ಫ‌ಲಾನುಭವಿಗಳಿಗೆ ಸಕಾಲದಲ್ಲಿ ಸೌಲಭ್ಯ ತಲುಪಲಿ


Team Udayavani, Jan 14, 2020, 3:00 AM IST

palanubhavi

ಹಾಸನ: ಎಲ್ಲಾ ಯೋಜನೆಗಳನ್ನು ಸಕಾಲದಲ್ಲಿ ಫ‌ಲಾನುಭವಿಗಳಿಗೆ ತಲುಪಿಸಲು ಇಲಾಖೆ ಅಧಿಕಾರಿಗಳು ಇನ್ನಷ್ಟು ಜನಪರವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್‌. ಶ್ವೇತಾ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗಂಗಾ ಕಲ್ಯಾಣ, ಗ್ರಾಮೀಣ ಕುಡಿಯುವ ನೀರು, ಕೊಳವೆ ಬಾವಿ, ನಿರಂತರ ಜ್ಯೋತಿ, ಬೆಳಕು ಯೊಜನೆಗಳನ್ನು ಫ‌ಲಾನುಭವಿಗಳಿಗೆ ನಿಗದಿತ ಸಮಯದಲ್ಲಿ ಒದಗಿಸಬೇಕು ಎಂದು ಸಂಬಂಧಿಸಿದ ನಿಗಮಗಳಿಗೆ ನಿರ್ದೇಶನ ನೀಡಿದರು.

ವಿದ್ಯುತ್‌ ಕಂಬ ಸ್ಥಳಾಂತರಿಸಿ: ಶಾಲಾ ಆವರಣದೊಳಗೆ, ಕೆರೆಯೊಳಗೆ, ರಸ್ತೆ ಮಧ್ಯೆದಲ್ಲಿ ಹಾಕಿರುವ ವಿದ್ಯುತ್‌ ಕಂಬ, ಟ್ರಾನ್ಸ್‌ ಫಾರ್ಮರ್‌ಗ‌ಳಿಂದ ಅನಾಹುತಗಳಾಗುವ ಸಂಭವವಿದೆ. ಅವುಗಳನ್ನು ಮಳೆಗಾಲದ ಆರಂಭಕ್ಕೂ ಮುನ್ನ ಸುರಕ್ಷಿತವಾಗಿ, ಪರ್ಯಾಯ ಜಾಗಕ್ಕೆ ಸ್ಥಳಾಂತರಿಸಬೇಕು ಎಂದು ಸೂಚಿಸಿದರು.

ಸಾಮಾಜಿಕ ಭದ್ರತಾ ಯೋಜನೆಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಮನಸ್ವಿನಿ, ಅಂಗಕಲವೇತನ, ಮೈತ್ರಿ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಮೃತ ರೈತ ಪತ್ನಿಯರಿಗೆ ದೊರೆಯುವ ವಿಧವಾ ವೇತನಗಳು ಎಲ್ಲಾ ಫ‌ಲಾನುಭಗಳಿಗೂ ಕಾಲಕಾಲಕ್ಕೆ ತಲಪಬೇಕು. ಆ ಕುರಿತು ಇರುವ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಬೇಕು, ಸಂಬಂಧಿತ ತಹಶಿಲ್ದಾರರು ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳ ಅನುಷ್ಠಾನಾಧಿಕಾರಿ ಈ ಬಗ್ಗೆ ಗಮನಹರಿಸಬೇಕು ಎಂದರು.

ಮಕ್ಕಳ ಆರೋಗ್ಯ ತಪಾಸಣೆ ನಡೆಸಿ: ಜನವರಿ ಅಂತ್ಯದೊಳಗೆ ಕಡ್ಡಾಯವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮಕ್ಕಳ ಆರೋಗ್ಯ ತಪಾಸಣೆಯನ್ನು ಮಾಡಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿಲ್ಲದಿರುವ ಔಷಧಿಗಳನ್ನು ಹೊರಗಿನಿಂದ ಆಸ್ಪತ್ರೆ ವತಿಯಿಂದಲೇ ಖರೀದಿಸಿ ರೋಗಿಗಳಿಗೆ ತರಿಸಬೇಕು. ಯಾವುದೇ ಕಾರಣಕ್ಕೂ ಖಾಸಗಿ ಮೆಡಿಕಲ್‌ಗ‌ಳಲ್ಲಿ ಖರೀದಿಸುವಂತೆ ರೋಗಿಗಳಿಗೆ ಔಷಧಿ ಚೀಟಿ ಬರೆಯಬಾರದೆಂದು ವೈದ್ಯರಿಗೆ ಸೂಚನೆ ನೀಡಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್‌ ಕುಮಾರ್‌ ಅವರಿಗೆ ಸೂಚಿಸಿದರು.

ಮಹತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾಮಗಾರಿಯ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸಬಾರದು. ಉದ್ಯೋಗ ಖಾತರಿ ಯೋಜನೆಯ ಪ್ರಗತಿ ಕುಂಠಿತವಾಗದಂತೆ ಎಚ್ಚರ ವಹಿಸಬೇಕು ಎಂದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಂ ಬಾಬು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಎಸ್‌.ಸಿ. ಮಹೇಶ್‌, ಎಂ.ಸಿ. ಚಂದ್ರಶೇಖರ್‌, ಯೋಜನಾಧಿಕಾರಿ ನಾಗರಾಜ್‌, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಪಡಿತರ ಚೀಟಿದಾರರ ಅಲೆದಾಟ ತಪ್ಪಿಸಿ: ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಲೋಕೇಶ್‌ ಮಾತನಾಡಿ, ಪಡಿತರ ಚೀಟಿಗೆ ಬೆರಳಚ್ಚು ನೀಡುವ ಸಲುವಾಗಿ ನಿತ್ಯ ಜನ ನ್ಯಾಯಬೆಲೆ ಅಂಗಡಿಗಳಿಗೆ ಅಲೆಯುತ್ತಿದ್ದಾರೆ, ಅವರ ನೋಂದಣಿ ಅಮಾನತಾಗುವ ಆಂತಕದಲ್ಲಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ನ್ಯಾಯಬೆಲೆ ಅಂಗಡಿ ಮತ್ತು ಗ್ರಾಮಪಂಚಾಯತಿ ಅಧಿಕಾರಿಗಳ ಮೂಲಕ ಜನರಿಗೆ ಮಾಹಿತಿ ನೀಡಿ ಕಾರ್ಡುದಾರರ ಆತಂಕ ದೂರ ಮಾಡಬೇಕು. ಪಡಿತರ ಚೀಟಿಗೆ ಬೆರಳಚ್ಚು ನೀಡುವ ಸಂಬಂಧ ನ್ಯಾಯಬೆಲೆಯವರು ಹಣ ಸಂಗ್ರಹಿಸದಂತೆ ಎಚ್ಚರ ವಹಿಸಬೇಕು ಎಂದು ಒತ್ತಾಯಿಸಿದರು.

ಎಸ್ಸೆಸ್ಸೆಲ್ಸಿ ಮೊದಲ ಸ್ಥಾನ ಉಳಿಸಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಬಿ.ಎ. ಪರಮೇಶ್‌ ಮಾತನಾಡಿ, ಈ ವರ್ಷವೂ ಎಸ್ಸೆಸ್ಸೆಲ್ಸಿ ಫ‌ಲಿತಾಂಶದಲ್ಲಿ ಜಿಲ್ಲೆಯು ಮೊದಲ ಸ್ಥಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಡಿಡಿಪಿಐ ಮತ್ತು ಎಲ್ಲಾ ತಾಲೂಕುಗಳ ಬಿಇಒಗಳು ಶ್ರಮಿಸಬೇಕು ಎಂದರು. ಶಾಲೆ ಬಿಟ್ಟ ಮಕ್ಕಳ ವರದಿಯನ್ನು ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಬೇಕು. ಜಿಲ್ಲೆಯಲ್ಲಿ 127 ಶಾಲೆ ಬಿಟ್ಟ ಮಕ್ಕಳಿದ್ದು, ಶಿಕ್ಷಣ ವಂಚಿತರಿಗೆ ಮರಳಿ ಶಾಲೆಗೆ ಕಳುಸುವ ಜವಾಬ್ದಾರಿ ಆಯಾ ಗ್ರಾಮ ಪಂಚಾಯತಿ ಪಿಡಿಒಗಳದ್ದಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.