ಅನಾಥೆಯರಿಗೆ ಮನೆ ಕಟ್ಟಿಸಿಕೊಟ್ಟು ಮಾದರಿ

ಗುಡಿಸಲಿನಲ್ಲಿದ್ದ ಅಕ್ಕತಂಗಿಗೆ ಪಂಚಾಯತ್‌ ರಾಜ್‌ ಅಧಿಕಾರಿಗಳು, ನೌಕರರ ಸಂಘದಿಂದ ಸೂರು, ಮೆಚ್ಚುಗೆ

Team Udayavani, Mar 6, 2021, 5:02 PM IST

ಅನಾಥೆಯರಿಗೆ ಮನೆ ಕಟ್ಟಿಸಿಕೊಟ್ಟು ಮಾದರಿ

ಸಕಲೇಶಪುರ: ಕಳೆದ ವರ್ಷ ಸುರಿದ ಭಾರೀ ಮಳೆಗೆ ಇದ್ದ ಗುಡಿಸಲು ಕಳೆದುಕೊಂಡು ಬೀದಿಗೆ ಬಿದ್ದ ಅನಾಥ ಸಹೋದರಿಯರಿಗೆ ಸುಸಜ್ಜಿತ ಮನೆ ನಿರ್ಮಿಸಿಕೊಡುವ ಮೂಲಕ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಅಧಿಕಾರಿಗಳು ಹಾಗೂ ನೌಕರರ ಸಂಘವು ಇತರರಿಗೆ ಮಾದರಿಯಾಗಿದೆ.

ತಾಲೂಕಿನ ಮಳಲಿ ಗ್ರಾಮದ ಚಂದ್ರಕಲಾ, ಅರುಣಾಕ್ಷಿ ಎಂಬ ಅಕ್ಕ ತಂಗಿಯರು ಚಿಕ್ಕ ವಯಸ್ಸಿನಲ್ಲಿಯೇ ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದರು. ಸೂಕ್ತಮನೆಯೂ ಇಲ್ಲದೆ, ಗುಡಿಸಲು ಕಟ್ಟಿಕೊಂಡು ವಾಸವಿದ್ದರು. ಕಳೆದ ವರ್ಷ ಸುರಿದ ಧಾರಾಕಾರ ಮಳೆಗೆ ಗುಡಿಸಲು ಕೂಡ ಸಂಪೂರ್ಣ ಕುಸಿದು ಹೋಗಿತ್ತು. ಅದನ್ನೇ ದುರಸ್ತಿ ಮಾಡಿಕೊಂಡು ಮುರುಕಲು ಗೂಡಿಸಲಿನಲ್ಲೇ ವಾಸವಾಗಿದ್ದರು. ಅಂದು ಸ್ಥಳಕ್ಕೆ ಭೇಟಿ ನೀಡಿದ್ದ ತಾಪಂಇಒ ಹರೀಶ್‌, ಅಕ್ಕ ತಂಗಿಯರ ಅವಸ್ಥೆ ನೋಡಿ ಸರ್ಕಾರ ದಿಂದ ಮನೆ ಮಂಜೂರು ಮಾಡಲು ಯೋಜಿಸಿದರು.

ಆದರೆ, ಗುಡಿಸಲು ಇದ್ದ ಜಾಗವು ತಾಂತ್ರಿಕ ದೋಷ ದಿಂದ ಕೂಡಿತ್ತು. ಹೀಗಾಗಿ, ಸರ್ಕಾರದ ನಿಯಮಾನುಸಾರ ಮನೆ ಮಂಜೂರು ಮಾಡಲು ಸಾಧ್ಯವಿಲ್ಲದ ಕಾರಣ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಸಂಘದಿಂದ ಮನೆ ನಿರ್ಮಿಸಿಕೊಡಲು ಮುಂದಾದರು. ಸ್ವತಃ ಹಣ ಹಾಕುವುದರ ಜೊತೆಗೆ, ತಾಲೂಕಿನ 26 ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ತಾಪಂ ಸಹಾಯಕ ನಿರ್ದೇಶಕರು, ಸಿಬ್ಬಂದಿ, ನರೇಗಾ ಅಭಿಯಂತರರು, ತಾಪಂನ ಕೆಲ ಸದಸ್ಯರಿಂದ ಒಟ್ಟು 3,30,000 ರೂ. ಹಣ ಸಂಗ್ರಹ ಮಾಡಿದ್ದರು. ಮರಳು, ಇಟ್ಟಿಗೆ, ಜಲ್ಲಿಯನ್ನು ಕೆಲವು ಸ್ಥಳೀಯರು ದಾನ ಮಾಡಿದ್ದರು. ಒಟ್ಟು 4.5 ಲಕ್ಷ ರೂ. ವೆಚ್ಚದಲ್ಲಿ 150 23 ಅಡಿ ಜಾಗದಲ್ಲಿ ಪಡಸಾಲೆ, ಅಡುಗೆ ಕೋಣೆ, ಒಂದು ರೂಂ ಒಳಗೊಂಡ ಸುಸಜ್ಜಿತ ಹಂಚಿನ ಮನೆಯನ್ನು ಅನಾಥ ಸಹೋದರಿಯರಿಗೆ 15 ದಿನಗಳಲ್ಲಿ ಕಟ್ಟಿಸಿಕೊಡಲಾಗಿದೆ.

