5 ತಿಂಗಳ ಮೊದಲೇ ಸುರಿದ ವಾರ್ಷಿಕ ಮಳೆ


Team Udayavani, Jul 21, 2018, 2:45 PM IST

has-1.jpg

ಸಕಲೇಶಪುರ: ತಾಲೂಕಿನಲ್ಲಿ ಕಳೆದ 12 ವರ್ಷಗಳ ನಂತರ ವಾರ್ಷಿಕ ವಾಡಿಕೆ ಮಳೆಗಿಂತಲೂ ಹೆಚ್ಚು ಮಳೆ ಈಗಾಗಲೇ ಸುರಿದಿದ್ದು, ರೈತರಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನಲ್ಲಿ ಇನ್ನೂ ಎರಡು ತಿಂಗಳು ಇದೇ ರೀತಿಯಾಗಿ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಮಲೆನಾಡಿನ ಜನರು ತತ್ತರಿಸಿ ಹೋಗಿದ್ದಾರೆ.

ಕಳೆದ 20 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಲೆನಾಡಿನ ಜನರು ಸೂರ್ಯನನ್ನೇ ಕಾಣದಂತಾಗಿದೆ. ಯಾವಾಗ ಬಿಸಿಲು ನೋಡುತ್ತೇವೆಯೋ ಎಂದು ಕಾತರಿಸುತ್ತಿದ್ದಾರೆ. ತಾಲೂಕಿನಲ್ಲಿ ಸಂಪೂರ್ಣ ಕತ್ತಲೆಯ ವಾತಾವರಣ ನಿರ್ಮಾಣವಾಗಿದೆ. ತಾಲೂಕಿನಲ್ಲಿ ಜನವರಿ 1ರಿಂದ ಇಲ್ಲಿಯವರೆಗೆ ವಾಡಿಕೆಯಂತೆ 1074 ಮಿ.ಮೀ. ಮಳೆಯಾಗಬೇಕಿತ್ತು. ಆದರೆ, 2365 ಮಿ.ಮೀ. ಮಳೆಯಾಗಿದ್ದು, ಶೇ.120ಕ್ಕೂ ಹೆಚ್ಚು ಅಧಿಕ ಮಳೆ ಬಿದ್ದಿದೆ. ಕೃಷಿ ಇಲಾಖೆಯ ಅಂಕಿಅಂಶಗಳ ಪ್ರಕಾರ ತಾಲೂಕಿನಲ್ಲೇ ಅತಿ ಹೆಚ್ಚು ಮಳೆ ಬಿದ್ದಿರುವ ಹೋಬಳಿಯಲ್ಲಿ ಹೆತ್ತೂರು ಮೊದಲ ಸ್ಥಾನದಲ್ಲಿದೆ. ಬೆಳಗೋಡ ಕೊನೆಯ ಸ್ಥಾನದಲ್ಲಿದೆ.

ಕಾಫಿ, ಮೆಣಸು ಬೆಳೆಗಾರರಲ್ಲಿ ಆತಂಕ: ಮಳೆ ಧಾರಾಕಾರವಾಗಿ ಸುರಿಯುತ್ತಿರುವುದು, ಸತತವಾಗಿ ಶೀತ, ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಕಾಫಿ ಹಾಗೂ ಮೆಣಸಿನ ಕಾಳು ಉದುರುತ್ತಿದೆ. ಇದು ರೈತರನ್ನು ಸಂಕಷ್ಟಕ್ಕೆ ನೂಕಿದೆ. ಅತಿಯಾದ ಶೀತದಿಂದಾಗಿ ಕಾಫಿ ಗಿಡಗಳಲ್ಲಿ ಕೊಳೆ ರೋಗ ಕಾಣಿಸಿಕೊಳ್ಳುತ್ತಿರುವುದು ರೈತರಿಗೆ ಮತ್ತಷ್ಟು ತಲೆ ನೋವು ತಂದಿದೆ.

