ಗ್ರಾಪಂ ಗದ್ದುಗೆಗೆ ಇನ್ನಿಲ್ಲದ ಪೈಪೋಟಿ: ತಂತ್ರ-ಪ್ರತಿತಂತ್ರ


Team Udayavani, Jan 30, 2021, 2:19 PM IST

article-about-gramapanchayath

ಸಕಲೇಶಪುರ: ತಾಲೂಕಿನ ವಿವಿಧ ಗ್ರಾಪಂಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಫೆ.1ರಿಂದ 4ರವರೆಗೆ ಚುನಾವಣೆ ನಡೆಯಲಿದ್ದು ಅಧಿಕಾರದ ಗದ್ದುಗೆ ಹಿಡಿಯಲು ಎಲ್ಲಾ ರೀತಿಯ ತಂತ್ರಗಳನ್ನು ಮಾಡಲಾಗುತ್ತಿದೆ. ಬ್ಯಾಕರವಳ್ಳಿ ಪಂಚಾಯ್ತಿ ಅಧ್ಯಕ್ಷ ಸ್ಥಾನ ಬಿಸಿಎಂ ಬಿ ಮಹಿಳೆಗೆ ಮೀಸಲಾಗಿದ್ದು ಇಲ್ಲಿ ಬಿಜೆಪಿ ಬೆಂಬಲಿತ ಶೀಲಾಮಣಿ ಅವಿರೋಧ ಆಯ್ಕೆ ಖಚಿತವಾಗಿದೆ.  ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಇದ್ದು ಯಾರು ಅಧಿಕಾರ ಹಿಡಿಯುತ್ತಾರೆಂದು ಕಾದು ನೋಡಬೇಕಾಗಿದೆ.

ಕೆಲವು ಕಡೆ ಮೀಸಲಾತಿ ಸ್ಪರ್ಧಿಗಳಿಲ್ಲ: ವಳಲಹಳ್ಳಿ ಪಂಚಾಯ್ತಿಯ 8 ಸ್ಥಾನಗಳ ಪೈಕಿ 7 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದಾರೆ. ಇಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರಕ್ಕೇರುವುದು ಖಚಿತ ವಾಗಿದೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಯಾನ ಹಳ್ಳಿ ಪಂಚಾಯ್ತಿಯ 7 ಸ್ಥಾನಗಳ ಪೈಕಿ 3 ಬಿಜೆಪಿ ಬೆಂಬಲಿತರು, 3 ಜೆಡಿಎಸ್‌ ಬೆಂಬಲಿತರು ಆಯ್ಕೆ ಯಾಗಿದ್ದು 1 ಸ್ಥಾನದಲ್ಲಿ ಬಿಎಸ್‌ಪಿ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದು , ಬಿಎಸ್‌ಪಿ ಬೆಂಬಲಿತ ಅಭ್ಯರ್ಥಿಯ ವಿಶ್ವಾಸಗೊಳಿಸಲು ಜೆಡಿಎಸ್‌, ಬಿಜೆಪಿ ಮುಖಂಡರು ಕಸರತ್ತು ನಡೆಸುತ್ತಿ ದ್ದಾರೆ.

ಬಾಗೆ ಗ್ರಾಪಂನ 11 ಸ್ಥಾನಗಳಲ್ಲಿ 10 ಸ್ಥಾನಗಳಲ್ಲಿ ಜೆಡಿಎಸ್‌ ಬೆಂಬಲಿತರು ಗೆಲುವು ಸಾಧಿಸಿದ್ದು ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ ಈ ಕ್ಷೇತ್ರದಲ್ಲಿ ಜೆಡಿಎಸ್‌ ಯುವ ಮುಖಂಡ ರಾಕೇಶ್‌ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ಉದೇವಾರ  ಗ್ರಾಪಂನಲ್ಲಿಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುವಸಾಧ್ಯತೆ ಯಿದೆ.

