ಹಸಿರು ಶಾಲೆ ಪ್ರಶಸ್ತಿ ಪಡೆದ ಬಾಗೂರು ಸರ್ಕಾರಿ ಪ್ರೌಢಶಾಲೆ

ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪುರಸ್ಕಾರ

Team Udayavani, Jun 20, 2019, 12:55 PM IST

hasan-tdy-1..

ಚನ್ನರಾಯಪಟ್ಟಣ: ತಾಲೂಕಿನ ಬಾಗೂರು ಹೋಬಳಿ ಕೇಂದ್ರದಲ್ಲಿನ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ಆವರಣದಲ್ಲಿ 7 ವರ್ಷದ ಹಿಂದೆ ಸುಮಾರು 312 ಗಿಡವನ್ನು ನೆಟ್ಟು ಪೋಷಣೆ ಮಾಡಿದ್ದರ ಫ‌ಲವಾಗಿ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ಹಸಿರು ಶಾಲೆ ಪ್ರಶಸ್ತಿ ನೀಡಿ ಗೌರವಿಸಿದೆ.

2012ರಲ್ಲಿ ಶಾಲೆಯ ಮುಖ್ಯ ಪಿ.ಚಲುವ ನಾರಾಯಣಸ್ವಾಮಿ ಅವರು ತಮ್ಮ ಶಾಲಾ ಆವರಣ ದಲ್ಲಿ 50 ಗಿಡವನ್ನು ನೆಡುವ ಮೂಲಕ ಪರಿಸರ ಉಳಿವಿಗೆ ಮುಂದಾದರು. ಗಿಡಗಳು ಉತ್ತಮವಾಗಿ ಬೆಳೆದವು ಇದರಿಂದ ಪ್ರೇರೇಪಣೆಗೊಂಡ‌ ಮುಖ್ಯ ಶಿಕ್ಷಣ 2013ರಲ್ಲಿ 130 ಗಿಡವನ್ನು ನೆಟ್ಟು ಶಾಲೆ ವಿದ್ಯಾರ್ಥಿಗಳ ಸಂಸದರನ್ನಾಗಿ ಮಾಡಿ ಪ್ರತಿ ತಂಡಕ್ಕೆ ಇಂತಿಷ್ಟು ಗಿಡವನ್ನು ನೀಡಿ ಅವುಗಳನ್ನು ಪೋಷಣೆ ಮಾಡುವ ಜವಾಬ್ದಾರಿ ನೀಡಿದರು.

ವಿದ್ಯಾರ್ಥಿಗಳಿಗೆ ನಗದು ಬಹುಮಾನ: 2014ರ ಜೂನ್‌ ತಿಂಗಳಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗ ವಾಗಿ 150 ಗಿಡವನ್ನು ನೆಟ್ಟು ಅವುಗಳನ್ನು ಯಾವ ವಿದ್ಯಾರ್ಥಿ ಉತ್ತಮವಾಗಿ ಪೋಷಣೆ ಮಾಡುತ್ತಾರೋ ಅವರಿಗೆ ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿ ದರು ಮುಖ್ಯ ಶಿಕ್ಷಕರ ಮುತುವರ್ಜಿ ಹಾಗೂ ಶಾಲೆಯ ವಿದ್ಯಾರ್ಥಿಗಳಿಗೆ ಪರಿಸರ ಕಾಳಜಿ ದೃಷ್ಟಿ ಯಿಂದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ದರು. ಹೀಗೆ ಅವರು ಒಟ್ಟು 330 ಗಿಡವನ್ನು ನಾಟಿ ಮಾಡಿದರು. ಅದಲ್ಲಿ 18 ಗಿಡಗಳು ಹಾಳಾದವು. ಉಳಿದ 312 ಗಿಡಗಳು ಇಂದು ಶಾಲಾ ಆವರಣದ ಅಂದವನ್ನು ಹೆಚ್ಚಿಸಿರುವುದಲ್ಲದೇ ಶಾಲೆಗೆ ಹಸಿರು ಶಾಲೆ ಪ್ರಶಸ್ತಿಯನ್ನು ತಂದುಕೊಟ್ಟಿದೆ. ಶಾಲೆ ಮುಂಭಾಗ ಕೈ ತೋಟ ಇರಬೇಕು ಎಂದು ಸಣ್ಣ ಮಟ್ಟದಲ್ಲಿ ಪರಿಸರ ಕಾಳಜಿ ತೋರಿದ ಶಿಕ್ಷಕರಿಂದ ಇಂದು ಮಿನಿ ಉದ್ಯಾನ ವನವಾಗಿ ಮಾರ್ಪಟ್ಟಿದೆ.

