ಅರಸೀಕೆರೆ: ದಶಕ ಕಳೆದರೂ ಯಾತ್ರಿ ನಿವಾಸಕ್ಕಿಲ್ಲಉದ್ಘಾಟನೆ ಭಾಗ್ಯ!


Team Udayavani, May 26, 2023, 2:25 PM IST

ಅರಸೀಕೆರೆ: ದಶಕ ಕಳೆದರೂ ಯಾತ್ರಿ ನಿವಾಸಕ್ಕಿಲ್ಲಉದ್ಘಾಟನೆ ಭಾಗ್ಯ!

ಅರಸೀಕೆರೆ: ನಗರ ಸಮೀಪದ ಪುರಾಣ ಪ್ರಸಿದ್ಧ ಮಾಲೇಕಲ್‌ ತಿರುಪತಿ ಸುಕ್ಷೇತ್ರದಲ್ಲಿ 90 ಲಕ್ಷ ರೂ. ವೆಚ್ಚದಲ್ಲಿ ಪ್ರವಾಸೋ ದ್ಯಮ ಇಲಾಖೆಯಿಂದ ನಿರ್ಮಿಸಿರುವ ಯಾತ್ರಿ ನಿವಾಸ್‌ ನೂತನ ಕಟ್ಟಡ ಸಾರ್ವಜನಿಕರ ಸೇವೆಗಾಗಿ ಸಮರ್ಪಣೆ ಆಗುವುದು
ಯಾವಾಗ ಎಂಬ ಪ್ರಶ್ನೆಯನ್ನು ಭಕ್ತರು ಮಾಡುವಂತಾಗಿದೆ.

ನಗರ ಸಮೀಪದಲ್ಲಿರುವ ಪುರಾಣ ಪ್ರಸಿದ್ಧ ಮಾಲೇಕಲ್‌ ತಿರುಪತಿ ಶ್ರೀಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಪ್ರತಿನಿತ್ಯ ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಭಕ್ತರ ಅನುಕೂಲಕ್ಕಾಗಿ ಜಿ.ಜನಾರ್ದನ ರೆಡ್ಡಿ ಅವರು ಪ್ರವಾಸೋದ್ಯಮ ಸಚಿವರಾಗಿದ್ದ ಸಂದರ್ಭದಲ್ಲಿ ಯಾತ್ರಿ ನಿವಾಸ ಕಟ್ಟಡ ನಿರ್ಮಾಣಕ್ಕಾಗಿ 90 ಲಕ್ಷ ರೂ ಅನುದಾನ ದಲ್ಲಿ ಕಟ್ಟಡದ ನಿರ್ಮಾಣ ಕಾರ್ಯ ಮುಗಿದು 10 ವರ್ಷಗಳು ಕಳೆದರು ಮುಜರಾಯಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದ ಪರಿಣಾಮ ಭಕ್ತಾದಿಗಳ ಸೇವೆಗೆ ಸಮರ್ಪಣೆ ಆಗಬೇಕಾಗಿದ್ದ ಯಾತ್ರಿ ನಿವಾಸದ ಕಟ್ಟಡ ಇನ್ನೂ ಲೋಕಾರ್ಪಣೆಗೊಂಡಿಲ್ಲ ಎನ್ನುವ ಆರೋಪಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.

ಕಟ್ಟಡ ಸುತ್ತ ಗಿಡಗಂಟಿ: ಈಗಾಗಲೇ ಈ ಕಟ್ಟಡದ ಸುತ್ತಮುತ್ತಲು ಗಿಡಗಂಟಿಗಳು ಬೆಳೆದಿರುವ ಕಾರಣ ಅನೈತಿಕ ಚಟುವಟಿಕೆಗಳ ಕೇಂದ್ರವಾಗಿ ಬೆಳೆಯಲು ಸಾಧ್ಯವಾಗಿದೆ. ಆದ್ದರಿಂದ ಸಂಬಂಧಪಟ್ಟ ಮುಜರಾಯಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ನೂತನ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ ಅವರು ಜೂನ್‌ ತಿಂಗಳ ಆಷಾಢ ಮಾಸದಲ್ಲಿ ನಡೆಯುವ ತಿರುಪತಿ ತಿಮ್ಮಪ್ಪನ ಜಾತ್ರಾ ಮಹೋತ್ಸವದ ವೇಳೆಗೆ ಯಾತ್ರಿ ನಿವಾಸ ಕಟ್ಟಡ ಲೋಕಾರ್ಪಣೆ ಸಮಾರಂಭವನ್ನು ನೆರವೇರಿಸುವ ಮೂಲಕ ಸಾರ್ವಜನಿಕರ ಸೇವೆಗಾಗಿ ಯಾತ್ರಿ ನಿವಾಸ್‌ ನೂತನ ಕಟ್ಟಡವನ್ನು ಸಮರ್ಪಣೆ ಮಾಡಬೇಕೆಂದು ಭಕ್ತಾದಿಗಳು ಆಗ್ರಹಿಸಿದ್ದಾರೆ.

ಲೋಕಾರ್ಪಣೆ ಶೀಘ್ರ: ಯಾತ್ರಿ ನಿವಾಸ್‌ ಕಟ್ಟಡ ನಿರ್ಮಾಣಗೊಂಡು ಅನೇಕ ವರ್ಷಗಳಾಗಿದೆ. ಸದ್ಯದಲ್ಲಿ ನೂತನ ಸಚಿವರಿಂದ ಉದ್ಘಾಟನೆ ನೆರವೇರಿಸುವ ಮೂಲಕ ಭಕ್ತಾದಿಗಳಿಗೆ ಹೆಚ್ಚಿನ ಅನುಕೂಲವನ್ನು ಕಲ್ಪಿಸಲಾಗುವುದು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು.

ಭಕ್ತರಿಗೆ ಅನುಕೂಲ ಕಲ್ಪಿಸಿ: ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಟಿ.ವಿ.ಅರುಣ್‌ ಕುಮಾರ್‌ ಮಾತನಾಡಿ, ಕಳೆದ 10 ವರ್ಷಗಳ ಹಿಂದೆ ಭಕ್ತರ ಅನುಕೂಲಕ್ಕೆ ನಿರ್ಮಿ ಸಿರುವ ಯಾತ್ರಿ ನಿವಾಸ ಕಟ್ಟಡದ ಉದ್ಘಾಟನೆ ಆಗದಿರುವುದು ಆಶ್ಚರ್ಯಕರ ಸಂಗತಿಯಾಗಿದ್ದು, ಸ್ಥಳೀಯ ಶಾಸಕರು ಹೆಚ್ಚಿನ ಆಸಕ್ತಿ ವಹಿಸಿ ಭಕ್ತರ ಸೇವೆಗೆ ಅತ್ಯಂತ ತ್ವರಿತವಾಗಿ ಸಮರ್ಪಣೆ ಮಾಡಬೇಕೆಂದು ಮನವಿ ಮಾಡಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.