ಕೆರೆ ಬತ್ತದಂತೆ ನೋಡಿಕೊಳ್ಳಿ


Team Udayavani, Oct 24, 2020, 4:31 PM IST

ಕೆರೆ ಬತ್ತದಂತೆ ನೋಡಿಕೊಳ್ಳಿ

ಹಳೇಬೀಡು: ದ್ವಾರಸಮುದ್ರ ಕೆರೆ ಮುಂದೆಂದೂ ಬತ್ತದಂತೆ ನೋಡಿಕೊಳ್ಳುವ ಜವಾಬ್ದಾರಿ ರೈತರ ಮೇಲಿದೆ ಎಂದು ಪುಷ್ಪಗಿರಿ ಮಠದ ಸೋಮಶೇಖರ ಸ್ವಾಮೀಜಿ ಹೇಳಿದರು.

ಗ್ರಾಮದ ವಿಶ್ವ ಪ್ರಸಿದ್ಧ ದ್ವಾರಸಮುದ್ರ ಕೆರೆಗೆ ಶುಕ್ರವಾರ ರೈತಸಂಘ, ಆಟೋ ಮಾಲಿಕರು ಮತ್ತು ಚಾಲಕರ ಬಳಗ, ಕೆರೆ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಬಾಗಿನ ಅರ್ಪಿಸಿ ಮಾತನಾಡಿ, ನೀರಾವರಿ ಹೋರಾಟಕ್ಕೆ ವಿವಿಧ ಮಠಾಧೀಶರು, ಜನಸಾಮಾನ್ಯರಿಂದ ದೊರೆತ ಅಭೂತ ಪೂರ್ವ ಬೆಂಬಲ ಎಂದೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಹೋರಾಟದ ಪ್ರತಿಫ‌ಲವಾಗಿ ಏತ ನೀರಾವರಿ ಯೋಜನೆಯಿಂದ ಅಲ್ಪಮಟ್ಟಿನ ಯಶಸ್ಸು ನೀಡಿದ್ದು, ಮಳೆಯಿಂದಾಗಿ ಕೆರೆ ಭರ್ತಿಯಾಗಿದೆ. ನಮ್ಮ ಹೋರಾಟಕ್ಕೆ ವರುಣಆಶೀರ್ವಾದ ಮಾಡಿದ್ದಾನೆ. ಶೀಘ್ರದಲ್ಲಿಸರ್ಕಾರ ತಡೆ ಹಿಡಿದಿರುವ ರಣಘಟ್ಟ ಯೋಜನೆಯ 100 ಕೋಟಿ ರೂ. ಹಣ ಬಿಡುಗಡೆ ಮಾಡಲಿ ಎಂದು ಮನವಿ ಮಾಡಿದರು.

ನೀರು ಸಂರಕ್ಷಿಸಿ: ಮನುಗುಂದಿ ಮಠದ ಬಸವಾನಂದ ಸ್ವಾಮೀಜಿ ಮಾತನಾಡಿ, ನೀರಿನ ಸಂರಕ್ಷಣೆ, ಮಿತವಾಗಿ ಬಳಕೆ ಮಾಡದೇ ಹೋದರೆ ವಿಷವಾಗಿ ಅದು ನಮ್ಮ ಮನುಕುಲಕ್ಕೆ ಕಂಟಕವಾಗುತ್ತದೆ. ರೈತರು ಮಳೆಕೊಯ್ಲು ವ್ಯವಸ್ಥೆ ಮಾಡಿಕೊಳ್ಳಬೇಕು. ಉತ್ತಮ ಮಳೆಯಿಂದ ನೀರು ಶೇಖರಣೆ ಆಗೆ, ಶುದ್ಧೀಕರಿಸಿ ಬಳಕೆ ಮಾಡಿದರೆ ಹಲವು ರೋಗಗಳಿಂದ ಮುಕ್ತರಾಗಬಹುದು. ಆಸ್ಪತ್ರೆಗೆ ಲಕ್ಷಾಂತರ ರೂ. ಖರ್ಚು ಮಾಡುವುದು ತಪ್ಪುತ್ತದೆ ಎಂದು ತಿಳಿಸಿದರು.

ತಂಬಡಿಹಳ್ಳಿ ಮಠದ ಡಾ.ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಸ್ವಾಮಿ ಮಾತನಾಡಿ, ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಈ ಭಾಗದ ರೈತರುದಶಕಗಳಿಂದಲೂ ನೀರಾವರಿ ಯೋಜನೆ ಜಾರಿಆಗದೇ ನೋವು ಅನುಭವಿಸುವಂತಾಗಿದೆ ಎಂದು ವಿಷಾದಿಸಿದರು.

