ಗೃಹ ಸಚಿವರ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ


Team Udayavani, May 7, 2019, 2:10 PM IST

hasan-tdy-1..

ರಾಜ್ಯದ ಗೃಹ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಯವರ ಮೂಲಕ ಮನವಿ ಸಲ್ಲಿಸಿದರು

ಹಾಸನ: ರಾಜ್ಯ ಸರ್ಕಾರದ ಗೃಹ ಸಚಿವರು ದಬ್ಟಾಳಿಕೆ ಮಾಡುತ್ತಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯಹರಣ ಮಾಡು ವುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಕಪ್ಪುಪಟ್ಟಿ ಧರಿಸಿ ಮೌನ ಮೆರವಣಿಗೆ ಹೊರಟ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಜ್ಯಪಾಲರಿಗೆ ರಾಜ್ಯದ ಸಮ್ಮಿಶ್ರ ಸರ್ಕಾರವು ಕಳೆದ ಕೆಲವು ತಿಂಗಳಿನಿಂದ ಮಾಧ್ಯಮ ಪ್ರತಿನಿಧಿಗಳು ಹಾಗೂ ವಿರೋಧ ಪಕ್ಷದವರನ್ನು ಹತ್ತಿಕ್ಕುವ ಕ್ರಮಗಳನ್ನು ಕೈಗೆತ್ತಿಕೊಳ್ಳುತ್ತಿದೆ. ದಬ್ಟಾಳಿಕೆ ಮತ್ತು ಸೇಡಿನ ಪ್ರಕರಣಗಳು ನಡೆದ ಸಂದರ್ಭದಲ್ಲಿ ಬಿಜೆಪಿಯಿಂದ ದೂರು ನೀಡಿದರೂ ಸರ್ಕಾರ ಈ ವರೆಗೂ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಪಕ್ಷಪಾತ ಧೋರಣೆ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವಂತೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದರು. ಕೆ.ಆರ್‌.ಪೇಟೆ ಜೆಡಿಎಸ್‌ ಶಾಸಕ ನಾರಾಯಣಗೌಡ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಪರ ಪ್ರಚಾರ ನಡೆಸುತ್ತಿದ್ದ ಚಿತ್ರ ನಟರಾದ ಯಶ್‌ ಮತ್ತು ದರ್ಶನ್‌ ಅವರಿಗೆ ನೇರವಾಗಿ ಬೆದರಿಕೆ ಹಾಕಿದ್ದರು. ಈ ಎರಡು ಪ್ರಕರಣಗಳು ಜನರ ನಡುವೆ ದ್ವೇಷದ ವಾತಾವರಣ ಮೂಡಿಸಿ ಸಾಮಾಜಿಕ ಸಾಮರಸ್ಯ ಕೆಡಿಸುವಂತಹ ಅಪಾಯಗಳಿದ್ದರೂ ಈ ಬಗ್ಗೆ ಕ್ರಮಕೈಗೊಳ್ಳದ ರಾಜ್ಯ ಸರ್ಕಾರ ಪಕ್ಷಪಾತಿ ಧೋರಣೆ ಪ್ರದರ್ಶಿಸಿದೆ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪತ್ರಕರ್ತರನ್ನು ಜೈಲಿಗೆ ಕಳುಹಿಸಿದ ಸರ್ಕಾರ: ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿದ ಕಾರಣಕ್ಕೆ ಬಿಜೆಪಿ ಹಿತೈಷಿಗಳು ಮತ್ತು ಹಿರಿಯ ಪತ್ರಕರ್ತರನ್ನು ಕಾರಾಗೃಹಕ್ಕೆ ಕಳುಹಿಸಲು ಸ್ವತಃ ರಾಜ್ಯದ ಗೃಹ ಸಚಿವರೇ ವಿಶೇಷ ಆಸಕ್ತಿ ವಹಿಸಿದ್ದರು. ಮಹೇಶ್‌ ವಿಕ್ರಂ ಹೆಗಡೆ, ಶ್ರುತಿ ಬೆಳ್ಳಕ್ಕಿ, ಶಾರದ ಡೈಮಂಡ್‌, ಹೇಮಂತ್‌ ಕುಮಾರ್‌ ಮತ್ತು ಅಜಿತ್‌ ಶೆಟ್ಟಿ ಹೇರಂಜಿ ಮೇಲೆ ನಿರಾಧಾರವಾದ ಪ್ರಕರಣ ಗಳನ್ನು ದಾಖಲಿಸಿ ಮಾನಸಿಕ ಕಿರುಕುಳ ನೀಡಲಾಗಿದೆ. ಇವರೆಲ್ಲರೂ ಬಿಜೆಪಿ ಮೇಲೆ ಅಭಿಮಾನ ಹೊಂದಿದ ವರು ಎಂದ ಕಾರಣಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಿ ಅವರ ವಿರುದ್ಧ ಸೇಡಿನ ಕ್ರಮ ಜರುಗಿಸಲಾಗಿದೆ ಎಂದರು.

