ಕೆಪಿಟಿಸಿಎಲ್‌ ಎಂಜಿನಿಯರ್‌ಗೆ ಮಚ್ಚಿನೇಟು


Team Udayavani, Jun 15, 2019, 3:00 AM IST

kptcal

ಹಾಸನ: ಕೆಪಿಟಿಸಿಎಲ್‌ ಮಹಿಳಾ ಕಿರಿಯ ಎಂಜಿನಿಯರ್‌ ಮೇಲೆ ಅಟೆಂಡರ್‌ ಒಬ್ಬ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ.  ಹಾಸನದ ಸಂತೇಪೇಟೆಯ ಕೆಪಿಟಿಸಿಎಲ್‌ನ 66/11 ಕೆ.ವಿ.ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಕಳೆದ 6 ವರ್ಷಗಳಿಂದ ಸ್ವಾತಿ ದೀಕ್ಷಿತ್‌ ಅವರು ಜ್ಯೂನಿಯರ್‌ ಎಂಜಿಯರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕಚೇರಿ ಮುಂಭಾಗದ ಸ್ಟೇಷನ್‌ ಯಾರ್ಡ್‌ನಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆರವು ಮಾಡಿ ಸ್ವಚ್ಛಗೊಳಸುವಂತೆ ಅಟೆಂಡರ್‌ ನವೀನ್‌, ಮಂಜುನಾಥ್‌ ಮತ್ತು ವೆಂಕಟೇಶ್‌ಗೌಡ ಅವರಿಗೆ ಸ್ವಾತಿ ದೀಕ್ಷಿತ್‌ ಶುಕ್ರವಾರ ಬೆಳಗ್ಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.

ನನ್ನ ಯಾರ್ಡ್‌ ಸ್ವಚ್ಛಗೊಳಿಸಿದ್ದೇನೆ ಮತ್ತೆ ನನಗೇಕೆ ಹೇಳುತ್ತೀರಿ ಎಂದು ಮಂಜುನಾಥ್‌ ಜಗಳ ತೆಗೆದಿದ್ದಾನೆ. ಯಾರಿಗೂ ಕೆಲಸ ಹಂಚಿಲ್ಲ. ಎಲ್ಲರೂ ಒಟ್ಟಿಗೆ ಸೇರಿ ಸ್ವಚ್ಛಗೊಳಿಸಿ ಎಂದು ಸ್ವಾತಿ ದೀಕ್ಷಿತ್‌ ಅವರು ತಾಕೀತು ಮಾಡಿದಾಗ, ನವೀನ್‌ ಮತ್ತು ವೆಂಕಟೇಶ್‌ಗೌಡ ಕೆಲಸಕ್ಕೆ ಮುಂದಾಗಿದ್ದಾರೆ. ಆದರೂ, ಮಂಜುನಾಥ್‌ ಸ್ವಚ್ಛತಾ ಕೆಲಸಕ್ಕೆ ಹೋಗಲಿಲ್ಲವೆನ್ನಲಾಗಿದೆ.

ನೌಕರರಿಗೆ ಸೂಚನೆ ನೀಡಿದ ನಂತರ ಸ್ವಾತಿ ದೀಕ್ಷಿತ್‌ ಅವರು ಕಚೇರಿಯಲ್ಲಿ ಕೆಲಸ ಮಾಡುವ ಸೌಮ್ಯಾ ಮತ್ತು ಸರಸ್ವತಿ ಅವರೊಂದಿಗೆ ಮಾತನಾಡುತ್ತಾ ನಿಂತಿದ್ದರು. ಈ ವೇಳೆ ಗಿಡಗಂಟಿಗಳನ್ನು ಸ್ವಚ್ಛಗೊಳಿಸಲು ಹಿಡಿದಿದ್ದ ಮಚ್ಚು ಎತ್ತಿಕೊಂಡು ಕೂಗಾಡುತ್ತಾ ಬಂದ ಮಂಜುನಾಥ್‌ ನಿಮ್ಮನ್ನು ಕೊಲೆ ಮಾಡುತ್ತೇನೆ ಎಂದು ಸ್ವಾತಿ ದೀಕ್ಷಿತ್‌ ಅವರ ತಲೆಗೆ ಮಚ್ಚು ಬೀಸಿದ್ದಾನೆ.

ಅವರು ತಪ್ಪಿಸಿಕೊಂಡರೂ ಬಿಡದೆ ಮಚ್ಚಿನಿಂದ ಹೊಡೆದಾಗ ಸ್ವಾತಿ ದೀಕ್ಷಿತ್‌ ಅವರ ಎಡಗೈ, ಎಡಕೆನ್ನೆ ಹಾಗೂ ಹಣೆಗೆ ಮಚ್ಚಿನೇಟು ಬಿದ್ದಿವೆ. ಸ್ವಾತಿ ದೀಕ್ಷಿತ್‌ ಅವರ ಎಡಗೆನ್ನೆ ಸುಮಾರು 3 ಇಂಚು ಭಾಗವಾಗಿದ್ದು, ಒಂದೆರೆಡು ಹಲ್ಲುಗಳು ಮುರಿದು ಹೋಗಿವೆ. ಎರಡು ಬೆರಳು ತುಂಡಾಗಿವೆ.

ಸ್ವಾತಿ ದೀಕ್ಷಿತ್‌ ಅವರ ರಕ್ಷಣೆಗೆ ಬಂದ ಬಂದ ವೆಂಕಟೇಶ್‌ಗೌಡ ಅವರ ತಲೆಗೂ ಮಚ್ಚಿನೇಟು ಬಿದ್ದಿದೆ. ಅವರಿಬ್ಬರೂ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಮಂಜುನಾಥನನ್ನು ಹಾಸನ ನಗರ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.