ತಲ್ಲಣ ಸೃಷ್ಟಿಸಿದ ಭವಾನಿ ಬಯಕೆಯ ಬಿರುಗಾಳಿ

ನಾನೇ ಅಭ್ಯರ್ಥಿ ಎಂದಿರುವ ಭವಾನಿ ರೇವಣ್ಣ

Team Udayavani, Jan 25, 2023, 9:32 AM IST

ತಲ್ಲಣ ಸೃಷ್ಟಿಸಿದ ಭವಾನಿ ಬಯಕೆಯ ಬಿರುಗಾಳಿ

ಎಚ್‌.ಡಿ. ಕುಮಾರಸ್ವಾಮಿಯವರು ಮತ್ತು ಸಂಸದ ಪ್ರಜ್ವಲ್‌ ರೇವಣ್ಣ ಅವರೂ ಹಾಸನ ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಆಗಿಲ್ಲ ಎಂದೇ ಸ್ಪಷ್ಟಪಡಿಸುವ ಮೂಲಕ ಭವಾನಿಯವರ ಬಯಕೆಯ ಬಿರುಗಾಳಿ ಯನ್ನು ಸದ್ಯಕ್ಕೆ ದೇವೇಗೌಡರತ್ತ ತಿರುಗಿಸಿದ್ದಾರೆ. ದೇವೇಗೌಡರು ಭವಾನಿಯವರ ಬಯಕೆಯನ್ನು ಹೇಗೆ ನಿಭಾಯಿಸುವರೋ, ಹಾಸನ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಯಾರನ್ನು ಸ್ಪರ್ಧೆಗಿಳಿ ಸುವರೋ ಎಂಬ ಕುತೂಹಲ ಇನ್ನೂ ಕೆಲವು ದಿನ ಮುಂದುವರಿಯುವುದಂತೂ ಖಚಿತ.

ಹಾಸನ: ಎಚ್‌.ಡಿ.ರೇವಣ್ಣನವರ ಪತ್ನಿ ಭವಾನಿ ರೇವಣ್ಣ ಅವರು ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಕ್ಷೇತ್ರದ ಅಭ್ಯರ್ಥಿಯಾಗಲು ಬಯಸಿ ರುವುದು ಎಚ್‌.ಡಿ.ದೇವೇಗೌಡರ ಕುಟುಂಬದಲ್ಲಿ ಇಕ್ಕಟ್ಟು ಸೃಷ್ಟಿಸಿದೆ. ಪಕ್ಷದಿಂದ ಅಧಿಕೃತವಾಗಿ ಅಭ್ಯರ್ಥಿಯನ್ನು ಪ್ರಕಟಿಸುವ ಮುನ್ನವೇ ಭವಾನಿ ರೇವಣ್ಣ ಅವರು ನಾನೇ ಅಭ್ಯರ್ಥಿ ಎಂದು ಸ್ವಯಂ ಘೋಷಣೆ ಮಾಡಿಕೊಂಡಿರುವುದು ಗೌಡರ ಕುಟುಂಬದೊಳಗೆ ಅಸಮಾಧಾನದ ಬಿರುಗಾಳಿ ಯನ್ನೇ ಸೃಷ್ಟಿಸಬಹುದು.

ಈ ಕ್ಷೇತ್ರದಲ್ಲಿ ಮಾಜಿ ಶಾಸಕ ದಿವಂಗತ ಎಚ್‌.ಎಸ್‌.ಪ್ರಕಾಶ್‌ ಅವರ ಪುತ್ರ ಎಚ್‌.ಪಿ.ಸ್ವರೂಪ್‌ ಅವರೂ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌. ಡಿ.ಕುಮಾರಸ್ವಾಮಿ ಅವರ ನಿರ್ದೇಶನದ ಮೇರೆಗೆ ಸ್ವರೂಪ್‌ ಅವರು ಕ್ಷೇತ್ರದಲ್ಲಿ ಸುತ್ತಾಡುತ್ತಾ ಚುನಾವಣ ಸಿದ್ಧತೆಯಲ್ಲಿದ್ದಾರೆ. ಆದರೆ ರೇವಣ್ಣ ಅವರ ಕುಟುಂಬದ ಕೆಂಗಣ್ಣಿಗೆ ಗುರಿಯಾಗಿರುವ ಸ್ವರೂಪ್‌ ಅವರಲ್ಲಿ ಭವಾನಿ ರೇವಣ್ಣ ಅವರ ಬಯಕೆಯ ಬಿರುಗಾಳಿಯು ತಲ್ಲಣ ಸೃಷ್ಟಿಸಿದೆ.

