ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ


Team Udayavani, May 31, 2023, 4:22 PM IST

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

ಹೊಳೆನರಸೀಪುರ: ಮೊನ್ನೆ ಮೇ 10ರಂದು ನಡೆದ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಮೇ 13ರಂದು ಮುಕ್ತಾಯಗೊಂಡಿದೆ. ಆದರೆ, ಕೂದಲೆಳೆ ಅಂತರದಲ್ಲಿ ಸೋಲುಂಡ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಎಂ ಪಟೇಲ್‌ ಅವರು ಮತ ಎಣಿಕೆಯಲ್ಲಿ ತಮಗೆ ಅಧಿಕಾರಿಗಳು ಅನ್ಯಾಯ ನಡೆದಿದೆ ಎಂದು ಆರೋಪಿಸಿದ್ದಾರೆ.

ವಿಧಾನಸಭಾ ಕ್ಷೇತ್ರದ ಎಲ್ಲ ಮತಪೆಟ್ಟಿಗೆಗಳ ಮತಗಳನ್ನು ಮರು‌ ಎಣಿಕೆ ಮಾಡಲು ನ್ಯಾಯಾಲಯ ಅವಕಾಶ ನೀಡಬೇಕೆಂದು ರಾಜ್ಯ ಶ್ರೇಷ್ಠ ನ್ಯಾಯಾಲಯದ ಮೆಟ್ಟಲೇರಲು ಮುಂದಾಗುವುದಾಗಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫ‌ಲಿತಾಂಶ ಪ್ರಕಟವಾದ ನಂತರ ತಮ್ಮ ಸೋಲು ಸೋಲಲ್ಲ ಎಂಬುದು ಜನತೆ ನೀಡಿರುವ ತೀರ್ಪಿನಿಂದ ವ್ಯಕ್ತವಾಗಿದೆ. ಸೋಲಿನಿಂದ ಎದೆಗುಂದದೆ ನನ್ನ ಕ್ಷೇತ್ರದಲ್ಲಿ ನಿರಂತರ ಜನ ಸೇವೆ ಮಾಡುವೆ. ಈಗಿನಿಂದಲೇ ಮುಂದಿನ 2028ರ ಚುನಾವಣೆಗೆ ತಯಾರಿ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಕಾನೂನು ಹೋರಾಟ ಖಚಿತ: ಮೇ 13ರಂದು ಶನಿವಾರ ಮತ ಎಣಿಕೆ ವೇಳೆ ಬಹಳಷ್ಟು ಅಧಿಕಾರಿಗಳು ತಮಗೆ ಬರಬೇಕಾದ ಮತಗಳನ್ನು ನಮ್ಮ ವಿರೋಧಿ ಅಭ್ಯರ್ಥಿ ರೇವಣ್ಣ ಅವರ ಖಾತೆಗೆ ಜಮೆ ಮಾಡಿದ್ದಾರೆ ಎಂಬ ಸಂಶಯ ತಮಗೆ ಇದೆ. ಆದ್ದರಿಂದ, ಈ ಬಗ್ಗೆ ತಾವು ಕಾನೂನು ತಜ್ಞರ ಸಲಹೆ ಪಡೆದು ನ್ಯಾಯಾಲಯದಲ್ಲಿ ಮೊಕದಮ್ಮೆ ಹೂಡುವುದಾಗಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.

ಮತ ಎಣಿಕೆಯಲ್ಲಿ ದೋಷ ಆರೋಪ: ಮತ ಎಣಿಕೆ ಕೇಂದ್ರದಲ್ಲಿ ಮಾಜಿ ಸಚಿವ ರೇವಣ್ಣ ಅವರ ಬೆಂಬಲಿತ ಅಧಿಕಾರಿಗಳೇ ಮತ ಎಣಿಕೆಯ ಕೇಂದ್ರ ದಲ್ಲಿದ್ದ ಕಾರಣ ತಮಗೆ ಅನ್ಯಾಯ ಆಗಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ತಿಳಿಸಿದರು.

ನ್ಯಾಯಾಲಯದಲ್ಲಿ ಧಾವೆ ಹೂಡಿ ಮತಗಳ ಮರು ಎಣಿಕೆಗೆ ಮನವಿ ಸಲ್ಲಿಸಿ ಸಲ್ಲಿಸಲಾಗುವುದು ಎಂದರು.