ಬೀಗದ ಕೀ ಹಸ್ತಾಂತರ: ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ್ದ ತಾಪಂ ಹರೀಶ್‌ ಸೇರಿದಂತೆ ತಾಪಂ, ಗ್ರಾಪಂಅಧಿಕಾರಿಗಳು, ಸಂಘದ ಸದಸ್ಯರು, ಹೊಸ ಮನೆಗೆ ತಳಿರು ತೋರಣ ಕಟ್ಟಿ, ಪೆಂಡಾಲ್‌ ಹಾಕಿ, ಊರಿನವರಿಗೆ ಊಟಹಾಕಿಸಿ ಸರಳವಾಗಿ ಗೃಹ ಪ್ರವೇಶ ಮಾಡಿ, ಅಕ್ಕತಂಗಿಯರಿಗೆ ಮನೆಯ ಬೀಗದ ಕೀ ಅನ್ನು ಹಸ್ತಾಂತರಿಸಿದರು.

ಈ ಮೂಲಕ ಸೂರಿಲ್ಲದೆ ಪರದಾಡುತ್ತಿದ್ದ ಅನಾಥ ಅಕ್ಕತಂಗಿಯರ ಬಾಳಿನಲ್ಲಿ ಇದೀಗ ಹೊಸ ಬೆಳಕು ಮೂಡಿದೆ. ತಾಲೂಕಿನ ಕರ್ನಾಟಕ ರಾಜ್ಯ ಗ್ರಾಮೀಣನೌಕರರ ಹಾಗೂ ಪಂಚಾಯತ್‌ ರಾಜ್‌ ಇಲಾಖೆಅಧಿಕಾರಿಗಳು ಹಾಗೂ ನೌಕರರ ಸಂಘ ಸಕಲೇಶಪುರ ಘಟಕದ ಈ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ಪಡಿಸಿದ್ದಾರೆ. ಈ ವೇಳೆ ತಾಪಂ ಸದಸ್ಯರಾದ ಉದಯ್ ಸಿಮೆಂಟ್‌ ಮಂಜು, ಪಿಡಿಒಗಳಾದ ಸುರೇಶ್‌, ವತ್ಸಲಾ ಕುಮಾರಿ, ಬ್ಯಾಕರವಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ವಿಜಯ್‌ಕುಮಾರ್‌ ಉಪಸ್ಥಿತರಿದ್ದರು.

ಗುಡಿಸಲಿನಲ್ಲಿ ನಾವು ವಾಸವಿದ್ದೆವು. ಕಳೆದ ವರ್ಷ ಮಳೆಯಿಂದ ಗುಡಿಸಲು ಸಂಪೂರ್ಣವಾಗಿ ಕುಸಿದು ಹೋಗಿತ್ತು. ಮುಂದೇನೂ ಎಂಬ ಚಿಂತೆ ಆವರಿಸಿತ್ತು. ಪಂಚಾಯತ್‌ ರಾಜ್ಯ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಸಂಘದವರು ನಮಗೆಮನೆ ಕಟ್ಟಿಸಿಕೊಟ್ಟಿದ್ದರಿಂದ ನಮಗೆ ಸ್ವಂತ ನೆಲೆಸಿಕ್ಕಂತೆ ಆಗಿದೆ, ಅವರಿಗೆ ಧನ್ಯವಾದಗಳು.

ಅರುಣಾಕ್ಷಿ, ಅನಾಥೆ.

ಕಳೆದ ವರ್ಷ ಮಳೆಗಾಲದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದವು.ಆಗ ಸರ್ಕಾರದಿಂದ ಅನಾಥೇಯರಿಗೆಮನೆ ನೀಡಲು ಯೋಜಿಸಿದ್ದೆವು. ಆದರೆ, ಜಾಗವು ತಾಂತ್ರಿಕ ದೋಷದಿಂದ ಕೂಡಿದ್ದರಿಂದ ಮನೆ ನೀಡಲುಅವಕಾಶವಿರಲಿಲ್ಲ. ಹೀಗಾಗಿ ತಾಪಂಸಿಬ್ಬಂದಿ ಹಾಗೂ ಕೆಲವು ಸದಸ್ಯರನೆರವಿನಿಂದ ಅನಾಥ ಅಕ್ಕತಂಗಿಯರಿಗೆಮನೆ ಕಟ್ಟಿಸಿಕೊಟ್ಟಿದ್ದೇವೆ. ಈ ಕಾರ್ಯದಲ್ಲಿಸಹಾಯ ಹಸ್ತ ಚಾಚಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಹರೀಶ್‌, ಇಒ, ಸಕಲೇಶಪುರ ತಾಪಂ

ತಾಪಂ ಅಧಿಕಾರಿಗಳು, ಸಿಬ್ಬಂದಿ ಕಾರ್ಯ ಶ್ಲಾಘನೀಯ. ಪ್ರತಿಯೋರ್ವ ಸರ್ಕಾರಿ ನೌಕರರು ಈ ರೀತಿಯ ಸೇವಾ ಮನೋಭಾವ ಅಳವಡಿಸಿಕೊಂಡರೆ ದೇಶ ಅಭಿವೃದ್ಧಿ ಕಾಣುವುದರಲ್ಲಿ ಅನುಮಾನವಿಲ್ಲ. ಕಮಲಾಕ್ಷಿ, ಗ್ರಾಮದ ಮಹಿಳೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.