![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಜಿಲ್ಲಾದ್ಯಂತ ವಿಜೃಂಭಣೆಯ ಬಸವ ಜಯಂತಿ
Team Udayavani, May 8, 2019, 2:27 PM IST
![hasan-tdy-1..](https://www.udayavani.com/wp-content/uploads/2019/05/hasan-tdy-1..-3-620x322.jpg)
ಹಾಸನದಲ್ಲಿ ಬಸವ ಜಯಂತಿ ಅಂಗವಾಗಿ ಜಿಲ್ಲಾ ವೀರಶೈವ ಸಮಾಜವು ಜಾನಪದ ಕಲಾ ತಂಡಗಳೊಂದಿಗೆ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ನಡೆಸಿತು.
ಹಾಸನ: ಸಾಮಾಜಿಕ ಕ್ರಾಂತಿಯ ಹರಿಕಾರ, ಸರ್ವಶ್ರೇಷ್ಠ ವಚನಕಾರ, ಭಕ್ತಿ ಭಂಡಾರಿ ಬಸವಣ್ಣ ನವರ ಜಯಂತಿಯನ್ನು ಜಿಲ್ಲಾದ್ಯಂತ ಸಂಭ್ರಮ, ಸಡಗರದೊಂದಿಗೆ ಆಚರಿಸಲಾಯಿತು.
ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ, ಮೆರವಣಿಗೆ, ಅನ್ನದಾನದ ಮೂಲಕ 12ನೇ ಶತಮಾನದಲ್ಲಿಯೇ ಸಮ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಿದ್ದ ಸಮಾಜ ಸುಧಾರಕನ ಕೊಡುಗೆಯನ್ನು ಸ್ಮರಿಸಲಾಯಿತು.
ಜಿಲ್ಲಾ ವೀರಶೈವ ಸಮಾಜವು ಬಸವಣ್ಣನವರ ಜನ್ಮದಿನವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿತು. ನಗರದ ಅರಳೇಪೇಟೆ ರಸ್ತೆಯಲ್ಲಿರುವ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬಸವಣ್ಣನವರ ವಿಗ್ರಹಕ್ಕೆ ಪೂಜೆ ಸಲ್ಲಿಸಿ, ಆ ವಿಗ್ರಹವನ್ನು ತೇರಿನಲ್ಲಿರಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಜಾನಪದ ಕಲಾತಂಡ ಗಳೊಂದಿಗೆ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆಯಲ್ಲಿ ನಂದಿ ಕೋಲು, ವೀರಗಾಸೆ ಕುಣಿತ, ಡೋಲು ಕುಣಿತ, ಮಂಗಳ ವಾದ್ಯ ಸೇರಿ ದಂತೆ ಜಾನಪದ ಕಲಾತಂಡಗಳ ಗಮನ ಸೆಳೆದವು. ಬಸವ ರಥವು ನಗರದ ಪ್ರಮುಖ ಬೀದಿಯಲ್ಲಿ ಸಂಚರಿಸುವಾಗ ಬಸವಣ್ಣನವರಿಗೆ ನಮಿಸಿದ ಸಾರ್ವಜನಿಕರು ಬಸವಣ್ಣನವರ ಸಮಾಜ ಸುಧಾ ರಣೆಯ ಹೋರಾಟವನ್ನು ಸ್ಮರಿಸಿದರು. ಮೆರವಣಿಗೆ ಯಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಮಜ್ಜಿಗೆಯನ್ನು ನೀಡಿ ಸಾರ್ವಜನಿಕರು ಸತ್ಕರಿಸಿದರು.
ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಬಿ.ಪಿ. ಐಸಾಮಿಗೌಡ, ಕಾರ್ಯದರ್ಶಿ ಭುವನಾಕ್ಷ, ಉಪಾಧ್ಯಕ್ಷ ದೊಡ್ಡ ವೀರೇಗೌಡ, ಅಖೀಲ ಭಾರತ ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್, ಮುಖಂಡರಾದ ಸಂಗಂ, ನಿರ್ದೇಶಕ ಮಲ್ಲಿಕ್, ಶ್ರೀ ಗಣಪತಿ ಸೇವಾ ಸಮಿತಿ ಅಧ್ಯಕ್ಷ ಡಾ.ಎಚ್. ನಾಗರಾಜು, ಬಸವರಾಜೇಂದ್ರ ಶಿಕ್ಷಣ ಸಂಸ್ಥೆಯ ಲೋಕೇಶ್, ಕೀರ್ತಿಕುಮಾರ್, ಸಮಾಜ ಸೇವಕ ಜಿ.ಒ. ಮಹಾಂತಪ್ಪ, ಆನಂದ್ ಪಾಟೀಲ್, ಕಿರಣ್, ಶೋಭನ್ ಬಾಬು, ಕುಮಾರ್, ಜಾನೆಕೆರೆ ಹೇಮಂತ್ ಸೇರಿದಂತೆ ವೀರಶೈವ ಸಂಘ ಹಾಗೂ ಹಲವು ಸಂಘಗಳ ಮುಖಂಡರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![hassan](https://www.udayavani.com/wp-content/uploads/2024/07/hassan-2-150x84.jpg)
Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ
![Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ](https://www.udayavani.com/wp-content/uploads/2024/07/road-s-150x96.jpg)
Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
![Sakaleshpura](https://www.udayavani.com/wp-content/uploads/2024/07/Sakaleshpura-1-150x84.jpg)
National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ
![HDK](https://www.udayavani.com/wp-content/uploads/2024/07/HDK-5-150x90.jpg)
MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್ಡಿಕೆ
![Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ](https://www.udayavani.com/wp-content/uploads/2024/07/19-4-150x90.jpg)
Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.