ಜೆಡಿಎಸ್‌ ಟಿಕೆಟ್‌ಗಾಗಿ ಭವಾನಿ ಹಾಗೂ ಸ್ವರೂಪ್‌ ಅವರ ನಡುವಿನ ಟಿಕೆಟ್‌ ಪೈಪೋಟಿ ಕಳೆದ 6 ತಿಂಗಳಿನಿಂದಲೂ ಇತ್ತು. ಈಗ ಆ ಪೈಪೋಟಿ ಕ್ಲೈಮಾಕ್ಸ್‌ ಹಂತಕ್ಕೆ ಬಂದು ತಲುಪಿದೆ. ಹಾಸನ ಕ್ಷೇತ್ರದ ಹಾಲಿ ಶಾಸಕ ಬಿಜೆಪಿಯ ಪ್ರೀತಂ ಗೌಡ ಅವರನ್ನು ಈ ಬಾರಿಯ ಚುನಾವಣೆಯಲ್ಲಿ ಸೋಲಿಸಲೇಬೇಕು ಎಂಬುದು ಗೌಡರ ಕುಟುಂಬದ ಹಾಗೂ ಜೆಡಿಎಸ್‌ ಕಾರ್ಯಕರ್ತರ ಪರಮೋತ್ಛ ಗುರಿ. ಆದರೆ ಟಿಕೆಟ್‌ಗಾಗಿ ಭವಾನಿ ರೇವಣ್ಣ ಮತ್ತು ಸ್ವರೂಪ್‌ ನಡುವಿನ ಪೈಪೋಟಿ ಫ‌ಲಿತಾಂಶದ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕವೂ ಸೃಷ್ಟಿಯಾಗಿದೆ.

