ಎಟಿಎಂಗಳಿಗೆ ಹಣ ತುಂಬಲು ಹೋಗುತ್ತಿದ್ದ ವಾಹನದಿಂದ 43 ಲಕ್ಷ ರೂ. ದೋಚಿದ್ದವರು ಸೆರೆ


Team Udayavani, May 21, 2022, 4:08 PM IST

Untitled-1

ಹಾಸನ: ಎಟಿಎಂಗಳಿಗೆ ಹಣ ತುಂಬಲು ಹೋಗುತ್ತಿದ್ದ ವಾಹನದಿಂದ 47 ಲಕ್ಷ ರೂ.ಗಳನ್ನು ದೋಚಿದ್ದ ಅಂತಾರಾಜ್ಯ ಕಳ್ಳರನ್ನು ಅರಸೀಕೆರೆ ಗ್ರಾಮಾಂತರ ವೃತ್ತದ ಪೊಲೀಸರ ತಂಡ ಬಂಧಿಸಿ ಆರೋಪಿಗಳಿಂದ 27 ಲಕ್ಷ ರೂ. ವಶಪಡಿಸಿಕೊಂಡಿದೆ ಎಂದು ಜಿಲ್ಲಾ ಎಸ್‌ಪಿ ಶ್ರೀನಿವಾಸಗೌಡ ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 6 ತಿಂಗಳ ಹಿಂದೆ 43 ಲಕ್ಷ ರೂ.ದೋಚಿದ್ದ ತಮಿಳು ನಾಡು ಮೂಲದ ಮೂವರು ಹಾಗೂ ಕೋಲಾರಜಿಲ್ಲೆಯ ಒಬ್ಬನ್ನು ವಿಶೇಷ ಪೊಲೀಸ್‌ ತಂಡ ಮೂರು ದಿನಗಳ ಹಿಂದೆ ಬಂಧಿಸಿ ಆರೋಪಿಗಳಿಂದ 27 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ವಾಹನದಲ್ಲಿತ್ತು 1.87 ಕೋಟಿ ರೂ.: ಕಳೆದ ವರ್ಷ ಅ.27ರಂದು ಎಟಿಎಂಗಳಿಗೆ ಹಾಸನ ಜಿಲ್ಲೆ ಯಲ್ಲಿ ಹಣ ತುಂಬುರ ಸಿಎಂಎಸ್‌ ಇನ್ಫೋ ಸಿಸ್ಟಂ,ಲಿಮಿಟೆಡ್‌ನ‌ ಸಂಸ್ಥೆಯ ವ್ಯವಸ್ಥಾಪಕ ಹರೀಶ್‌ಕುಮಾರ್‌ ಅವರು, ತಮ್ಮ ಸಂಸ್ಥೆ ವಾಹನಕ್ಕೆ ನಟೇಶ್‌ಚಾಲಕನಾಗಿ, ರುದ್ರೇಶ್‌ ಮತ್ತು ಭರತ್‌ ಎಂಬುವರನ್ನು ಕ್ಯಾಷ್‌ ಆಫೀಸರ್‌ ಆಗಿ ಹಾಗೂ ಪಾಂಡುರಂಗ ಎಂಬವರನ್ನು ಗನ್‌ಮ್ಯಾನ್‌ ಆಗಿ ನೇಮಿಸಿ ಅರಸೀಕೆರೆ ತಾಲೂಕು ಬಾಣಾವರದ ಎಸ್‌ಬಿಐ ಬ್ಯಾಂಕ್‌ ಎಟಿಎಂ, ಅರಸೀಕೆರೆಯ ಕೆನರಾ ಬ್ಯಾಂಕ್‌ಎಟಿಎಂ ಸೇರಿ ಅರಸೀಕೆರೆ ತಾಲೂಕಿನ ಎಟಿಎಂ ಗಳಿಗೆ ಹಣ ತುಂಬಲು 1.87 ಕೋಟಿ ರೂ.ಗಳನ್ನು ಬ್ಯಾಗ್‌ಗಳನ್ನು ವಾಹನದಲ್ಲಿಟ್ಟು ಹಾಸನ ನಗರದಿಂದ ಕಳುಹಿಸಿಕೊಟ್ಟಿದ್ದರು.

43 ಲಕ್ಷವಿದ್ದ ಬ್ಯಾಗ್‌ ಕಳವು: ಬಾಣಾವರದ ಬಿ. ಎಚ್‌.ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕಿನ ಎಟಿ ಎಂಗೆ ಹಣ ತುಂಬಲು ತಂಡ ಮುಂದಾಗಿತ್ತು. ಚಾಲಕನೂ ವಾಹನದಿಂದ ಕೆಳಗೆ ಇಳಿದು ನಿಂತಿದ್ದನ್ನು ಗಮನಿಸಿದ ದರೋಡೆ ಕೋರರ ತಂಡವುಸಿಎಂಎಸ್‌ ವಾಹನದಲ್ಲಿದ್ದ 43 ಲಕ್ಷ ರೂ. ಹಣತುಂಬಿದ್ದ ಬ್ಯಾಗನ್ನು ಕಳವು ಮಾಡಿಕೊಂಡು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದರು.

27 ಲಕ್ಷ ವಶಕ್ಕೆ: ಬಾಣಾವರ ಪೊಲೀಸ್‌ ಠಾಣೆಯಲ್ಲಿ ಕಳವು ಪ್ರಕರಣ ದಾಖ ಲಿಸಿಕೊಂಡು ಆರೋಪಿಗಳ ಪತ್ತೆಗೆ 2 ವಿಶೇಷ ತಂಡ ರಚನೆ ಮಾಡಲಾಗಿತ್ತು.ತಂಡವು ಆರೋಪಿಗಳ ಮಾಹಿತಿ ಸಂಗ್ರಹಿಸಿ ಮೇ16ರಂದು ತಿಪಟೂರು ಎಸ್‌ಬಿಐ ಬ್ಯಾಂಕ್‌ ಮುಂದೆ ನಿಂತಿದ್ದ ಆರೋಪಿಗಳನ್ನು ವಶಕ್ಕೆ ಪಡೆದು, ಅರಸೀಕೆರೆ ಗ್ರಾಮಾಂತರ ವೃತ್ತ ಕಚೇರಿಗೆ ಕರೆದುಕೊಂಡುವಿಚಾರಣೆಗೆ ಒಳಪಡಿಸಿದಾಗ 43 ಲಕ್ಷ ರೂ.ಕಳವುಮಾಡಿದನ್ನು ಬಾಯಿಬಿಟ್ಟಿದ್ದಾರೆ. ಆರೋಪಿಗಳು ಖರ್ಚು ಮಾಡಿಕೊಂಡ ನಂತರ ಉಳಿದ 27 ಲಕ್ಷ ರೂ.ಗಳನ್ನು ವಶ ಪಡಯಲಾಗಿದೆ ಎಂದರು.

ನಗರದ ಹೊಸ ಬಸ್‌ ನಿಲ್ದಾಣ ಬಳಿ ನಡೆದಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಒಟ್ಟು ಆರುಮಂದಿ ಆರೋಪಿಗಳು ಭಾಗಿಯಾಗಿ ರುವ ಮಾಹಿತಿಲಭ್ಯವಾಗಿದೆ. ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.