20 ಲಕ್ಷ ಕೋಟಿ ಪ್ಯಾಕೇಜ್‌ಗೆ ಬಿಜೆಪಿ ಸ್ವಾಗತ


Team Udayavani, May 15, 2020, 7:39 AM IST

20laksha-koti

ಹಾಸನ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕಟಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್‌ ದೇಶದ ಆರ್ಥಿಕ ವ್ಯವಸ್ಥೆಗೆ ಚೈತನ್ಯ ತುಂಬುವಂತಹ ಮಹತ್ವದ ಘೋಷಣೆ ಯಾಗಿದೆ ಎಂದು ಹಾಸನ ಜಿಲ್ಲಾ ಬಿಜೆಪಿ ಮುಖಂಡರು  ಬಣ್ಣಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್‌.ಕೆ.ಸುರೇಶ್‌, ಶಾಸಕ ಪ್ರೀತಂ ಜೆ.ಗೌಡ, ಮಾಜಿ ಸಚಿವ ಎ.ಮಂಜು ಅವರು, ಕೊರೊನಾ ಪಿಡುಗಿನಿಂದ ತತ್ತರಿ ಸಿರುವ ದೇಶದ ಅರ್ಥ ವ್ಯವಸ್ಥೆಯನ್ನು ಸದೃಢಗೊಳಿಸಿ 20 ಲಕ್ಷ ಕೋಟಿ ರೂ. ಪ್ಯಾಕೇಜ್‌ ನೆರವಾಗಲಿದೆ. ಭಾರತವು ದಣಿಯುವುದಿಲ್ಲ. ಅಥವಾ ಕೈ ಚೆಲ್ಲುವುದಿಲ್ಲ. ನಾವು ನಮ್ಮನ್ನು ರಕ್ಷಿಸಿಕೊಳ್ಳಬೇಕು, ಮುಂದಕ್ಕೂ ಸಾಗಬೇಕು ಎಂಬ ಪ್ರಧಾನಿ ಮೋದಿಯವರ ಮಾತುಗಳು ದೇಶದ ಜನರಲ್ಲಿ ಹೊಸ ಉತ್ಸಾಹವನ್ನು ತಂದಿದೆ ಎಂದು ಹೇಳಿದರು.

ದೂರದೃಷ್ಟಿಯ ಕ್ರಮ: ಕೇಂದ್ರ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಪ್ರಕಟಿಸಿರುವ ಆರ್ಥಿಕ ಪ್ಯಾಕೇಜ್‌ಗಳು ದೇಶದ ಅರ್ಥ ವ್ಯವಸ್ಥೆಗೆ ಬಲ ತುಂಬುವ ದೂರ ದೃಷ್ಟಿಯ ಕ್ರಮವಾಗಿದೆ. ತುರ್ತು ಆರೋಗ್ಯ ನಿಧಿಗೆ 15 ಸಾವಿರ  ಕೋಟಿ ರೂ., ಅತಿ ಸಣ್ಣ ಉದ್ಯಮಕ್ಕೆ 3 ಲಕ್ಷ ಕೋಟಿ ರೂ., ವಿದ್ಯುತ್‌ ಸರಬರಾಜು ಕಂಪನಿ ಗಳಿಗೆ 90 ಸಾವಿರ ಕೋಟಿ ರೂ. ಸಹಾಯ ಧನ ಮತ್ತಿತರ ಘೋಷಣೆಗಳು ಇಂದಿನ ಸಂಕಷ್ಟ ಸಮಯಕ್ಕೆ ಸಂಜೀವಿನಿ ನೀಡಿದಂತಾಗಿದೆ ಎಂದರು.

ಕೊರೊನಾ ಪರಿಣಾಮವಾಗಿ ಸಂಕಷ್ಟ ಸ್ಥಿತಿಯಲ್ಲಿರುವ ದೇಶವಾಸಿಗಳಿಗೆ ನೆರ ವಾಗಲು ಪ್ರಧಾನಿಯವರು ತೆಗೆದುಕೊಂಡಿ ರುವ ನಿರ್ಧಾರಗಳನ್ನು ಜಿಲ್ಲಾ ಬಿಜೆಪಿಯು ಅಭಿನಂದಿಸಲಿದೆ ಎಂದ ಅವರು, ಈ ಪ್ಯಾಕೇಜ್‌ನ ವಿವರಗಳನ್ನು  ಜನರಿಗೆ ತಲುಪಿಸುವ ಕಾರ್ಯವನ್ನು ಬಿಜೆಪಿ ಕಾರ್ಯಕರ್ತರು ಮಾಡಬೇಕು ಎಂದು ಮನವಿ ಮಾಡಿದರು. ಪಕ್ಷದ ಹಿರಿಯ ಮುಖಂಡ ನವಿಲೆ ಅಣ್ಣಪ್ಪ, ವಿಧಾನ ಪರಿಷತ್‌ ಮಾಜಿ ಸದಸ್ಯ ಬಿ.ಆರ್‌. ಗುರುದೇವ್‌ ಸುದ್ದಿಗೋಷ್ಠಿ ಯಲ್ಲಿ ಉಪಸ್ಥಿತರಿದ್ದರು.

ಅಂತರ್‌ ಜಿಲ್ಲಾ ಪಾಸ್‌ ಗೊಂದಲ ನಿವಾರಣೆ ಲಾಕ್‌ಡೌನ್‌ ಸಡಿಲಗೊಳಿಸಿದ ನಂತರ ಅಂತರ್‌ ಜಿಲ್ಲಾ ಸಂಚಾರಕ್ಕೆ ನೀಡಿರುವ ಪಾಸ್‌ನಲ್ಲಿರುವ ಗೊಂದಲ ನಿವಾರಣೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ಜನರಿಗೆ ತೊಂದರೆ ಯಾಗದಂತೆ ವ್ಯವಸ್ಥೆ ಮಾಡಲಾಗು ವುದು. ವಿದ್ಯುತ್ಛಕ್ತಿ ಬಿಲ್‌ನಲ್ಲಿನ ದೋಷಗಳು ಮುಖ್ಯಮಂತ್ರಿಯವರ ಗಮನಕ್ಕೆ ಬಂದಿದ್ದು, ಒಂದೆರೆಡು ದಿನಗಳಲ್ಲಿಯೇ ಮುಖ್ಯಮಂತ್ರಿ ಯವರು ಪರಿಹಾರ ಕ್ರಮಗಳನ್ನು ಘೋಷಣೆ ಮಾಡಲಿದ್ದಾರೆ  ಎಂದು ಎಂದು ಬಿಜೆಪಿ ಮುಖಂಡರು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.