ವಿವಿಧ ಜಾತಿಯ ಗಿಡಗಳು: ಸೀಬೆ, ಮಾವು, ಹಲಸು, ಹತ್ತಿ, ಸೀತಾಫ‌ಲ, ದಾಳಿಂಬೆ, ಪರಂಗಿ, ನೇರಳೆ, ಸಪೋಟ, ನಲ್ಲಿಕಾಯಿ ಹೀಗೆ ವಿವಿಧ ಹಣ್ಣಿನ ಗಿಡವನ್ನು ಬೆಳೆಸಿರುವುದಲ್ಲದೇ ತೇಗ, ಹೊನ್ನೆ, ಬೇವು, ಹೆಬ್ಬೇವು, ಅಶೋಕ, ಮಹಾಘನಿ, ಹೊಂಗೆ ಸೇರಿದಂತೆ ಅನೇಕ ಜಾತಿಯ ಮರಗಳು ಈಗ ಬೆಳೆದು ನಿಂತಿವೆ, ಇವಲ್ಲದೇ ವಿವಿಧ ಹೂವಿನ ಗಿಡಗಳೂ ಶಾಲಾ ಕೈತೋಟದಲ್ಲಿ ಕಾಣಸಿಗುತ್ತವೆ.

ಪರಿಸರ ಜಾಗೃತಿ: ಶಾಲೆಯ ಮುಂದೆ ಇರುವ ಉದ್ಯಾನವನದಲ್ಲಿ ಬಿಸಿಯೂಟದ ಕೈತೋಟವಾಗಿ ಮಾಡಿದ್ದು ಕಡಿಮೆ ನೀರಿನಲ್ಲಿ ಗಿಡಗಳನ್ನು ಬೆಳೆಸ ಲಾಗಿದೆ. ಬಗೆಬಗೆಯ ಸೊಪ್ಪು ಬೆಳೆದು ಊಟಕ್ಕೆ ಬಳಸ ಲಾಗುತ್ತದೆ. ವಿದ್ಯಾರ್ಥಿಗಳು ಪ್ರತಿ ನಿತ್ಯ ಮರ, ಗಿಡ ಗಳೊಂದಿಗೆ ಸಂಪರ್ಕ ಹೊಂದಿದರೆ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡುತ್ತದೆ ಎಂಬ ಉದ್ದೇಶದಿಂದ ವಿದ್ಯಾರ್ಥಿಗಳ ಮೂಲಕವೇ ಉದ್ಯಾನವನ ನಿರ್ವಹಣೆ ಮಾಡಲಾಗುತ್ತಿದೆ.

