ಚನ್ನಕೇಶವ ದೇಗುಲದ ಆವರಣದಲ್ಲಿ ತೊಟ್ಟಿಲು ಶಾಸ್ತ್ರ: ಭಕ್ತರ ಆಕ್ರೋಶ
Team Udayavani, Nov 17, 2022, 9:00 PM IST
ಬೇಲೂರು: ಪುರಾತತ್ವ ಇಲಾಖೆ ಅಧಿಕಾರಿಗಳು ಮತ್ತು ದೇವಾಲಯದ ಆಡಳಿತ ಮಂಡಳಿ ಸಿಬ್ಬಂದಿ ಬೇಜವ್ದಾರಿಯಿಂದ ಚನ್ನಕೇಶವ ದೇವಾಲಯದ ಒಳಾಂಗಣ ಕಲ್ಯಾಣ ಮಂಟಪದಲ್ಲಿ ಖಾಸಗಿ ವ್ಯಕ್ತಿಗಳು ಮಗುವಿನ ನಾಮಕರಣ ಮಾಡಿರುವುದು ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ.
ಚನ್ನಕೇಶವಸ್ವಾಮಿ ದೇಗುಲದ ಒಳಾಂಗಣ ಕಲ್ಯಾಣಮಂಟಪದಲ್ಲಿ ಕೇಶವನ ಕಲ್ಯಾಣೋತ್ಸವ ಹೊರತು ಪಡಿಸಿ, ಯಾವುದೇ ಶುಭ ಕಾರ್ಯಗಳನ್ನು ನಡೆಸಬಾರದು ಎಂದಿದ್ದರೂ, ದೇಗುಲದ ಆಡಳಿತ ಮಂಡಳಿ ಮತ್ತು ಪುರಾತತ್ವ ಇಲಾಖೆಯ ಅನುಮತಿ ಇಲ್ಲದೆ ತೊಟ್ಟಿಲು ಶಾಸ್ತ್ರದೊಂದಿಗೆ ನಾಮಕರಣ ಮಾಡಿರುವುದು ಭಕ್ತರ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ತರೀಕೆರೆ ಮೂಲದ ರಾಜಣ್ಣ ಕುಟುಂಬ ವರ್ಗದವರು ತಮ್ಮ ಮೊಮ್ಮಗನ ನಾಮಕರಣವನ್ನು ಯಾವುದೇ ಅನುಮತಿ ಪಡೆಯದೆ ದೇಗುಲದ ಕಲ್ಯಾಣಮಂಟಪದಲ್ಲಿ ನಾಮಕರಣ ಶಾಸ್ತ್ರ ಮಾಡಿದ್ದಾರೆ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಪುರಾತತ್ವ ಇಲಾಖೆ ಸಹಾಯಕ ಸಂರಕ್ಷಣಾಧಿಕಾರಿ ಗೌತಮ್, ಇಲ್ಲಿ ಖಾಸಗಿ ವ್ಯಕ್ತಿಗಳು ಯಾವುದೇ ಕಾರ್ಯಕ್ರಮ ನಡೆಸಬಾರದು ಎಂಬ ನಿಯಮವಿದ್ದರೂ ಅನುಮತಿ ಇಲ್ಲದೆ ದೇಗುಲದ ಒಳಾಂಗಣ ಕಲ್ಯಾಣ ಮಂಟಪದಲ್ಲಿ ತೊಟ್ಟಿಲು ಶಾಸ್ತ್ರ ನಡೆಸಿದ್ದು ತಪ್ಪು, ಈ ಬಗ್ಗೆ ಸ್ಥಳಕ್ಕೆ ಧಾವಿಸಿ ಮಾಹಿತಿ ಪಡೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