ವಿವಿ ಪ್ಯಾಟ್‌ ಮತ ಎಣಿಕೆ ಮಾಡಿ: ಮತಪೆಟ್ಟಿಗೆ ಹಾಗೂ ವಿವಿ ಪ್ಯಾಟ್‌ನಲ್ಲಿನ ಮತಗಳನ್ನು ಪ್ರತ್ಯೇಕವಾಗಿ ಎಣಿಸಿದ್ದಲ್ಲಿ ತಮಗೆ ಪೂರ್ಣ ಪ್ರಮಾಣದ ಜಯ ಸಿಗಲಿದೆ ಎಂಬುದು ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಎಂ ಪಟೇಲ್‌ ಅವರ ಸಂಶಯವಿದ್ದು, ಇದಕ್ಕೆ ಪಕ್ಷದ ಮುಖಂಡರು ಸಾಥ್‌ ನೀಡಲಿದ್ದಾರೆ. ಈ ಸಂಬಂಧ ಬೆಂಗಳೂರಿನ ಖ್ಯಾತ ವಕೀಲರ ಸಲಹೆ ಪಡೆದಿದ್ದಾರೆ.

ರಾಜ್ಯ ರಾಜಕಾರಣವಷ್ಟೇ ಸಾಕು: ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ತಮ್ಮನ್ನು ಪಕ್ಷದ ರಾಜ್ಯ ನಾಯಕರು ಸಾಂತ್ವನ ಹೇಳಿರುವ ಜೊತೆಗೆ 2024ರಲ್ಲಿ ಬರಲಿರುವ ಲೋಕಸಭಾ ಚುನಾವಣೆಗೆ ತಮ್ಮನ್ನು ಸ್ಪರ್ಧಿಸುವಂತೆ ಸಲಹೆ ನೀಡಿದರು. ಆದರೇ ನನಗೆ ಕೇಂದ್ರ ರಾಜಕೀಯಕ್ಕಿಂತ ರಾಜ್ಯ ರಾಜಕೀಯದಲ್ಲಿ ಮುಂದುವರೆಯುವ ಆಸಕ್ತಿ ಇರುವುದಾಗಿ ತಿಳಿಸಿರುವುದಾಗಿ ಹೇಳಿದರು.

2019ರ ಕೇಸ್‌: ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಅಂದಿನ ಬಿಜೆಪಿ ಅಭ್ಯರ್ಥಿ ಎ. ಮಂಜು ಅವರು ಸಹ ತಮಗೆ ಅನ್ಯಾಯ ಆಗಿದೆ ಎಂದು ನ್ಯಾಯಾಲಯದ ಮೆಟ್ಟಲೇರಿದ್ದು ಪ್ರಕರಣ ಇಂದಿಗೂ ನ್ಯಾಯಾಲಯ ದಲ್ಲಿ ಇತ್ಯಾರ್ಥವಾಗದೆ ಇರುವುದು ರೇವಣ್ಣ ಅವರ ಕುಟುಂಬದ ಮೇಲೆ ತೂಗುಗತ್ತಿ ಎಂದೇ ಭಾವಿಸಬಹುದಾಗಿದೆ.

ಟಾಪ್ ನ್ಯೂಸ್

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ; 25.45 ಲ.ರೂ. ಮೌಲ್ಯದ ಸೊತ್ತು ವಶ

ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ; 25.45 ಲ.ರೂ. ಮೌಲ್ಯದ ಸೊತ್ತು ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flower: ಬರದಲ್ಲಿಯೂ ಕೈಹಿಡಿಯದ ಸೇವಂತಿಗೆ

Flower: ಬರದಲ್ಲಿಯೂ ಕೈಹಿಡಿಯದ ಸೇವಂತಿಗೆ

Server problem: ಸರ್ವರ್‌ ಸಮಸ್ಯೆ; ಪಡಿತರದಾರರ ಅಲೆದಾಟ

Server problem: ಸರ್ವರ್‌ ಸಮಸ್ಯೆ; ಪಡಿತರದಾರರ ಅಲೆದಾಟ

tdy-5

Alcohol: ಮದ್ಯ ಸೇವನೆ ಚಾಲೆಂಜ್‌-ಅರ್ಧ ಗಂಟೆಯಲ್ಲಿ 90 ಎಂಎಲ್‌ನ 10 ಪ್ಯಾಕೆಟ್‌ ಸೇವಿಸಿ ಸಾವು

POP free Ganeshotsav: ಪಿಒಪಿ ಮುಕ್ತ ಗಣೇಶೋತ್ಸವಕ್ಕೆ ಭಕ್ತರ ಸ್ಪಂದನೆ

POP free Ganeshotsav: ಪಿಒಪಿ ಮುಕ್ತ ಗಣೇಶೋತ್ಸವಕ್ಕೆ ಭಕ್ತರ ಸ್ಪಂದನೆ

tdy-17

Channarayapatna: ತಹಶೀಲ್ದಾರ್‌ ಕುರ್ಚಿ ಕಾಳಗ: ದಿನವೂ ಕಡತಕ್ಕೆ ಬದಲಾಗುತ್ತೆ ಸಹಿ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

BJP FLAG 1

BJP: ಈ ವಾರವೇ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ?

devegouda

Cauvery: ಮಧ್ಯಪ್ರವೇಶಿಸಿ: ನಮ್ಮ ನೆರವಿಗೆ ಬನ್ನಿ- ದೇವೇಗೌಡರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.