ಶಾಲೆಯ ಅಭಿವೃದ್ಧಿ ಅಚ್ಚರಿ: ನಿರ್ಜನ ಪ್ರದೇಶದಲ್ಲಿ ಇದ್ದ ಶಾಲೆ, ವರ್ಷದಿಂದ ವರ್ಷಕ್ಕೆ ಅಭಿವೃದ್ಧಿ ಕಾಣು ತ್ತಿದೆ. ಪಾಲಕರೂ ಇಲ್ಲಿನ ವಾತಾವರಣದ ಬಗ್ಗೆ ಹರ್ಷ ವ್ಯಕ್ತಪಡಿಸುತ್ತಾರೆ. ಇತ್ತೀಚೆಗೆ ಹೊಸದಾಗಿ ನಾಲ್ಕು ಕೊಠಡಿಯನ್ನು ನಿರ್ಮಾಣ ಮಾಡಲಾಗಿದೆ, ಇಂಗ್ಲಿಷ್‌ ಹಾಗೂ ಕನ್ನಡ ಭಾಷೆ ಎರಡರಲ್ಲೂ ಶಿಕ್ಷಣ ನೀಡ ಲಾಗುತ್ತಿದ್ದು, ಎಲ್ಲಾ ರೀತಿಯ ಸೌಕರ್ಯ ಹೊಂದಿ ರುವ ಶಾಲೆ ಇದಾಗಿದೆ. ಈ ಭಾಗದ ಮಾದರಿ ಶಾಲೆ ಎಂದರೆ ತಪ್ಪಾಗಲಾರದು. ಖಾಸಗಿ ಶಾಲೆಗೆ ಸಡ್ಡು ಹೊಡೆಯುವ ರೀತಿಯಲ್ಲಿ ಸರ್ಕಾರಿ ಶಾಲೆ ಬಳೆದು ನಿಂತಿರುವುದು ತಾಲೂಕಿನ ಮಟ್ಟಿಗೆ ಹೆಮ್ಮೆಯ ಸಂಗತಿಯಾಗಿದೆ.

ಫೇಸ್‌ಬುಕ್‌ ಪೇಜ್‌ ಹೊಂದಿರುವ ಶಾಲೆ: ಸರ್ಕಾರಿ ಶಾಲೆಗಳು ಪ್ರಚಾರದ ಕೊರತೆಯಿಂದ ಸೊರಗುತ್ತಿವೆ ಇದನ್ನು ಅರಿತ ಶಾಲೆ ಮುಖ್ಯ ಶಿಕ್ಷಣ ಪಿ.ಚಲುವನಾರಾಯಣಸ್ವಾಮಿ ಜಿಎಚ್ಎಸ್‌ ಬಾಗೂರು ಸಿಎನ್‌ಸ್‌ ಕ್ರಿಯೇಷನ್‌ ಎಂಬ ಹೆಸರಿನಲ್ಲಿ ಫೇಸ್‌ಬುಕ್‌ ಪೇಜ್‌ ತೆರೆದು ಶಾಲೆಯಲ್ಲಿ ಪ್ರತಿ ತಿಂಗಳು ನಡೆಯುವ ಪಠ್ಯೇತರ ಚಟುವಟಿಕೆಯನ್ನು ಅಪ್‌ಲೋಡ್‌ ಮಾಡುವುದನ್ನು ರೂಢಿಸಿಕೊಂಡಿದ್ದರು. ಇದರೊಂದಿಗೆ ಕೈ ತೋಟದಲ್ಲಿ ಮಕ್ಕಳು ಮಾಡುವ ಕೆಲಸವನ್ನು ಅಪ್‌ಲೋಡ್‌ ಮಾಡುವ ಮೂಲಕ ವಿದ್ಯಾರ್ಥಿಗಳ ಶ್ರಮದಾನವನ್ನು ಸಮಾಜಕ್ಕೆ ತಿಳಿಸಿದ್ದಾರೆ.

ಅಕ್ಷರ ದಾಸೋಹ ಅಧಿಕಾರಿಯಾಗಿ ವರ್ಗಾವಣೆ: ಶಾಲೆಯ ಸಾಕಷ್ಟು ಏಳಿಗೆಗೆ ಶ್ರಮಿಸಿದ ಮುಖ್ಯ ಶಿಕ್ಷಣ ಪಿ.ಚಲುವನಾರಾಯಣ ಸ್ವಾಮಿ ಅವರನ್ನು ಈಗ್ಗೆ 19 ದಿವಸದ ಹಿಂದೆ ಜೂ.1 ರಂದು ಅಕ್ಷರ ದಾಸೋಹ ಸಹಾಯ ನಿರ್ದೇಶಕರಾಗಿ ಸರ್ಕಾರ ಆದೇಶ ಹೊರಡಿಸಿ ವರ್ಗಾವಣೆ ಮಾಡಿದ್ದರಿಂದ ಅಕ್ಷರ ದಾಸೋಹ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

 

● ಶಾಮಸುಂದರ್‌ ಕೆ ಅಣ್ಣೇನಹಳ್ಳಿ

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.