ಎಚ್‌.ಎಸ್‌.ಪ್ರಕಾಶ್‌ 4 ಬಾರಿ ಹಾಸನ ಕ್ಷೇತ್ರದ ಶಾಸಕರಾಗಿದ್ದ ವರು. ಕಳೆದ ವಿಧಾನಸಭಾ ಚುನಾವಣೆ ಯಲ್ಲಿ ಹಾಸನ ಜಿಲ್ಲೆಯ ರಾಜಕಾರಣದ ಅಂಬೆಗಾಲಿನ ಶಿಶು ಎಂದೇ ಗುರುತಿಸಿದ್ದ ಪ್ರೀತಂ ಗೌಡರೆದುರು ಸೋತಿದ್ದು ಪ್ರಕಾಶ್‌ ಮತ್ತು ದೇವೇಗೌಡರ ಕುಟುಂಬಕ್ಕೆ ಸಹಿಸಿಕೊಳ್ಳಲಾಗದ ರಾಜಕೀಯ ಅಘಾತವನ್ನಂಟು ಮಾಡಿತು. ಚುನಾವಣೆ ಮುಗಿದ ಅನಂತರ ಅನಾರೋಗ್ಯಕ್ಕೀಡಾದ ಪ್ರಕಾಶ್‌ ಅವರು ಚೇತರಿಸಿಕೊಳ್ಳಲಾಗದೆ ಇಹಲೋಕ ತ್ಯಜಿಸಿದರು. ಈ ಬಾರಿಯ ಚುನಾವಣೆಯಲ್ಲಿ ಗೆಲ್ಲುವ ಮೂಲಕ ರಾಜಕೀಯ ಸೇಡು ತೀರಿಸಿಕೊಳ್ಳುವ ತವಕ ದೇವೇಗೌಡರು ಹಾಗೂ ಪ್ರಕಾಶ್‌ ಕುಟುಂಬಗಳಲ್ಲೂ ಇದೆ. ಆದರೆ ಅದಕ್ಕಾಗಿ ಒಗ್ಗಟ್ಟಿನ ಕಾರ್ಯತಂತ್ರ ರೂಪಿಸಬೇಕಾದ ಹೊತ್ತಿನಲ್ಲಿ ಟಿಕೆಟ್‌ಗಾಗಿ ಎರಡೂ ಕುಟುಂಬಗಳ ನಡುವೆ ಟಿಕೆಟ್‌ಗಾಗಿ ಪೈಪೋಟಿ ಎದುರಾಗಿರುವುದು ಜೆಡಿಎಸ್‌ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿಯೇ ಕೆ.ಆರ್‌.ನಗರ ಅಥವಾ ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಯಕೆ ವ್ಯಕ್ತಪಡಿಸಿದ್ದ ಭವಾನಿ ರೇವಣ್ಣ ಅವರು ಈ ಬಾರಿ ಶತಾಯಗ ತಾಯ ಸ್ಪರ್ಧೆಗಿಳಿಯಲೇಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಹಾಸನ ಕ್ಷೇತ್ರದ ಅಭ್ಯರ್ಥಿ ಎಂದು ಸ್ವಯಂ ಘೋಷಣೆಯನ್ನೂ ಮಾಡಿಕೊಂಡಿದ್ದಾರೆ. ಆದರೆ ಹಾಸನ ವಿಧಾನಸಭಾ ಕ್ಷೇತ್ರದ ಒಳ ರಾಜಕೀ ಯದ ಸುಳಿಗಳನ್ನು ಅರಿತಿರುವ ದೇವೇ ಗೌಡರು, ಎಚ್‌.ಡಿ.ಕುಮಾರಸ್ವಾಮಿ ಹಾಗೂ ಎಚ್‌.ಡಿ. ರೇವಣ್ಣ ಅವರು ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ.
ಈಗಾಗಲೇ ರೇವಣ್ಣ ಅವರ ಮನೆಯಲ್ಲಿ ಈಗಾಗಲೇ ರೇವಣ್ಣನವರು ಸೇರಿ ಇಬ್ಬರು ಶಾಸಕರು, ಒಬ್ಬ ಸಂಸದರಿರುವಾಗಲೇ ಭವಾನಿ ರೇವಣ್ಣ ಅವರಿಗೆ ಟಿಕೆಟ್‌ ಕೊಟ್ಟರೆ ಕುಟುಂಬ ರಾಜಕಾರಣದ ಟೀಕೆಗೆ ತುತ್ತಾಗಬೇಕಾಗುತ್ತದೆ. ಜತೆಗೆ ನಾಲ್ಕು ದಶಕಗಳ ಕಾಲದಿಂದ ದೇವೇಗೌಡರ ಕುಟುಂಬಕ್ಕೆ ವಿಧೇಯರಾಗಿರುವ ಪ್ರಕಾಶ್‌ ಕುಟುಂಬಕ್ಕೆ ನ್ಯಾಯ ಕೊಡಲಿಲ್ಲವೆಂಬ ಅಪವಾದವನ್ನೂ ಹೊರಬೇಕಾದೀತೆಂಬ ಆತಂಕವೂ ದೇವೇಗೌಡ ಮತ್ತು ಕುಟುಂಬದವರದ್ದು.

ಈ ಆತಂಕಗಳನ್ನೆಲ್ಲ ಬದಿಗೊತ್ತಿ ಭವಾನಿ ಅವರು ಸ್ಪರ್ಧೆಗೆ ಮುಂದಾಗಿದ್ದಾರೆ. ಎಚ್‌.ಡಿ.ರೇವಣ್ಣ ಅವರು ಹಾಸನ ನಗರಕ್ಕೆ ಆರೋಗ್ಯ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳು ಫ‌ಲ ನೀಡಲಿವೆ ಎಂಬುದು ಭವಾನಿ ಅವರ ನಿರೀಕ್ಷೆ. ಅಭಿವೃದ್ಧಿಯ ಕೊಡುಗೆಗಳ ಜತೆಗೆ ಜಾತಿ ಸಮೀಕರಣವೂ ಮುಖ್ಯ. ಆಡಳಿತಾರೂಢ ಪಕ್ಷದ, ಅರ್ಥಿಕ ಬಲಾಡ್ಯ ಅಭ್ಯರ್ಥಿಯನ್ನು ಮಣಿಸಲು ಸಕಲ ಕಾರ್ಯತಂತ್ರ ಗಳನ್ನು ರೂಪಿಸಬೇಕಾಗಿದೆ ಎಂಬುದು ಜೆಡಿಎಸ್‌ ಕಾರ್ಯಕರ್ತರ ಲೆಕ್ಕಾಚಾರ.

ಈ ಎಲ್ಲ ಬೆಳವಣಿಗೆ ಹಾಸನ ಜಿಲ್ಲೆಯಲ್ಲಿ ಪಕ್ಷದ ಉಸ್ತುವಾರಿ ಹೊತ್ತಿರುವ ಎಚ್‌.ಡಿ.ರೇವಣ್ಣ ಅವರಿಗೂ ಬಿಸಿತುಪ್ಪವಾಗಿದೆ. ಪತ್ನಿಗೆ ಟಿಕೆಟ್‌ ಕೊಡಲ್ಲ ಎಂದು ಹೇಳಲಾಗದ, ಅತ್ತ ನನ್ನ ನಿರ್ದೇಶನವಿಲ್ಲದೆ ಚುನಾವಣೆ ಸಿದ್ಧತೆಯಲ್ಲಿರುವ ಎಚ್‌.ಪಿ.ಸ್ವರೂಪ್‌ಗೆ ಟಿಕೆಟ್‌ ಕೊಟ್ಟರೆ ಮುಂದೆ ನನ್ನ ಹಿಡಿತಕ್ಕೆ ಸಿಗದಿದ್ದರೆ ಎಂಬ ಭಯವೂ ರೇವಣ್ಣ ಅವರನ್ನು ಕಾಡುತ್ತಿರುವಂತಿದೆ. ಪಕ್ಷದೊಳಗಿನ ಕಿಚ್ಚಿನ ಜತೆಗೆ ದೇವೇಗೌಡರ ಕುಟುಂಬದವರು ಹಾಸನ ಕ್ಷೇತ್ರದಲ್ಲಿ ಸ್ಪರ್ಧೆಗಿಳಿದರೆ 50 ಸಾವಿರ ಮತಗಳ ಅಂತರದಲ್ಲಿ ಸೋಲಿಸುವೆ ಎಂಬ ಪ್ರೀತಂ ಗೌಡರ ಅಟ್ಟಹಾಸದ ಮಾತು, ಪದೇ ಪದೆ ಪಂಥಾಹ್ವಾನದಿಂದ ಕೆರಳಿರುವ ರೇವಣ್ಣನವರ ಕುಟುಂಬ ಪಂಥಾಹ್ವಾನ ಸ್ವೀಕರಿಸುವುದಾಗಿ ಘೋಷಿಸಿದೆ. ದೇವೇಗೌಡರು ನಿರ್ಧಾರ ಪ್ರಕಟಿಸದೆ ಆದರೆ ಭವಾನಿಯವರನ್ನು ಸ್ಪರ್ಧೆಗಿಳಿಸುವುದಾಗಿ ಹೇಳುವ ಪರಿಸ್ಥಿತಿಯಲ್ಲಿ ರೇವಣ್ಣ ಅವರೂ ಇಲ್ಲ.

-ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.