ಕಟ್ಟಡ ಕಾರ್ಮಿಕರ ಪ್ರತಿಭಟನೆ


Team Udayavani, Dec 13, 2018, 4:05 PM IST

has-1.jpg

ಹಾಸನ: ಕಾರ್ಮಿಕರಿಗೆ ಸೌಲಭ್ಯಗಳನ್ನು ಮಂಜೂರು ಮಾಡುವಲ್ಲಿ ಆಗುತ್ತಿರುವ ವಿಳಂಬ ವಿರೋಧಿಸಿ ಎಐಟಿಯುಸಿ ನೇತೃತ್ವದಲ್ಲಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಅರಳೀಕಟ್ಟೆ ವೃತ್ತದ ಬಳಿ ಇರುವ ಕಾರ್ಮಿಕ ಇಲಾಖೆ ಕಚೇರಿ ಬಳಿ ಕೆಲ ಕಾಲ ಪ್ರತಿಭಟನೆ ನಡೆಸಿದ ಕಾರ್ಮಿಕರು ಸಹ್ಯಾದ್ರಿವೃತ್ತ, ಹೇಮಾವತಿ ಪ್ರತಿಮೆ ಬಳಿ ಮೂಲಕ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಆವರಣಕ್ಕೆ ತೆರಳಿ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಎಐಟಿಯುಸಿ ಹಾಗೂ ಇತರ ಕಟ್ಟಡ ಕಾರ್ಮಿಕ ಸಂಘಟನೆಗಳ ಹೋರಾಟಗಳ ಪರಿಣಾಮ ವಾಗಿ ರಾಜ್ಯ ಸರ್ಕಾರ ಕ್ಷೇಮಾಭಿ ವೃದ್ಧಿ ಮಂಡಳಿಯನ್ನು ರಚಿಸಿದೆ. ರಾಜ್ಯಾದ್ಯಂತ ಲಕ್ಷಾಂತರ ಮಂದಿ ಕಟ್ಟಡ ಕಾರ್ಮಿಕರು
ಅದರ ಪ್ರಯೋಜನ ಪಡೆಯುತ್ತಿದ್ದಾರೆ. ಎಂದರು.

ಇತ್ತೀಚಿನ ದಿನಗಳಲ್ಲಿ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯು ಕಾರ್ಮಿಕರಿಗೆ ಸವಲತ್ತುಗಳನ್ನು ಒದಗಿಸದೇ ಕಟ್ಟಡ ಕಾರ್ಮಿಕರನ್ನು ಕಡೆಗಣಿಸುತ್ತಿವೆ ಎಂದು ಆಪಾದಿಸಿದರು. ಅಪಘಾತ ಪರಿಹಾರವನ್ನು ಮಂಜೂರು ಮಾಡುವಲ್ಲಿ ವೈದ್ಯಕೀಯ ವೆಚ್ಚಗಳನ್ನು ಹಾಗೂ ವಿದ್ಯಾರ್ಥಿ ವೇತನಗಳನ್ನು ಮಂಜೂರು ಮಾಡುವಲ್ಲಿ ವರ್ಷಾನುಗಟ್ಟಲೆ ವಿಳಂಬವಾಗುತ್ತಿದ್ದು, ಫ‌ಲಾನುಭವಿಗಳು ಪರದಾಡುವಂತಾಗಿದೆ ಎಂದು ದೂರಿದರು.

ಭ್ರಷ್ಟಾಚಾರ ನಿಯಂತ್ರಿಸಿ: ಕಾರ್ಮಿಕ ಇಲಾಖೆಯ ಕೆಲವು ನೌಕರರಲ್ಲಿನ ಭ್ರಷ್ಟಾಚಾರ, ಅಸಹನೆಯ ವರ್ತನೆಗಳಿಂದ ಸವಲತ್ತುಗಳು ಕಾರ್ಮಿಕರಿಗೆ ದೊರೆಯಲು ವಿಳಂಬವಾಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಾರ್ಮಿಕ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಕಾರ್ಯ ವೈಖರಿಯನ್ನು ಬದಲಾಯಿ ಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕ ನಿಧಿ ನರೇಗಾಕ್ಕೆ ಬೇಡ: ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ನಿಧಿಯನ್ನು ನರೇಗಾ ಕಾರ್ಮಿಕರಿಗೆ ಬಳಸಕೂಡದು. ಹೃದ್ರೋಗ, ಕಿಡ್ನಿ ಕಸಿ, ಮೂಳೆ ಶಸ್ತ್ರಚಿಕಿತ್ಸೆ,
ಪಿತ್ತಕೋಶದಲ್ಲಿ ಕಲ್ಲು ತೆಗೆಯುವುದು ಮತ್ತಿತತರ ರೋಗಳಿಗೆ ಮಂಡಳಿಯು ನೇರವಾಗಿ ಚಿಕಿತ್ಸಾ ವೆಚ್ಚವನ್ನು ದಾಖಲಾದ ಆಸತ್ರೆಗೆ ಭರಿಸಿಕೊಡಬೇಕು. ಭಾಗ್ಯಲಕ್ಷ್ಮೀ ಬಾಂಡ್‌ ಕೊಡುವುದನ್ನು ನಿಲ್ಲಿಸಿ, ಮದುವೆ ನಿಮಿತ್ತದ ಸಹಾಯಧನವನ್ನು ಫ‌ಲಾನುಭಗಳಿಗೆ ನೇರವಾಗಿ ನೀಡಬೇಕು ಎಂದು ಮನವಿ ಮಾಡಿದರು.

