ಬೂಕನಬೆಟ್ಟದ ರಂಗನಾಥಸ್ವಾಮಿ ವೈಭವದ ಬ್ರಹ್ಮರಥೋತ್ಸವ


Team Udayavani, Jan 20, 2020, 3:00 AM IST

bookanakayte

ಚನ್ನರಾಯಪಟ್ಟಣ/ಹಿರೀಸಾವೆ: ತಾಲೂಕಿನ ಹಿರೀಸಾವೆ ಹೋಬಳಿಯ ಇತಿಹಾಸ ಪ್ರಸಿದ್ಧ ಬೂಕನಬೆಟ್ಟದಲ್ಲಿ ರಂಗನಾಥಸ್ವಾಮಿಯ 89ನೇ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

ಬೆಳಗ್ಗೆ ಬೆಟ್ಟದ ಮೇಲಿರುವ ವಿಗ್ರಹಕ್ಕೆ ಜಲಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ಪುಷ್ಪಾರ್ಚನೆ ಮಾಡಲಾಯಿತು ಇದಾದ ಬಳಿಕ ವಿವಿಧ ಪುಷ್ಪ ಹಾಗೂ ಒಡವೆಗಳಿಂದ ಅಲಂಕಾರ ನೆರವೇರಿಸಿ ಪೂಜಾ ಕೈಂಕರ್ಯಗಳು ನೆರವೇರಿದವು, ನಂತರ ರಂಗನಾಥಸ್ವಾಮಿ ಉತ್ಸವ ಮೂರ್ತಿಯನ್ನು ಅಲಂಕರಿಸಿದ್ದು, ಅಡ್ಡಪಲ್ಲಕ್ಕಿಯಲ್ಲಿ ಮಂಗಳವಾದ್ಯದೊಂದಿಗೆ ಬೆಟ್ಟದ ಮೇಲಿಂದ ಉತ್ಸವದಲ್ಲಿ ಕರೆತಂದು ವಿವಿಧ ಪುಷ್ಪಗಳಿಂದ ಸಿಂಗರಿಸಲಾಗಿದ್ದ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.

ಬಳಿಕ ವೇದಿಕೆಯಲ್ಲಿ ಧಾರ್ಮಿಕ ಸಮಾರಂಭ ಜರುಗಿತು ಶಾಸಕ ಸಿ.ಎನ್‌.ಬಾಲಕೃಷ್ಣ ಮಾತನಾಡಿ, ಭಕ್ತಿ, ಬಾವ ಹಾಗೂ ಧಾರ್ಮಿಕ ಆಚರಣೆಯಿಂದಲೇ ನಮ್ಮ ಸಂಸ್ಕೃತಿಯು ಹಿರಿಮೆ ಹೊಂದಿದೆ, ಇಂತಹ ದೈವ ಸೇವೆಗಳು ನಿರಂತರವಾಗಿ ಪ್ರತಿ ಗ್ರಾಮದಲ್ಲಿ ನಡೆಯುತ್ತಿರಬೇಕು ಎಂದು ಹೇಳಿದರು.

ಅಂತರ್ಜಲ ವೃದ್ಧಿ: ತಾಲೂಕಿನಲ್ಲಿ ಕಳೆದ ವರ್ಷ ತೀವ್ರ ಬರಗಾಲ ಕಾಣಿಸಿಕೊಂಡಿತ್ತು, ಆದರೆ ಪ್ರಸಕ್ತ ವರ್ಷ ವಾಡಿಕೆಯಂತೆ ಮಳೆಯಾಗಿದ್ದು, ರೈತರಿಗೆ ನಿರೀಕ್ಷೆಯಂತೆ ಉತ್ತಮ ಬೆಳೆ ಸಿಕ್ಕಿದೆ, ಏತನೀರಾವರಿ ಯೋಜನೆಯಡಿ ತಾಲೂಕಿನ ಸುಮಾರು ಹತ್ತಾರು ಕೆರೆ ಕಟ್ಟೆಗಳನ್ನು ತುಂಬಿಸಲಾಗಿದೆ ಇದರಿಂದ ನೂರಾರು ಗ್ರಾಮಗಳಿಗೆ ಅನುಕೂಲವಾಗಿದ್ದು, ಅಂತರ್ಜಲ ವೃದ್ಧಿಯಾಗುತ್ತಿದೆ ಎಂದರು.