ಲಿಂಗಾಯತ ಧರ್ಮ ವಿವಾದ: ಗೃಹ ಸಚಿವ ಎಂ.ಬಿ. ಪಾಟೀಲ್ ಅವರು ಲಿಂಗಾಯತ ಧರ್ಮ ವಿಭಜನೆ ಆಗಬೇಕೆಂದು ಸೋನಿಯಾಗಾಂಧಿಯವರಿಗೆ ಬರೆದಿ ದ್ದಾರೆ ಎನ್ನಲಾದ ಪತ್ರವನ್ನು ಹೇಮಂತ್‌ ಕುಮಾರ್‌ ಅವರು ಸಾಮಾಜಿಕ ಜಾಲತಾಣಗಳಲ್ಲಿ ಕಳುಹಿಸಿದ ಕಾರಣಕ್ಕೆ ಬಂಧಿತರಾಗಿದ್ದಾರೆ. ಬಿಜೆಪಿ ಬಗ್ಗೆ ಒಲವು ತೋರಿರುವುದೇ ಅಪರಾಧ ಎನ್ನುವಂತೆ ಈ ಪ್ರಕರಣ ದಲ್ಲಿ ಸ್ವತಃ ಗೃಹ ಮಂತ್ರಿಗಳು ವಿಶೇಷ ಆಸಕ್ತಿ ತೋರಿ ದ್ದಾರೆ. ಲಿಂಗಾಯತ ಧರ್ಮ ವಿಭಜನೆ ಯತ್ನದಲ್ಲಿ ಎಂ.ಬಿ.ಪಾಟೀಲ್ ಅವರು ಶಾಮಿಲಾಗಿದ್ದರು. ಆದರೇ ಅವರೇ ಈಗ ಇತರರು ವಿರುದ್ಧ ಕ್ರಮಕ್ಕೆ ಪೊಲೀಸ್‌ ದುರ್ಬಳಕೆ ಮಾಡುತ್ತಿದ್ದಾರೆ.

ಕೆಲ ಪ್ರಕರಣಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್‌ 307ರ ಅನ್ವಯ ಪ್ರಕಣ ದಾಖಲಾಗಿದ್ದರೂ ಕೇವಲ ಬಿಜೆಪಿ ಕಾರ್ಯಕರ್ತರನ್ನು, ಬಿಜೆಪಿ ಅಭಿಮಾನಿಗಳನ್ನು ಬಂಧಿಸಲಾಗಿದೆ ಎಂದರು.

ರಾಜ್ಯಪಾಲರಿಗೆ ಮನವಿ: ಇಷ್ಟೆಲ್ಲಾ ಘಟನೆಗಳು ನಡೆದರೂ ಮುಖ್ಯಮಂತ್ರಿ ಮೌನಕ್ಕೆ ಶರಣ ರಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲ್ಲರ ಹಕ್ಕು, ಸ್ವಾತಂತ್ರ್ಯ ವನ್ನು ರಕ್ಷಿಸುವ ಜವಾಬ್ದಾರಿಯನ್ನು ನಿಭಾಯಿಸುವಂತೆ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಬೇಕೆಂದು ಹಾಗೂ ರಾಜಕೀಯ ದ್ವೇಷವನ್ನು ಬದಿಗಿಟ್ಟು ಆಡಳಿತ ನಡೆಸಲು ಸರ್ಕಾರಕ್ಕೆ ಸೂಚಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ನವಿಲೆ ಅಣ್ಣಪ್ಪ, ರಾಜ್ಯ ರೈತ ಮೋರ್ಚಾದ ರೇಣುಕುಮಾರ್‌, ಬಿಜೆಪಿ ರಾಜ್ಯ ಮಹಿಳಾ ಘಟಕದ ಪದಾಧಿಕಾರಿ ಸುಶೀಲಾ, ರತ್ನ, ಮುಖಂಡರಾದ ಹುಲ್ಲಸುರೇಶ್‌, ಶ್ರೀನಿವಾಸ್‌ ಗೌಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.