ಅರ್ಜಿಗೆ ಹಿಂಬರಹ ನೀಡಿ: ಕಟ್ಟಡ ಕಾರ್ಮಿಕರ ಸೌಲಭ್ಯಗಳನ್ನು ಕೇಳಿ ಸಲ್ಲಿಸಿದ ಅರ್ಜಿಗಳನ್ನು ಹಿಂಬರಹ ನೀಡದೆ ತಿರಸ್ಕೃತಗೊಳಿಸುತ್ತಿದ್ದು ಅರ್ಜಿದಾರರಿಗೆ ಸೂಕ್ತ
ಮಾಹಿತಿಯನ್ನು ಹಿಂಬರಹದ ಮೂಲಕ ನೀಡಬೇಕು. ಅಲ್ಲದೆ ಆಯಾಯ ತಾಲೂಕು ಕಚೇರಿಗಳಲ್ಲಿ ಅವುಗಳಲ್ಲಿ ಸರಿಪಡಿಸಿ ನಂತರ ಪೂರ್ಣಗೊಂಡ ಅರ್ಜಿಗಳನ್ನು ಮುಂದಕ್ಕೆ ರವಾನಿಸಬೇಕು. ನೋಂದಣಿ ಹಾಗೂ ನವೀಕರಣಕ್ಕೆ ಹಲವು ಕಾರ್ಮಿಕರ ವಂತಿಗೆಯನ್ನು ಒಂದೆ ಚಲನ್‌ನಲ್ಲಿ ತುಂಬಲು ಸಂಘಟನೆಗಳಿಗೆ ಅವಕಾಶ ನೀಡಬೇಕು.

ಏಕೆಂದರೆ ಬ್ಯಾಂಕ್‌ಗಳಲ್ಲಿ ಬಿಡಿ ಬಿಡಿಯಾಗಿ ಚಲನ್‌ಗಳನ್ನು ಕಟ್ಟಿಸಿಕೊಳ್ಳದೆ ಸತಾಯಿಸಲಾಗುತ್ತಿದೆ. ಫ‌ಲಾನುಭಗಳಿಗೆ ಸಕಾಲ ಯೋಜನೆಯಡಿ ನಿಗದಿತ ಸಮಯ ದೊಳಗೆ ಕಾರ್ಡ್‌ಗಳನ್ನು ವಿತರಿಸಬೇಕೆಂದು ಒತ್ತಾಯಿಸಿದರು. ಎಐಟಿಯುಸಿ ಮುಖಂಡ ಎಂ.ಸಿ. ಡೋಂಗ್ರೆ, ಮಲೆನಾಡು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್‌.ಸ್ವಾಮಿ, ರಾಜ್ಯ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಮಂಜೇಗೌಡ, ಜೈಮಾರುತಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಸಂಘದ ರಾಜಣ್ಣ, ಹಾಸನಾಂಬಾ ಸಂಘದ ಶಶಿಧರ, ಕಾಳಿಕಾಂಬ ಕಾರ್ಮಿಕರ ಸಂಘದ ಅಧ್ಯಕ್ಷ ಗಣೇಶ್‌ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕಾರ್ಮಿಕರಿಗೆ ಗುರುತಿನ ಚೀಟಿ ನೀಡಿ
ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳ ಅಡಿಯಲ್ಲಿ ನಿವೇಶನ ಮತ್ತು ವಾಸಿಸಲು – ಮನೆಗಳನ್ನು ಮಂಜೂರು ಮಾಡಬೇಕು. ನೋಂದಣಿಯಾದ ಕಟ್ಟಡ ಕಾರ್ಮಿಕರಿಗೆ ಗುರುತಿನ ಕೊಡದೇ ವಿಳಂಬ ನೀತಿಯನ್ನು ಅನುಸರಿಸಲಾಗುತ್ತಿದೆ. ಮಹಿಳಾ ಕಟ್ಟಡ ಕಾರ್ಮಿಕರಿಗೆ ನೋಂದಣಿಯಾಗಿ ಮೂರು ವರ್ಷ ಕಳೆದರೂ ಹೆರಿಗೆ ಧನ ಸಹಾಯ ಮಂಜೂರಾಗಿಲ್ಲ. ಇದನ್ನು ಪರಿಶೀಲಿಸಿ ತಕ್ಷಣ ಮಂಜೂರು ಮಾಡಬೇಕು. ಕಾರ್ಮಿಕರು ನೋಂದಣಿಯಾಗಿ 11 ವರ್ಷ ಕಳೆದರೂ ಸಹ ಅವರಿಗೆ ಕೆಲಸದ ಸಾಮಗ್ರಿಗಳನ್ನು ತೆಗೆದುಕೊಳ್ಳಲು ಸಹಾಯಧನ ನೀಡಿಲ್ಲ ಎಂದು ದೂರಿದರು. ಈ ಮೊದಲು ಜಿಲ್ಲಾ ಕೇಂದ್ರದಲ್ಲಿ ನೋಂದಣಿಯಾಗಿರುವ ಫ‌ಲಾನುಭವಿಗಳ ಮೂಲ ದಾಖಲೆಗಳನ್ನು ಆಯಾಯ ತಾಲೂಕು ವೃತ್ತಗಳಿಗೆ ವರ್ಗಾಯಿಸಬೇಕು. ತಾಲೂಕು ವೃತ್ತಗಳಲ್ಲಿ ಖಾಲಿ ಇರುವ ಕಾರ್ಮಿಕ ನಿರೀಕ್ಷಕ ಹುದ್ದೆಗಳನ್ನು ಭರ್ತಿ ಮಾಡಿ ಕಾಯಂ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.