ಜೆಡಿಎಸ್ ಭದ್ರ ಕೋಟೆಗೆ ಮಂಜೇಗೌಡ ಎಂಟ್ರಿ; ಬೆಂಬಲಿಗರಿಗೆ ಬಾಡೂಟ!
Team Udayavani, Mar 24, 2018, 9:20 AM IST
ಹೊಳೆನರಸೀಪುರ: ಜೆಡಿಎಸ್ನ ಭದ್ರ ಕೋಟೆ ಎನಿಸಿಕೊಂಡಿರುವ ಎಚ್.ಡಿ.ರೇವಣ್ಣ ಅವರು ಪ್ರತಿನಿಧಿಸುತ್ತಿರುವ ಹಾಸನ ದ ಹೊಳೆನರಸೀಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಭ್ಯಾವ್ಯ ಅಭ್ಯರ್ಥಿ ಮಂಜೇಗೌಡ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಗೂರು ಮಂಜೇಗೌಡ ಅವರು ರಾಜಕೀಯ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದು ಶುಕ್ರವಾರ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಮತದಾರರಿರಗೆ ಭರ್ಜರಿ ಬಾಡೂಟ ಉಣಬಡಿಸಿದ್ದಾರೆ.
ಭರ್ಜರಿ ಮಾಂಸದೂಟವನ್ನು ನೀಡುವ ಮೂಲಕ ಸಾವಿರಾರು ಕಾರ್ಯಕರ್ತರು ಮತ್ತು ಮತದಾರರಿಗೆ ಹತ್ತಿರವಾಗುವ ಯತ್ನ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಸೂಚನೆ ಮತ್ತು ಟಿಕೆಟ್ ಖಾತ್ರಿಯ ಮೇರೆಗೆ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕೀಯ ಕ್ಷೇತ್ರಕ್ಕೆ ಮಂಜೇಗೌಡ ಪ್ರವೇಶಗೈದಿದ್ದಾರೆ. ಕ್ಷೇತ್ರಾದ್ಯಂತ ಹಲವು ಕಾಂಗ್ರೆಸ್ ಕಾರ್ಯಕರ್ತರೊಡಣೆ ಸರಣಿ ಸಭೆಗಳನ್ನು ನಡೆಸುತ್ತಿದ್ದು ಕಾರ್ಯತಂತ್ರವನ್ನೂ ರೂಪಿಸುತ್ತಿದ್ದಾರೆ.
ಮಂಜೇಗೌಡ ಸ್ಪರ್ಧೆಯಿಂದ ಕ್ಷೇತ್ರ ಹೈವೋಲ್ಟೆಜ್ ಕದನಕ್ಕೆ ಸಾಕ್ಷಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ರೇವಣ್ಣ ಅವರಿಗೆ ಸೆಡ್ಡು ಹೊಡೆಯಲು ರಣತಂತ್ರ ರೂಪಿಸಿದ್ದಾರೆ.
ಕೆಲ ದಿನಗಳ ಹಿಂದೆ ಮಂಜೇಗೌಡ ಅವರಿಗೆ ದೂರವಾಣಿ ಕರೆ ಮಾಡಿದ್ದ ಸಿಎಂ ಸಿದ್ದರಾಮಯ್ಯ ಸರ್ಕಾರಿ ಕೆಲಸಕ್ಕೆ ತಕ್ಷಣ ರಾಜೀನಾಮೆ ನೀಡಿ ಹೊಳೆನರಸೀಪುರ ಕ್ಷೇತ್ರದಲ್ಲಿ ಎಚ್.ಡಿ.ರೇವಣ್ಣ ಎದುರು ಚುನಾವಣೆಗೆ ನಿಲ್ಲುವಂತೆ ಸೂಚಿಸಿದ್ದರು. ಗೌಡ್ರ ಮಕ್ಕಳು ಗೆದ್ದಿದ್ದು ಸಾಕು, ಈ ಬಾರಿ ಮಂಜೇಗೌಡರನ್ನು ಗೆಲ್ಲಿಸಬೇಕು. ಎಲ್ಲರೂ ಅವರ ಪರ ಕೆಲಸ ಮಾಡಬೇಕು. ತಕ್ಷಣ ನೀನು ರಾಜೀನಾಮೆ ನೀಡಿ ಕ್ಷೇತ್ರಕ್ಕೆ ತೆರಳಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಆ ಆಡಿಯೋ ವೈರಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