ಕಳೆದ 2 ದಿನಗಳಿಂದ ಮಳೆಯ ಆರ್ಭಟ ತುಸು ಕಡಿಮೆಯಾಗಿದ್ದರೂ ಹೆತ್ತೂರು ಹೋಬಳಿಯಲ್ಲಿ ಮತ್ತಷ್ಟು ಮಳೆ ಹಾನಿಯುಂಟಾಗಿದೆ. ಮಳೆಯ ನಡುವೆಯೂ ಗ್ರಾಮಾಂತರ ಪ್ರದೇಶಗಳ ಜನರು ಗುರುವಾರ ಸಂತೆಯ ದಿನವಾಗಿದ್ದರಿಂದ ಪಟ್ಟಣಕ್ಕೆ ಆಗಮಿಸಿ ದಿನನಿತ್ಯದ ವಸ್ತುಗಳನ್ನು ಖರೀದಿಸಿದರು. ಹೆತ್ತೂರು, ಹಾನುಬಾಳ್‌, ಮಾರನಹಳ್ಳಿ ಸೇರಿದಂತೆ ಮತ್ತಿತರ ಕಡೆ ವಿದ್ಯುತ್‌ ವ್ಯತ್ಯಯ ನಿರಂತರವಾಗಿ ಮುಂದುವರಿದಿದೆ. ಗ್ರಾಮಸ್ಥರು ಕರೆಂಟ್‌ ಇಲ್ಲದೇ ಕತ್ತಲೆಯಲ್ಲೇ ಜೀವನ ನಡೆಸುವಂತಾಗಿದೆ.

ಮೊಬೈಲ್‌ ಚಾರ್ಚ್‌ ಮಾಡಿಕೊಳ್ಳಲು ಗ್ರಾಮಾಂತರ ಪ್ರದೇಶಗಳಿಂದ ಪಟ್ಟಣಕ್ಕೆ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಷ್ಟ್ರೀಯ ಹೆದ್ದಾರಿ 75 ಕೊಲ್ಲಹಳ್ಳಿ ಸಮೀಪ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಅದೃಷ್ಟವಶಾತ್‌ ಯಾವುದೇ ಅಪಾಯ ಸಂಭವಿಸಿಲ್ಲ.
ಗ್ರಾಮಾಂತರ ಪ್ರದೇಶಗಳಲ್ಲಿ ಮಳೆ ಯಿಂದಾಗಿ ಮರಗಳು ನಿರಂತರವಾಗಿ ಧರೆಗುರುಳುತ್ತಿವೆ. ಬಹುತೇಕ ಹಳ್ಳ, ಕೆರೆಗಳು,
ಭರ್ತಿಯಾಗಿದ್ದು, ಅಂತರ್ಜಲ ಎಲ್ಲಂದರಲ್ಲಿ ಉಕ್ಕುತ್ತಿದೆ.

ತಾಲೂಕಿನಲ್ಲಿ ವಾರ್ಷಿಕವಾಗಿ ಬೀಳಬೇಕಿದ್ದ ಮಳೆ 5 ತಿಂಗಳಿಗೂ ಮೊದಲೇ ಸುರಿದಿದೆ. ಮಳೆಯಿಂದಾಗಿ ಹಲವೆಡೆ
ಹಾನಿಯುಂಟಾಗಿದೆ. ಭತ್ತದ ಗದ್ದೆ, ಕಾಫೀ, ಮೆಣಸು ಮುಂತಾದ ಬೆಳೆ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಇದೇ ರೀತಿ ಮಳೆ ಮುಂದುವರಿದರೆ ಕೃಷಿ ಚಟುವಟಿಕೆ ಕೈಗೊಳ್ಳಲು ರೈತರು ಪರದಾಡಬೇಕಾಗುತ್ತದೆ.
 ಸುಬ್ರಹ್ಮಣ್ಯ, ಸಹಾಯಕ ಕೃಷಿ ನಿರ್ದೇಶಕ

ಒಸ್ಸೂರು ಎಸ್ಟೇಟ್‌ನಲ್ಲಿ ದಾಖಲಾದ ಮಾಹಿತಿ ಪ್ರಕಾರ ಹಲವು ವರ್ಷಗಳ ಬಳಿಕ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯ ಪ್ರಮಾಣ ದಾಖಲಾಗಿದೆ. ನಿರಂತರ ವರ್ಷಧಾರೆಯಿಂದಾಗಿ ರಸ್ತೆ, ಚರಂಡಿ, ಮನೆ, ಮರಗಳು ಧರಾಶಾಹಿಯಾಗಿವೆ. ಬೆಳೆ ನಷ್ಟದಿಂದ ಇಲ್ಲಿನ ರೈತರು ಸಂಕಷ್ಟದಲ್ಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಾಲೂಕಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು.
 ಬಿ.ಎ.ಜಗನ್ನಾಥ್‌, ಜೆಡಿಎಸ್‌ ರಾಜ್ಯ ಉಪಾಧ್ಯಕ

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.