ಏಪ್ರಿಲ್ 20 ರವರೆಗೆ ಶಿಸ್ತಾಗಿ ಇರಿ: ಸಚಿವ ಮಾಧುಸ್ವಾಮಿ ಮನವಿ
Team Udayavani, Apr 15, 2020, 4:04 PM IST
ಹಾಸನ: ಕೋವಿಡ್ 19 ಬಗ್ಗೆ ಹಾಸನ ಜಿಲ್ಲೆಯ ಜನರು ಆತಂಕ ಪಡುವ ಅಗತ್ಯವಿಲ್ಲ. ಅಧಿಕಾರಿಗಳು ಸಮರ್ಪಕ ಕೆಲಸ ಮಾಡಿದ್ದಾರೆ. ಏಪ್ರಿಲ್ 20 ರ ವರೆಗೆ ಬಹಳ ಶಿಸ್ತಾಗಿ ಇರಬೇಕು ಎಂದು ಸಚಿವ ಮಾಧುಸ್ವಾಮಿ ಹೇಳಿದರು.
ಹಾಸನದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳ ಸಭೆ ನಂತರ ಮಾತನಾಡಿದ ಸಚಿವರು, ಕೋವಿಡ್ 19 ಬಗ್ಗೆ ಜಿಲ್ಲೆಯ ಜನರು ಆತಂಕ ಪಡುವ ಅಗತ್ಯವಿಲ್ಲ. ಅಧಿಕಾರಿಗಳು ಸಮರ್ಪಕ ಕೆಲಸ ಮಾಡಿದ್ದಾರೆ. ಮುಂದಿನ 5 ದಿನಗಳ ವರೆಗೆ ಜನರು ಕಠಿಣವಾಗಿರಬೇಕು ಎಂದರು.
ಜಿಲ್ಲೆಯಲ್ಲಿ 4 ಲಕ್ಷ ಮನೆಗಳನ್ನು ಸರ್ವೆ ಮಾಡಲಾಗಿದೆ. 50 ಕಡೆ ಪರೀಕ್ಷೆಗೆ ಬೇಕಾದ ವ್ಯವಸ್ಥೆ ಮಾಡುತ್ತೇವೆ. ಮೇ 1 ರೊಳಗೆ ಮತ್ತೆ 10 ಕೆಜಿ ಅಕ್ಕಿ ನೀಡಲಾಗುವುದು. ಆದಷ್ಟು ಜನ ಹೊರ ಬರದಂತೆ ಮನೆಯಲ್ಲೇ ಇರಬೇಕು ಎಂದರು.
ರಾಜ್ಯದಲ್ಲಿ ಲಾಕ್ ಡೌನ್ ಸಡಿಲವಾಗಲಿದೆ. ಕೃಷಿ, ಗೂಡ್ಸ್ ವಾಹನ ಓಡಾಟಕ್ಕೆ ಅವಕಾಶ ನೀಡಲಾಗುವುದು. ಹಾಸನ ಸೇಫ್ ಆಗಿರುವುದರಿಂದ ಕೃಷಿ ಚಟುವಟಿಕೆಗೆ ಸಮಸ್ಯೆ ಇಲ್ಲ. ಟ್ಯಾಕ್ಸಿಯಲ್ಲೂ ಇಬ್ಬರು ಮಾತ್ರ ಹೋಗಬೇಕು. ಬೈಕ್ ನಲ್ಲೂ ಒಬ್ಬರಷ್ಟೇ ಹೋಗಬೇಕು ಎಂದರು.
ಜನರಿಗೆ ವರಮಾನದ ಮೂಲ ಕಡಿಮೆಯಾಗಿರಬಹುದು. ಕಷ್ಟದ ಸನ್ನಿವೇಶದಲ್ಲಿ ಇದು ಸಾಮಾನ್ಯ. ಸಾಮಾಜಿಕ ಅಂತರ ಕಾಯ್ದುಕೊಂಡರೆ ನಾವು ನಾರ್ಮಲ್ ಲೈಫ್ ಗೆ ಮರಳಬಹುದು. ಜನರು ಸಹಕರಿಸುವಂತೆ ಸಚಿವರು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು