ಬಾಲ್ಯ ವಿವಾಹ ದುಷ್ಪರಿಣಾಮದ ಜಾಗೃತಿ ಅಗತ್ಯ
Team Udayavani, Jun 15, 2020, 7:14 AM IST
ಹಾಸನ: ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹದಿಹರೆಯದವರಿಗೆ ಹಾಗೂ ವಯಸ್ಕ ಮಕ್ಕಳನ್ನು ಹೊಂದಿರುವ ಪೋಷಕರಿಗೆ ಬಾಲ್ಯ ವಿವಾಹ ದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವ ಕಚೇರಿ ಸಭಾಂಗಣದಲ್ಲಿ ಡಾ.ಕೆ.ಎಂ.ಸತೀಶ್ ಕುಮಾರ್ ಅವರ ಅಧ್ಯಕ್ಷತೆ ಯಲ್ಲಿ ನಡೆದ ಪಿ.ಸಿ.ಪಿ.ಎನ್.ಡಿ.ಟಿ ಹಾಗೂ ಡಿ.ಐ.ಎಂ.ಪಿ. ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಪಾಲ್ಗೊಂಡಿದ್ದ ಸದಸ್ಯರೆಲ್ಲರೂ ಕಾರ್ಯಕ್ರಮಗಳನ್ನು ಆಯೋಜಿಸಿ ಅರಿವು ಮೂಡಿಸುವುದು ಅತ್ಯಗತ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಬಾಲ್ಯವಿವಾಹ ಮಾಡಿದರೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಶಿಕ್ಷೆಗೆ ಗುರಿ ಯಾಗುವ ಕುರಿತು ಜನರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ಬಾಲ್ಯ ವಿವಾಹ, ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆಯಂತಹ ಕೃತ್ಯ ಎಸಗುವುದರಿಂದ ಹೆಣ್ಣು ಮಕ್ಕಳು ದೈಹಿಕ ಮತ್ತು ಮಾನಸಿಕ ತೊಂದರೆಗಳಿಗೆ ಒಳಗಾಗುವುದರೊಂದಿಗೆ ಸಮಾಜದಲ್ಲಿ ಸಂಭವಿಸುವ ಅನಾಹುತಗಳ ಬಗ್ಗೆ ಜನರಿಗೆ ತಿಳಿವಳಿಕೆ ನೀಡಲು ರೇಡಿಯೋ ಮೂಲಕ ಫೋನ್ ಇನ್ ಕಾರ್ಯಕ್ರಮ ಮಾಡುವುದರ ಮೂಲಕ ಹೆಚ್ಚು ಪರಿಣಾಮ ಕಾರಿಯಾಗಿ ಜಾಗೃತಿ ಮೂಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಆರ್ಸಿಎಚ್.ಅಧಿಕಾರಿ ಡಾ. ಕಾಂತರಾಜ್, ಸಮಿತಿಯ ಸದಸ್ಯರಾದ ಡಾ. ಭಾರತಿ ರಾಜಶೇಖರ್, ಡಾ. ಸಾವಿತ್ರಿ, ಲೀಲಾವತಿ, ಡಾ. ದಿನೇಶ್, ಡಾ.ಶೈಲೇಶ್, ಕೆ.ಟಿ. ಜಯಶ್ರೀ, ರಿಹಾನಾ ಬಾನು, ಮಧುರಾ ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