ಬಾಳ್ಳುಪೇಟೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾ ನ ಗಳಲ್ಲಿ ಗೆಲುವು ಸಾಧಿಸಿದ್ದರೂ ಅಧ್ಯಕ್ಷ ಸ್ಥಾನ ಬಿಸಿಎಂ ಎಗೆ ಬಂದಿರುವುದರಿಂದ ಇಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಇಲ್ಲದ ಕಾರಣ ಜೆಡಿಎಸ್‌ ಸುಲಭವಾಗಿ ಅಧಿಕಾರ ಹಿಡಿಯುತ್ತಿದೆ. ಆನೆಮಹಲ್‌ ಗ್ರಾಪಂ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು ಇಲ್ಲಿ ಜೆಡಿಎಸ್‌ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿದರೂ ಗೊಂದಲವುಂಟಾಗಿದೆ. ಒಟ್ಟು 10 ಸ್ಥಾನಗಳಿದ್ದು ಇಲ್ಲಿ ಯಾರು ಅಧಿಕಾರ ಹಿಡಿಯುತ್ತಾರೆಂದು ಕಾದು ನೋಡಬೇಕಾಗಿದೆ. ಮಳಲಿ ಗ್ರಾಪಂ ಕುನಿಗನಹಳ್ಳಿ, ಬಿರಡಹಳ್ಳಿ ಗ್ರಾಪಂಗಳು ಜೆಡಿಎಸ್‌ ಬೆಂಬಲಿತರಿಗೆ ಸುಲಭವಾಗಿ ವಶವಾಗಲಿದ್ದು, ಬೆಳಗೋಡು ಗ್ರಾಪಂನಲ್ಲಿ ಅಧಿಕಾರದ ಗದ್ದುಗೆಗೇರಲು 3 ಪ್ರಮುಖ ಪಕ್ಷಗಳ ಬೆಂಬಲಿತರು ವ್ಯಾಪಕ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ:ಕನ್ನಡಿಗರನ್ನು ಕೆಣಕಿದರೆ ಮಲಗಿದ ಸಿಂಹವನ್ನು ಎಚ್ಚರಿಸಿದಂತೆ: ಡಾ. ಮನು ಬಳಿಗಾರ್ ಕಿಡಿ

ಪ್ರಬಲ ಪೈಪೋಟಿ: ಹೆಬ್ಬಸಾಲೆ ಗ್ರಾಪಂ ವ್ಯಾಪ್ತಿಯ 14 ಸ್ಥಾನಗಳಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು ಜೆಡಿಎಸ್‌, ಬಿಜೆಪಿ ನಡುವೆ ಅಧಿಕಾರ ಹಿಡಿಯಲು ವ್ಯಾಪಕ ಪೈಪೋಟಿ ಇದೆ. ಬಿಜೆಪಿ ಭದ್ರಕೋಟೆ ಕ್ಯಾಮನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತರು ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೂ ಇಬ್ಬರು ನಾಪತ್ತೆಯಾಗಿರುವುದು ಬಿಜೆಪಿ ಪಾಳಯದಲ್ಲಿ ಆತಂಕ ತಂದಿದೆ. ಹಾನುಬಾಳ್‌ ಗ್ರಾಪಂನಲ್ಲೂ ಅಧಿ  ಕಾರ ಹಿಡಿಯಲು ಬಿಜೆಪಿ, ಜೆಡಿಎಸ್‌ ನಡುವೆ ಪ್ರಬಲ ಪೈಪೋಟಿಯಿದೆ.

ಕುರುಭತ್ತೂರು ಗ್ರಾಪಂನಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಬೆಂಬಲಿತರ ನಡುವೆ ಪ್ರಬಲ ಪೈಪೋಟಿ ಇದೆ. ಯಸಳೂರು, ಚಂಗಡಿಹಳ್ಳಿ, ಐಗೂರು, ಹೊಸೂರು ಗ್ರಾಪಂಗಳಲ್ಲಿ ಯಾರು ಅಧಿಕಾರ ಹಿಡಿಯುತ್ತಾರೆಂದು ಕಾದು ನೋಡಬೇಕಾಗಿದೆ.

ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.