ಪುರಾತತ್ವ ಇಲಾಖೆ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ


Team Udayavani, Feb 13, 2019, 7:28 AM IST

purt.jpg

ಹಾಸನ: ಜಿಲ್ಲೆಯ ಭಾರತೀಯ ಪುರಾತತ್ವ ಸವೇಕ್ಷಣಾ ಇಲಾಖೆಯ ಐತಿಹಾಸಿಕ ಸ್ಮಾರಕಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆಯ ಕಾರ್ಮಿಕರಿಗೆ ಕಳೆದ 7 ತಿಂಗಳಿಂದ ವೇತನ ನೀಡದಿರುವುದನ್ನು ಖಂಡಿಸಿ ಸಿಐಟಿಯು ನೇತೃತ್ವದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಕಾಯಂ ಅಲ್ಲದ ಕಾರ್ಮಿಕರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕನಿಷ್ಠ ವೇತನ ನೀಡಿ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದ ಕಾರ್ಮಿಕರು ಶಾಸನಾತ್ಮಕ ಸೌಲಭ್ಯಗಳಾದ ಕನಿಷ್ಠ ವೇತನ, ವೇತನ ಚೀಟಿ, ಭವಿಷ್ಯ ನಿಧಿ, ಇಎಸ್‌ಐ ಮತ್ತಿತರ ಸೌಲಭ್ಯಗಳನ್ನು ತಮಗೂ ಜಾರಿ ಮಾಡಬೇಕು ಎಂದು ಆಗ್ರಹಿಸಿದರು. 

ಕೇಂದ್ರ ಸರ್ಕಾರದ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಬೆಂಗಳೂರು ವಲಯದ ವ್ಯಾಪ್ತಿಗೊಳಪಡುವ ಹಾಸನ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ರಕ್ಷಣೆಯಲ್ಲಿ ಸುಮಾರು 25 ವರ್ಷಗಳಿಗಿಂತಲೂ ಅವಧಿ ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ ಯಲ್ಲಿ ನಿರಂತರವಾಗಿ ಕಾರ್ಮಿಕರು ದುಡಿಯುತ್ತಿದ್ದಾರೆ.

ಹಳೇಬೀಡು, ಬೇಲೂರು, ಸಕಲೇಶಪುರದ ಮಂಜರಾಬಾದ್‌ ಕೋಟೆ, ದೇವನಹಳ್ಳಿ ಕೋಟೆ, ಅಮೃತಪುರ, ಗೇರುಸೋಪ್ಪ, ಬೆಳವಾಡಿ, ದೊಡ್ಡಗದ್ದವಳ್ಳಿ, ಮುಂತಾದ ಕಡೆಗಳಲ್ಲಿ ದೇವಸ್ಥಾನದ ಹಾಳಾದ ಭಾಗಗಳನ್ನು ಪುನರ್‌ ಜೋಡಿಸಿ ಮತ್ತು ದುರಸ್ತಿ ಕಾರ್ಯಗಳಿಗೆ ರಾತ್ರಿ, ಹಗಲು ಪಾಳಿಯದಲ್ಲಿ ನಮ್ಮಿಂದ ಕೆಲಸ ಮಾಡಿಸುತ್ತಿದ್ದಾರೆ.

ಭಾರತೀಯ ಪುರಾತತ್ವ ಸವೇಕ್ಷಣಾ ಇಲಾಖೆಯು ಈ ಹಿಂದೆ ಇವರಿಗೆ ಬ್ಯಾಂಕ್‌ ಖಾತೆಯ ಮುಖಾಂತರ ತಿಂಗಳಿಗೆ 9,300 ರೂ. ವೇತನ ಜಮಾ ಮಾಡುತ್ತಿದ್ದರು. ಆದರೆ 2018ರ ಜನವರಿ ನಂತರ ಕಾರ್ಮಿಕರಿಗೆ ಬ್ಯಾಂಕ್‌ ಮುಖಾಂತರ ವೇತನ ಪಾವತಿಸದೆ ತಿಂಗಳಿಗೆ ಕೇವಲ 4 ಸಾವಿರರೂ. ಗಳ ನಗದು ಕೊಡಲಾಗುತ್ತಿತ್ತು ಕಳೆದ 7 ತಿಂಗಳಿಂದ ಅದನ್ನೂ ಕೊಟ್ಟಿಲ್ಲ ಎಂದು ದೂರಿದರು. 

ಕಾರ್ಮಿಕರಿಗೆ ಮೋಸ: ಸರ್ಕಾರದ ಕನಿಷ್ಠ ವೇತನದ ಆದೇಶಕ್ಕಿಂತ ಕಡಿಮೆ ವೇತನ ಪಾವತಿಸಲಾಗುತ್ತಿದೆ. ವೇತನವನ್ನು ಬ್ಯಾಂಕ್‌ ಮುಖಾಂತರ ಪಾವತಿಸದೆ ಕೈಗೆ ನಗದು ನೀಡಲಾಗುತ್ತಿದೆ. ವೇತನ ಚೀಟಿ ನೀಡುತ್ತಿಲ್ಲ . ಭಷ್ಯನಿಧಿ, ಇಎಸ್‌ಐ ಸೌಲಭ್ಯಗಳನ್ನ ಜಾರಿ ಮಾಡಿಲ್ಲ. ಕಾನೂನು ಪ್ರಕಾರ ನೀಡಬೇಕಾದ ಹಾಜರಾತಿ, ವಾರದ ರಜೆ ನೀಡುತ್ತಿಲ್ಲ. ಗುತ್ತಿಗೆದಾರರ ಹೆಸರಿನಲ್ಲಿ ಕಾರ್ಮಿಕರಿಗೆ ಮೋಸ ಮಾಡಲಾಗುತ್ತಿದೆ.

ದಿನದಲ್ಲಿ 8 ಗಂಟೆಗಳಿಗೂ ಅಧಿಕ ಕಾಲ ದುಡಿಸಿಕೊಳ್ಳಲಾಗುತ್ತಿದೆ. ಕೆಲವು ಕಾರ್ಮಿಕರನ್ನು ಅಕ್ರಮವಾಗಿ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ದೂರಿದರು. ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್‌, ಪ್ರಧಾನ ಕಾರ್ಯದರ್ಶಿ ಎಚ್‌.ಎನ್‌. ನಾಗರಾಜು, ಖಜಂಚಿ ಮಹದೇವ್‌, ಉಪಾಧ್ಯಕ್ಷ ಸೋಮಶೇಖರ್‌, ಅರವಿಂದ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.