ಬಿಎಸ್‌ವೈಗೆ ರಿಪೇರಿ ಮಾಡೋದು ಗೊತ್ತಿದೆ


Team Udayavani, Sep 13, 2019, 12:23 PM IST

hasan-tdy-1

ಹಾಸನ ಡೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಹಾಸನ ಹಾಲು ಒಕ್ಕೂಟದ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ಅಧ್ಯಕ್ಷ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಮಾತನಾಡಿದರು

ಹಾಸನ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ರಿಪೇರಿ ಮಾಡುವುದು ಹೇಗೆ ಎಂಬುದು ನಮಗೆ ಗೊತ್ತು. ದ್ವೇಷದ ರಾಜಕಾರಣವನ್ನು ಅವರು ಎಷ್ಟು ದಿನ ನಡೆಸುತ್ತಾರೋ ನಡೆಸಲಿ ನಾವೂ ನೋಡುತ್ತೇವೆ ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ, ಹಾಸನ ಹಾಲು ಒಕ್ಕೂಟದ ಅಧ್ಯಕ್ಷರೂ ಆದ ಎಚ್.ಡಿ.ರೇವಣ್ಣ ಅವರು ಆಕ್ರೋಶ ವ್ಯಕ್ತಪಡಿಸಿದರು.

ಬೆದರಿಕೆಗೆ ಜಗ್ಗಲ್ಲ: ಹಾಸನ ಡೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಹಾಸನ ಹಾಲು ಒಕ್ಕೂಟದ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೇವಣ್ಣ ಕೆಎಂಎಫ್ ಅಧ್ಯಕ್ಷನಾಗಬಾರದು ಎಂದು ಮುಖ್ಯಮಂತ್ರಿಯಾದ ಕೆಲವೇ ಕ್ಷಣಗಳಲ್ಲಿ ಕೆಎಂಎಫ್ ಅಧ್ಯಕ್ಷರ ಚುನಾವಣೆಯನ್ನೇ ರದ್ದು ಮಾಡಿದ ಯಡಿಯೂರಪ್ಪ ಅವರು ಆಮೇಲೆ ಚುನಾವಣೆ ನಡೆಯುವವರೆಗೂ ಯಾವ್ಯಾವ ಹಾಲು ಕ್ಕೂಟದ ಅದ್ಯಕ್ಷರಿಗೆ ಏನೇನು ಆಮಿಷ ಒಡ್ಡಿದರು ಎಂಬುದು ನಮಗೆ ಗೊತ್ತಿಲ್ಲವೇ? ಕೆಎಂಎಫ್ಗೆ ತಮಗೆ ಬೇಕಾದವರನ್ನು ಎಂಡಿ ಹುದ್ದೆಗೆ ನೇಮಿಸಿಕೊಂಡು ಬೆದರಿಕೆ ಒಡ್ಡಿದರೆ ಅದಕ್ಕೆಲ್ಲಾ ಹೆದರುತ್ತೇನೆಯೇ? ಯಡಿಯೂರಪ್ಪ ಅವರಂಥವರನ್ನು ನಾವು ಎಷ್ಟು ದಿನ ನೋಡಿಲ್ಲ? ದ್ವೇಷದ ರಾಜಕಾರಣವನ್ನು ಹೆಚ್ಚು ದಿನ ನಡೆಯಲ್ಲ ಎಂದು ತಿಳಿದುಕೊಳ್ಳಬೇಕೆಂದರು.

ದೇವೇಗೌಡರ ಕುಟುಂಬವರ ರಾಜಕಾರಣ ಮುಗಿಸಲೇಬೇಕು ಎಂದು ಯಡಿಯೂರಪ್ಪ ದ್ವೇಷದ ರಾಜಕಾರಣಮಾಡುತ್ತಿದ್ದರೆ ನಾವು ಹೆದರಲ್ಲ. ಸವಾಲಾಗಿ ತೆಗೆದುಕೊಳ್ಳತ್ತೇನೆಂದು ಗುಡುಗಿದರು.

ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಂತ್ರಿಯಾಗಿದ್ದ 14 ತಿಂಗಳು ಕೆಎಂಎಫ್ ಅಧ್ಯಕ್ಷ ಸ್ಥಾನ ಖಾಲಿ ಇತ್ತು. ಆದರೆ ನಾನು ಅದಕ್ಕೆ ಆಸೆ ಪಡಲಿಲ್ಲ. ಆದರೆ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲ ಕ್ಷಣಗಳಲ್ಲಿಯೇ ಕೆಎಂಎಫ್ ಕಡತ ತರಿಸಿಕೊಂಡು ದ್ವೇಷದ ರಾಜಕಾರಣ ಆರಂಭಿಸಿದರು ಎದು ಆಪಾದಿಸಿದರು.

ನಾನು ಕೆಎಂಎಫ್ ಅಧ್ಯಕ್ಷ ಸ್ಥಾನದಿಂದ 2008ರಲ್ಲಿ ಇಳಿದ ಬಳಿಕ ಬಿಜೆಪಿ ಸರ್ಕಾರದ ಅಧಿಕಾರವಧಿಯಲ್ಲಿ ಬಳ್ಳಾರಿಯಲ್ಲಿ ಐಸ್‌ಕ್ರೀಂ ಘಟಕ, ಶಿಕಾರಿಪುರದಲ್ಲಿ ಪಶು ಆಹಾರ ಘಟಕ ಹೊರತುಪಡಿಸಿದರೆ ಹೈನು ಉದ್ಯಮದ ಯಾವುದೇ ಹೊಸ ಘಟಕ ಸ್ಥಾಪಿಸಿಲ್ಲ ಎಂದು ದೂರಿದರು.

ಕೆಎಂಎಫ್ ವಹಿವಾಟು ಹೆಚ್ಚಳ: 1995ರಲ್ಲಿ ಕೆಎಂಎಫ್ ವಹಿವಾಟು 600 ಕೋಟಿ ರೂ. ಇತ್ತು. ಕೆಎಂಎಫ್ ಅಧ್ಯಕ್ಷನಾಗಿ ನಾನು ಕೆಎಂಎಫ್ ವಹಿವಾಟು 5 ಸಾವಿರ ಕೋಟಿ ತಲುಪುವಂತೆ ಮಾಡಿದೆ ಎಂದ ಅವರು, ದೇವೇಗೌಡರು ಪ್ರಧಾನಿಯಾಗಿದ್ದಾಗ ಬೆಂಗಳೂರಿನಲ್ಲಿ ಮೆಗಾ ಡೇರಿ ಸ್ಥಾಪಿಸಿದ್ದರಿಂದ ಹೈನೋದ್ಯಮಕ್ಕೆ ಸಾಕಷ್ಟು ಅನುಕೂಲವಾಗಿದೆ ಎಂದು ಹೇಳಿದರು.

ಹಾಸನ ಹಾಲು ಒಕ್ಕೂಟದಿಂದ ಚಿಕ್ಕಮಗಳೂರು ಜಿಲ್ಲೆಯನ್ನು ವಿಭಜಿಸಲು ಮುಂದಾಗಿರುವ ಸರ್ಕಾರದ ನಿರ್ಧಾರದಿಂದ ಹಾಸನ ಹಾಲು ಒಕ್ಕೂಟಕ್ಕೇನೂ ನಷ್ಟವಿಲ್ಲ. ಚಿಕ್ಮಮಗಳೂರು ಒಕೂಟ ಮಾಡಿ ಕೊಳ್ಳುವುದಿದ್ದರೆ ಸಂತೋಷ ಎಲ್ಲಾ ಸಹಕಾರ ನೀಡುವೆ ಎಂದೂ ರೇವಣ್ಣ ಅವರು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಹಾಸನ ಹಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಗೋಪಾಲಯ್ಯ, ವ್ಯವಸ್ಥಾಪಕ ಜಯಪ್ರಕಾಶ್‌, ನಿರ್ದೇಶಕರಾದ ದೊಡ್ಡಬೀಕನಹಳ್ಳಿ ನಾಗರಾಜ್‌, ರಾಮಚಂದ್ರೇಗೌಡ, ನಾರಾಯಣಗೌಡ, ಹೊನ್ನಹಳ್ಳಿ ಸತೀಶ್‌, ಜಗದೀಶ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.