ಚನ್ನರಾಯಪಟ್ಟಣ ಹಾಗೂ ಹಿರೀಸಾವೆ ವ್ಯಾಪ್ತಿಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್‌.ಜಿ.ರಾಮಕೃಷ್ಣ, ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷ ತೋಟಿ ಜಯರಾಂ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಅಮಾಸೇಗೌಡ, ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಉಪಾಧ್ಯಕ್ಷ ಬಿ.ಸಿ.ಬೊಮ್ಮೇಗೌಡ, ದೇಗುಲದ ಪಾರುಪತ್ತೇದಾರ ರಂಗರಾಜ್‌, ಬೂಕ ಹಾಗೂ ಸುತ್ತಮುತ್ತಲ ಹತ್ತಾರು ಗ್ರಾಮದಿಂದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ರಥಕ್ಕೆ ದವನ, ಬಾಳೆಹಣ್ಣು ಎಸೆದ ಭಕ್ತರು: ಮಧ್ಯಾಹ್ನ 12 ಗಂಟೆಯ ಶುಭ ಮೇಷಲಗ್ನ ಮುಹೂರ್ತದಲ್ಲಿ ಶಾಸಕ ಸಿ.ಎನ್‌.ಬಾಲಕೃಷ್ಣ ಬ್ರಹ್ಮರಥಕ್ಕೆ ವಿಶೇಷ ಪೂಜೆ ಸಲ್ಲಿಸಿ ಉತ್ಸವಕ್ಕೆ ಚಾಲನೆ ನೀಡಿದರು. ತಕ್ಷಣ ಸಹಸ್ರಾರು ಭಕ್ತರು ಗೋವಿಂದ ನಾಮಸ್ಮರಣೆಯೊಂದಿಗೆ ರಥವನ್ನು ಎಳೆದರು. ನೆರೆದಿದ್ದ ಭಕ್ತರು ಗೋವಿಂದ ಗೋವಿಂದ ಎಂಬ ಸ್ಮರಣೆಯೊಂದಿಗೆ ಭಕ್ತಿಬಾವದಲ್ಲಿ ತೇಲಿದರು. ರಥ ಸಾಗಿದಂತೆಲ್ಲಾ ಭಕ್ತರು ಬಾಳೆಹಣ್ಣು-ದವನ, ಹೂವು-ತುಳಸಿಪತ್ರೆಯನ್ನು ರಥಕ್ಕೆ ಎಸೆದು, ಕರ್ಪೂರ ಬೆಳಗಿ ಹರಕೆ ಸಲ್ಲಿಸಿದರು.

ಧಾರ್ಮಿಕ ಕಾರ್ಯಕ್ರಮ ಅಗತ್ಯ: ಶಾಸಕ ಸಿ.ಎನ್‌.ಬಾಲಕೃಷ್ಣ ಮಾತನಾಡಿ, ಸನಾತನ ಧರ್ಮ ಉಳಿಯಬೇಕೆಂದರೆ ಹಿಂದೂ ಧರ್ಮದ ಆಚರಣೆಗಳು, ಜಾತ್ರೆಗಳು, ದೇವರ ಪೂಜೆ, ಗ್ರಾಮ ದೇವತೆ ಹಬ್ಬಗಳು ನಡೆಯಬೇಕು. ಸನಾತನ ಆಚರಣೆಗೆ ವಿಶ್ವದಲ್ಲಿ ಬಹಳ ಪ್ರಸಿದ್ಧಿ ಹೊಂದಿದ್ದು, ವಿದೇಶಿಗರೂ ನಮ್ಮ ಧರ್ಮವನ್ನು ಆಚರಣೆ ಮಾಡುತ್ತಿದ್ದಾರೆ. ಆದರೆ ನಮ್ಮ ನೆಲದಲ್ಲಿಯೇ ಇದನ್ನು ವಿರೋಧಿಸುವ ಅನೇಕ ಮಂದಿ ಇದ್ದಾರೆ. ಅವರಿಗೆ ಆ ದೇವರೇ ತಕ್ಕ ಪಾಠ ಕಲಿಸುತ್ತಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.