ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಯಾವಾಗ?
Team Udayavani, Oct 13, 2021, 6:19 PM IST
ಆಲೂರು: ತಾಲೂಕಿನ ವ್ಯಾಪ್ತಿಗೆ ಬರುವ ಸುಮಾರು 35ಕ್ಕೂ ಹೆಚ್ಚು ಕೊಳವೆ ಬಾವಿಗಳು ಸುಮಾರು ನಾಲ್ಕೈದು ವರ್ಷಗಳ ಹಿಂದೆ ಕೊರೆಯ ಲಾಗಿದೆ. ಆದರೆ ಇದುವರೆಗೂ ಅವು ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಆಗಿಲ್ಲ ಎಂದು ಗುತ್ತಿಗೆದಾರ ಹಾಗೂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೇಮಾವತಿ ಪುನರ್ವಸತಿ ನಿಗಮ ಸೇರಿದಂತೆ ವಿವಿಧ ಇಲಾಖೆಗಳಿಂದ ಸುಮಾರು 35ಕ್ಕೂ ಹೆಚ್ಚು ಕೊಳವೆ ಬಾವಿ ಗಳನ್ನು ನಿರ್ಮಿಸಲಾಗಿದ್ದು, ಸಾರ್ವ ಜನಿಕರ ಬಳಕೆಗೆ ಅನುಕೂಲ ಮಾಡಿ ಕೊಡುವ ಬದಲು ಇದ್ದ ಕೊಳವೆ ಬಾವಿ ಗಳನ್ನು ನನೆಗುದಿಗೆ ಬೀಳುವಂತೆ ಅಧಿಕಾರಿಗಳು ಮಾಡಿರುವುದು ಗ್ರಾಮ ಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಅನುಕೂಲಕ್ಕಾಗಿ ಎಸಿಇಪಿ ಯೋಜನೆ ಅಡಿ ಕೊಳವೆ ಬಾವಿ ನಿರ್ಮಿಸಲಾಗಿತ್ತು.
ಇದನ್ನೂ ಓದಿ;- ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಅರುಣ ಗೌಡ
ಅದಕ್ಕೆ ಮೋಟಾರ್ ಅಳವಡಿಸಲಾಗಿದೆ ಆದರೆ ಬಳಕೆಗೆ ಆಗಬೇಕಿದ್ದ ಕೊಳವೆ ಬಾವಿ ಬಳಕೆಗೆ ಬಾರದೆ ತುಕ್ಕು ಹಿಡಿಯು ತ್ತಿದೆ ಸಾವಿರಾರು ರೂ.ಬೆಲೆ ಹೊಂದಿ ರುವ ಮೋಟರ್ ಅಳವಡಿಸಿದ್ದು, ವಿದ್ಯುತ್ ಸಂಪರ್ಕವಿಲ್ಲದ ಕಾರಣ ಪ್ರಯೋಜನಕ್ಕೆ ಬಾರದಂತಾಗಿದೆ. ಕೊಳವೆಬಾವಿಗಳನ್ನು ಅವಲಂಬಿಸಿ ಬದುಕುತ್ತಿರುವ ಅಲ್ಲಿನ ಕೃಷಿಕರು ಕಾμ ಮೆಣಸು ಸೇರಿದಂತೆ ಅನೇಕ ಕೃಷಿ ಜಮೀನಿಗೆ ನೀರಿಲ್ಲದೆ ಪರದಾಡು ವಂತಾಗಿದೆ. ವಿದ್ಯುತ್ ಸಂಪರ್ಕಕ್ಕಾಗಿ ರೈತರು ಕಾದು ಕುಳಿತಿದ್ದಾರೆ. ಅಧಿಕಾರಿ ಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು.
ಈ ಬಗ್ಗೆ ಕೂಡಲೇ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಸ್ಥಳೀಯ ರೈತರು ಆಗ್ರಹಿಸಿದ್ದಾರೆ. ಬಹುತೇಕ ಬಡ ರೈತ ಕುಟುಂಬಗಳಿಗೆ ಈ ರೀತಿ ಅನ್ಯಾಯವಾಗುತ್ತಿದೆ ಅಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ಬಡವರಿಗೆ ಬಗ್ಗೆ ನಿರ್ಲಕ್ಷ್ಯ ಏಕೆ ಎಂಬುದು ಅವರ ಪ್ರಶ್ನೆಯಾಗಿದೆ. ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಇಲ್ಲ ವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದು ಎಂದು ರೈತರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
BJP ಸ್ಥಳೀಯ ಮುಖಂಡರ ಅಸಹಕಾರ: ಬಿಎಸ್ವೈ ಬಳಿ ರಕ್ಷಣೆಗೆ ಮೊರೆಯಿಟ್ಟ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