್ಣ ಗೊಳಿಸಿ ಸೇವಾ ಸೌಲಭ್ಯಗಳಿಗೆ ಚಾಲನೆ ನೀಡಬಹುದಾಗಿದೆ ಎಂದು ಹೇಳಿದರು.
ತ್ವರಿತವಾಗಿ ಸ್ಥಳಾಂತರ: ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು, ಪವರ್ ಗ್ರೀಡ್ ಕಾರ್ಪೊರೇಷನ್, ಕೆಪಿಟಿಸಿ ಎಲ್, ಸೆಸ್ಕ್, ಹೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚಿಸಿ ಅವರಹಾಗೂ ಮುಂದಿನಯೋಜನೆಗಳು, ನಕಾಶೆಯ ಬಗ್ಗೆ ಪರಿಶೀಲಿಸಿದರು. ವಿಮಾನ ನಿಲ್ದಾಣ ನಿರ್ಮಾಣಕ್ಕೆಅಡ್ಡಿಯಾಗಿರುವ ಹೈಟೆನÒನ್ ವಿದ್ಯುತ್ ಮಾರ್ಗಗಳನ್ನು ಆದಷ್ಟೂ ತ್ವರಿತವಾಗಿ ಸ್ಥಳಾಂತರಿಸುವಂತೆ ಸೂಚಿಸಿದರು. ವಿದ್ಯುತ್ ನಿಗಮದ ಅಧಿಕಾರಿಗಳು ಮಾತನಾಡಿ, ಈಗಾಗಲೇ ಸಂಸ್ಥೆ ವತಿಯಿಂದ ಕಾರ್ಯ ಪ್ರವೃತ್ತವಾಗಿದ್ದು, ಉದ್ದೇಶಿತ ವಿಮಾನ ನಿಲ್ದಾಣದ ಸಮೀಪ ಇದ್ದ 9 ಕಿ.ಮೀ.ಉದ್ದದ ಹೈಟೆನ್ಷನ್ ವಿದ್ಯುತ್ ಮಾರ್ಗವನ್ನು ಸ್ಥಳಾಂತರಿಸುವ17ಕಿ.ಮೀ. ಉದ್ದದಬದಲಿಮಾರ್ಗಕ್ಕೆಪರಿವರ್ತಿಸಲಾಗಿದೆ.68ಟವರ್ಗಳ ಪೈಕಿ66 ನಿರ್ಮಿಸಲಾಗಿದೆ. ಆದರೆ, ರೈತರಿಗೆ ಬೆಳೆ ಪರಿಹಾರ ವಿತರಣೆಗೆ 7.5 ಕೋಟಿ ರೂ.ಅನುದಾನ ಅಗತ್ಯವಿದ್ದು, ಹಣ ಬಿಡುಗಡೆಗೆ ವ್ಯವಸ್ಥೆ ಮಾಡಬೇಕೆಂದುಕೋರಿದರು.
ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಉಪ ವಿಭಾಗಧಿಕಾರಿ ಬಿ.ಎ ಜಗದೀಶ್, ತಹಶೀಲ್ದಾರ್ ಶಿವಶಂಕರಪ್ಪ, ಪವರ್ ಗ್ರೀಡ್ನ ಜಯರಾಂ ಇದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಸಿಎಂಗೆ ಪತ್ರ ಬರೆದಿಟ್ಟು ಆತ್ಮಹತ್ಯೆ
ಮುಂಬೈ : ಬಾಯ್ಫ್ರೆಂಡ್ ಜತೆ ಪತ್ನಿ ಪರಾರಿ: ಪತಿ ದೂರು
ಚಿಕ್ಕಬಳ್ಳಾಪುರ : ದ್ವಿತೀಯ ಹಂತದ ಕೋವಿಡ್ ಲಸಿಕೆ ಅಭಿಯಾನ ಆರಂಭ- 2358 ಫಲಾನುಭವಿಗಳಿಗೆ
ರಸ್ತೆ ನಿರ್ಮಾಣ ವಿಚಾರ : ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ : ಹಲವರಿಗೆ ಗಾಯ
ರಕ್ಷಣಾ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿ .ಜ.20 ರಂದು ಕಾರವಾರ ನೌಕಾನೆಲೆಗೆ ಭೇಟಿ