ಹೋರಾಟ ಅನಿವಾರ್ಯ: ಪುಷ್ಪಗಿರಿ ಮಠದ ಕಾರ್ಯದರ್ಶಿ ಎಸ್‌.ಎಚ್‌.ರಾಜಶೇಖರ್‌ ಮಾತನಾಡಿ, ದ್ವಾರಸಮುದ್ರ ಕೆರೆ ಭರ್ತಿಆಗಿರುವುದಕ್ಕೆ ಹೆಚ್ಚಿನ ಸಂತೋಷ ಪಡಬೇಕಿಲ್ಲ. ರಣಘಟ್ಟ ಶಾಶ್ವತ ನೀರಾವರಿ ಯೋಜನೆ ಜಾರಿ ಆಗುವವರೆಗೂ ಹೋರಾಟದ ಅನಿರ್ವಾತೆ ಇದೆ ಎಂದು ತಿಳಿಸಿದರು.

ಮುಂಗಾರು ಮತ್ತು ಹಿಂಗಾರು ಮಳೆ ಸಮೃದ್ಧಿ ಆಗಿ ಆಗಿರುವುದರಿಂದ ಇತಿಹಾಸಪ್ರಸಿದ್ಧ ದ್ವಾರಸಮುದ್ರ ಕೆರೆಗೆ ಸಾಕಷ್ಟು ನೀರುಹರಿದುಬಂದು, ಭರ್ತಿಯಾಗಿ ಕೋಡಿ  ಹರಿದಿದೆ. ದಶಕಗಳಿಂದ ಈ ಭಾಗದ ರೈತರುಅನುಭವಿಸುತ್ತಿದ್ದ ಯಾತನೆ ನಿಲ್ಲಬೇಕಾದರೆ, ರಣಘಟ್ಟ ರಾಜ ಕಾಲುವೆ ಮೂಲಕ ದ್ವಾರಸಮುದ್ರ ಕೆರೆಗೆ ನೀರು ಹರಿಯಬೇಕಿದೆ ಎಂದು ಹೇಳಿದರು.

ಶಾಶ್ವತ ನೀರಾವರಿ ಯೋಜನೆ ಜಾರಿ ಆಗಲಿ: ಈ ಭಾಗಕ್ಕೆ ಶಾಶ್ವತ ನೀರಾವರಿ ದೊರೆತಂತಾಗಿದೆ. ದ್ವಾರಸಮುದ್ರಕೆರೆ ಭರ್ತಿ ಯಾಗಿರುವುದರಿಂದ ತಾತ್ಕಾಲಿಕ ಖುಷಿ ದೊರೆತಿದೆ. ಹಳೇಬೀಡು, ಮಾದಿಹಳ್ಳಿ ಹೋಬಳಿಯ ಸುತ್ತಮುತ್ತಲಿನ ನೂರಾರು ಹಳ್ಳಿಗಳ ರೈತರು ಸಮೃದ್ಧಿಯಾಗಿ ಜೀವನ ಸಾಗಿಸುತ್ತಾರೆ. ಆದರೆ, ಮಳೆ ಕೈಕೊಟ್ಟರೆ ಬದುಕು ಮೂರಾಬಟ್ಟೆಯಾಗುತ್ತದೆ. ಆದ್ದ ರಿಂದ ಶಾಶ್ವತ ಯೋಜನೆ ಜಾರಿಯಾದರೆ ರೈತರು ಮತ್ತು ಈ ಭಾಗದ ಜನಸಾಮಾನ್ಯರಿಗೆ ನೆಮ್ಮದಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೋಳಗುಂದ ಮಠದ ಜಯಚಂದ್ರಶೇಖರ ಸ್ವಾಮೀಜಿ, ಯಳನಾಡು ಮಠದ ಜ್ಞಾನಪ್ರಭು ದೇಶಕೇಂದ್ರ ಸ್ವಾಮೀಜಿ, ಮಡಾಳು ಮಠ ರುದ್ರಮುನಿ ಸ್ವಾಮೀಜಿಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ರೈತಸಂಘದಮುಖಂಡಾರಮಲ್ಲಿಕಾರ್ಜುನ್‌, ಹಾಲಪ್ಪ, ಶಿವಕುಮಾರ್‌, ಗುರುಶಾಂತಪ್ಪ, ಬಸವರಾಜು, ಗಂಗೂರು ಶಿವಕುಮಾರ್‌, ಕಾಂತರಾಜು, ತುಕರಾಂ, ರಘನಾಥ್‌ ಮುಂತಾದವರು ಹಾಜರಿದ್ದರು

ಟಾಪ್ ನ್ಯೂಸ್

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.